Advertisement

Tag: DR. Vinathe Sharma

ಸಾಮರಸ್ಯವೇ ಇಲ್ಲಿ ಸಲ್ಲುವುದು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಮುಂದಿನ ದಿನಗಳಲ್ಲಿ ಬಹಳಷ್ಟು ಬದಲಾವಣೆಗಳು ಬರಲಿವೆ. ಬಹುಸೂಕ್ಷ್ಮವಾಗಿ ಅವಲೋಕಿಸಿದರೆ ದಾಳಿಗೀಡಾದ ಧರ್ಮದ ಜನಸಮುದಾಯದ ದನಿಗೆ ಈಗಾಗಲೇ ಒಂದು ನಿರ್ದಿಷ್ಟ ಬಲ ಬಂದಿದೆ. ಇದು ಮತ್ತಷ್ಟು ಬೆಳೆಯುವ ಸೂಚನೆಗಳಿವೆ. ದೂರದ ಅಮೆರಿಕೆಯಲ್ಲಿ ಈ ಜನಸಮುದಾಯವು ಎಲ್ಲಾ ಮಟ್ಟಗಳಲ್ಲೂ ಆಳವಾದ ಪ್ರಭಾವ ಮತ್ತು ಹಿಡಿತವನ್ನು ಹೊಂದಿದೆ. ಮತ್ತೊಂದು ವಸಾಹತುಶಾಹಿ ಸಮಾಜವಾದ ಆಸ್ಟ್ರೇಲಿಯಾದಲ್ಲೂ ಹಾಗಾಗಬಹುದೆ? ದಾಳಿ ನಡೆಸಿದ ಅಪ್ಪ-ಮಗ ಜೋಡಿಯಲ್ಲಿ, ಅಪ್ಪನ ಬಳಿ ಇದ್ದದ್ದು ಭಾರತೀಯ ಪಾಸ್ಪೋರ್ಟ್. ಆತ ಭಾರತದ ಹೈದರಾಬಾದ್ ಮೂಲದವರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ನಿಜ ಆಸ್ಟ್ರೇಲಿಯಾ ಎಂಬ ಪ್ರಶ್ನೆ: ವಿನತೆ ಶರ್ಮಾ ಅಂಕಣ

ನಮಗೆ ಗೊತ್ತಿರುವ ಹೊಸ ಆಸ್ಟ್ರೇಲಿಯಾದ ಉಧ್ಭವ ಮತ್ತು ಬೆಳೆದಿದ್ದು ಅದೆಷ್ಟು ವಿವಾದಗಳನ್ನೊಳಗೊಂಡಿತ್ತು, ಎಂದು ಒತ್ತಿ ಹೇಳುತ್ತದೆ. ಆಸ್ಟ್ರೇಲಿಯಾದ ಬಗ್ಗೆ ಈಗಲೂ ಇರುವ ಸುಳ್ಳುಪೊರೆಗಳನ್ನು ಛೇದಿಸುತ್ತಾ ಕಾರ್ಯಕ್ರಮವು ವೀಕ್ಷಕರ ಮುಂದೆ ಅನೇಕ ಸಾಕ್ಷ್ಯಗಳನ್ನು ಇಡುತ್ತದೆ. ಹಿಂದಿನ ರಾಜಕೀಯ ನಾಯಕರು, ಪ್ರಮುಖ ಸರ್ಕಾರಿ ಅಧಿಕಾರಿಗಳು, ಚರಿತ್ರೆ-ದಾಖಲೆಗಳನ್ನು ಅಭ್ಯಸಿಸುವ ನಿಪುಣರು, ಅಬೊರಿಜಿನಲ್ ಆಸ್ಟ್ರೇಲಿಯನ್ ವಿದ್ವಾಂಸರು ಮತ್ತು ಹಿರಿಯರು ಎಂಬಂತೆ ನೂರಾರು ಜನರನ್ನು ಸಂದರ್ಶಿಸಿ ಅವರ ದೃಷ್ಟಿಕೋನಗಳನ್ನು ತೋರಿಸಿದ ಈ ಸರಣಿ ಡಾಕ್ಯುಮೆಂಟರಿ ಬಹಳ ಉಪಯುಕ್ತವಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕನ್ನಡದ ಹೆಣ್ಮನಗಳ ಕನ್ನಡಾಭಿಮಾನ: ರೂಪಶ್ರೀ ಕಲ್ಲಿಗನೂರ್ ಬರಹ

ಕನ್ನಡ ನಾಡಿನ ಮಕ್ಕಳು ಇಡೀ ಜಗತ್ತಿನ ತುಂಬಾ ಓಡಾಡಿದರೂ, ಮನೆಗೆ ಬಂದು ಅಮ್ಮನೊಟ್ಟಿಗೆ ಕನ್ನಡ ಮಾತನಾಡಿದಾಗಲೇ ಅವರಿಗೂ ಸಮಾಧಾನ. ಯಾಕೆಂದರೆ ಅವರೆಲ್ಲ ಮೊದಲು ಕಲಿತ ಪದವೇ “ಅಮ್ಮ” ಅಲ್ಲವೇ! ಜಗತ್ತಿನ, ಬೆಳವಣಿಗೆಯೆಂಬ ಸಂಕೀರ್ಣತೆಯ ಸಂದಿಗ್ಧತೆಯಲ್ಲಿ ಕನ್ನಡ ಭಾಷೆ ಚೂರು ನಲುಗುತ್ತಿದೆ ಎನ್ನಿಸುತ್ತಿದೆಯಾದರೂ ದೊಡ್ಡಮಟ್ಟದಲ್ಲಿಯಲ್ಲವಾದರೂ, ತಮಗೆ ಸಿಕ್ಕ ಅವಕಾಶಗಳಲ್ಲಿ ಕನ್ನಡದ ಬೆಳವಣಿಗೆಗೆ, ಉಳಿವಿಗೆ ಶ್ರಮಿಸುವ ಹಲವು ಶ್ರೀಸಾಮಾನ್ಯರಿದ್ದಾರೆ. ಕರ್ನಾಟಕದಲ್ಲಿ ಅಲ್ಲದೇ ಬೇರೆಡೆಗಳಲ್ಲಿ ನೆಲೆಸಿರುವ, ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಲವು ಕನ್ನಡದ ಹೆಣ್ಮಗಳ ಮಾತುಗಳು…

Read More

ಆಸ್ಟ್ರೇಲಿಯಾದ ಆಂಟಿ-ಇಮಿಗ್ರೇಷನ್ ಪ್ರದರ್ಶನ: ಡಾ. ವಿನತೆ ಶರ್ಮ ಅಂಕಣ

ಹೋದ ಭಾನುವಾರ ಆಸ್ಟ್ರೇಲಿಯಾದ ಎಲ್ಲಾ ರಾಜಧಾನಿ ನಗರಗಳಲ್ಲಿ ಮತ್ತು ಕೆಲ ಮುಖ್ಯ ಪಟ್ಟಣಗಳಲ್ಲಿ ನಡೆದ ವಲಸೆ-ವಿರೋಧ ಪ್ರದರ್ಶನ ಅನೇಕ ಪ್ರಶ್ನೆಗಳನ್ನು ಹೊರಹಾಕಿದೆ. ಆಸ್ಟ್ರೇಲಿಯಾಕ್ಕೆ ಬರುವ ವಲಸೆಗಾರರ ಸಂಖ್ಯೆ ಮಿತಿಮೀರಿದೆಯೆ? ಈ ವಲಸೆಗಾರರಿಂದ ಸ್ಥಳೀಯ ಆಸ್ಟ್ರೇಲಿಯನ್ನರಿಗೆ ಕಷ್ಟವಾಗುತ್ತಿದೆಯೆ? ಮಿತಿಮೀರಿದ ವಲಸೆಗಾರರ ಸಂಖ್ಯೆಯಿಂದ ಹೌಸಿಂಗ್, ಉದ್ಯೋಗದ ಅವಕಾಶ, ಆರೋಗ್ಯ ಮುಂತಾದ ವಿಷಯಗಳಲ್ಲಿ ಸಮಸ್ಯೆ ಉಂಟಾಗಿದೆಯೇ? ಈಗಿರುವ ಲೇಬರ್ ಕೇಂದ್ರ ಸರಕಾರ ಉದ್ದೇಶಪೂರ್ವಕವಾಗಿ ವಲಸೆಯನ್ನು ಹೆಚ್ಚಿಸಿದೆಯೇ?
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮಕ್ಕಳ ಶೋಷಣೆಯ ಪಾಪಿಷ್ಟರು: ಡಾ. ವಿನತೆ ಶರ್ಮಾ ಅಂಕಣ

ಹದಿನೆಂಟು ವರ್ಷವಾದಾಗ ಒಬ್ಬ ವ್ಯಕ್ತಿ ‘adult’ ಎಂದು ಸರ್ಕಾರ ಹೇಳುತ್ತದೆ. ಇವರು ತಮ್ಮ ಜೀವನಕ್ಕೆ ತಾವೇ ಸಂಪೂರ್ಣವಾಗಿ ಜವಾಬ್ದಾರರು. ಪೂರ್ಣಾವಧಿ ಉದ್ಯೋಗದಲ್ಲಿದ್ದು ಮುಂದೆ ತಮ್ಮದೇ ಕುಟುಂಬ ಆರಂಭಿಸಿದಾಗ ಇವರ ಮಕ್ಕಳು ಚೈಲ್ಡ್ ಕೇರ್ ಸೆಂಟರ್‌ಗೆ ಹೋಗುವುದು ಅನಿವಾರ್ಯವಾಗುತ್ತದೆ. ಪಾರ್ಟ್ ಟೈಮ್ ಕೆಲಸ ಮಾಡುತ್ತಾ ಮಕ್ಕಳನ್ನು ಪೋಷಿಸುತ್ತೀವಿ ಎಂದರೆ ಅವರ ಕೆರಿಯರ್‌ಗೆ ದೊಡ್ಡ ಹೊಡೆತ. ಅಲ್ಲದೆ ಒಂದೂವರೆ ಸಂಬಳವಿದ್ದರೆ ಇತ್ತ ಕಡೆ ಕುಟುಂಬದ ಖರ್ಚುಗಳನ್ನು ತೂಗಿಸಲು ಕಷ್ಟ. ಅತ್ತ ಕಡೆ ಸರಕಾರದಿಂದ welfare ಸಹಾಯ ಸಿಗುವುದಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ