Advertisement

Tag: DR. Vinathe Sharma

ಶರತ್ಕಾಲದ ರಂಗುರಂಗಿನ ಪ್ರಚಾರ: ಡಾ. ವಿನತೆ ಶರ್ಮ ಅಂಕಣ

ಕಾನೂನಿನ ಪ್ರಕಾರ ಗೋಡೆ ಗ್ರಫಿಟಿ ಆರ್ಟ್, ಮಸಿ ಬಳೆಯುವುದು ಇಂಥವುದೆಲ್ಲಾ ಅಪರಾಧಗಳು. ಬಲವಾದ, ಅದರಲ್ಲೂ ಕೇಂದ್ರೀಯ ವಿರೋಧಪಕ್ಷದ ನಾಯಕರಾದ ಪೀಟರ್ ಡಟ್ಟನ್ ಅವರ ಭಿತ್ತಿಚಿತ್ರಕ್ಕೆ ಮಸಿ ಬಳೆದದ್ದನ್ನ ನೋಡಿ ನನಗೆ ಆಶ್ಚರ್ಯವಾಯ್ತು. ಅದ್ಯಾರೊ ಬಹಳ ಧೈರ್ಯವಂತರಿರಬೇಕು ಎಂದುಕೊಂಡೆ. ಇಲ್ಲವೇ, ಡಟ್ಟನ್ ಅವರ ಸ್ವಲ್ಪವೂ ಸತ್ವವಿಲ್ಲದ, ಅಸತ್ಯದ, ಅಸಂಗತ ಮಾತುಗಳು, ಹೇಳಿಕೆಗಳಿಂದ ಬೇಸತ್ತು ಅವರ ಭಿತ್ತಿಚಿತ್ರದ ಮುಖಕ್ಕೆ ಮಸಿಬಳೆಯುವ ಯೋಚನೆ ಬಂದಿರಬೇಕು. ಅವರ ಬಳಿ ಸತ್ವಯುತ, ಅಭಿವೃದ್ಧಿ-ಪರ, ಜನ-ಪರ ಆಶ್ವಾಸನೆಗಳು ಇಲ್ಲದಿರುವುದು ಮಸಿಬಳೆದ ಕಿಡಿಗೇಡಿಗಳಿಗೆ ಅದೆಷ್ಟು ನಿರಾಸೆ ತಂದಿರಬೇಕು ಎಂದೆನಿಸಿತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಗಣೇಶ ತರುವ ಸುಖ, ಸಂತೋಷ…: ವಿನತೆ ಶರ್ಮಾ ಅಂಕಣ

ಈ ಪ್ರಪಂಚದ ಒಂದಷ್ಟು ದೇಶಗಳನ್ನು ಸುತ್ತುವಾಗ ಗಣೇಶನ ಖ್ಯಾತಿ ಅಚ್ಚರಿ ತಂದಿತ್ತು. ಯೂರೋಪ್, ಯುನೈಟೆಡ್ ಕಿಂಗ್ಡಮ್ ಅಲ್ಲಂತೂ ಗಣೇಶನ ಪರಿಚಯ ಸುಮಾರು ಜನರಿಗಿದೆ. ಅಂದಚೆಂದಕ್ಕೆಂದು ಅವನ ಮೂರ್ತಿಗಳನ್ನು ಇಟ್ಟಿರುವುದು ದಿಟ. ನಮ್ಮ ಆಸ್ಟ್ರೇಲಿಯದಲ್ಲೇಕೋ ಗಣಪನ ಹೆಸರು ಜನರಿಗೆ ಅಷ್ಟೊಂದು ಗೊತ್ತಿಲ್ಲ. ‘ಯು.ಕೆ. ಮತ್ತು ಅಮೇರಿಕಕ್ಕೆ ಹೋಲಿಸಿದರೆ ಆಸ್ಟ್ರೇಲಿಯಾ ಇಪ್ಪತ್ತು ವರ್ಷಗಳಷ್ಟು ಹಿಂದಿದೆ’ ಎನ್ನುವ ಜಾಣ್ಣುಡಿ ನಿಜವೇನೂ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕೈತೋಟಗಾರರ ಖಂಡಾಂತರ ಕಥೆಗಳು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ನಡು-ಚಳಿಗಾಲದ ಜುಲೈ ತಿಂಗಳು ಮುಗಿಯುತ್ತಾ ಇರುವಾಗ ಹಗಲು ಬೆಳಕಿನ ಅವಧಿ ಹೆಚ್ಚುತ್ತಿದೆ. ಅತ್ತ ಬ್ರಿಟನ್ನಿನಲ್ಲಿರುವ ನಮ್ಮ ಬಂಧುಗಳು ಅವರ ‘ಸೂರ್ಯ ಮುಳುಗದ’ ಬೇಸಿಗೆ ದಿನಗಳ ಬಗ್ಗೆ ಉತ್ಸಾಹದಿಂದ ಮಾತನಾಡುವಾಗ ಇತ್ತ ನಾನು ಆಸ್ಟ್ರೇಲಿಯಾದ ನಮ್ಮ ರಾಣಿರಾಜ್ಯದಲ್ಲಿ ಕೂಡ ದಿನಕರನ ಕೃಪೆ ಜಾಸ್ತಿಯಾಗುತ್ತಿದೆ, ಎನ್ನುತ್ತೀನಿ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಅಸಾಂಜ್ ಮತ್ತು ಕೆಂಪು ಮಣ್ಣಿನ ಬೆಂಕಿ: ವಿನತೆ ಶರ್ಮ ಅಂಕಣ

ಈ ೨೧ ನೇ ಶತಮಾನದಲ್ಲಿ ಕೂಡ ಆಸ್ಟ್ರೇಲಿಯನ್ ಸಮಾಜದಲ್ಲಿ ತಮ್ಮ ಜನರನ್ನು ಕಪ್ಪು ಜನರು ಎಂದು ಕೀಳಾಗಿ ನೋಡುವುದನ್ನು ಪ್ರಶ್ನಿಸುವುದು, ‘ನಿಮ್ಮ ಬ್ಲಾಕ್ ಬಣ್ಣ, ಬ್ಲಾಕ್ ರೇಸಿಸಮ್’ ನಮ್ಮ Blak ಅಸ್ಮಿತೆಗೆ ಭಂಗ ತರುವುದಿಲ್ಲ, ನಮ್ಮ ಕೆಂಪು ಮಣ್ಣು, ಉರಿಯುವ ಸೂರ್ಯ ಇರುವ ತನಕವೂ ನಾವು ಈ ನೆಲದ ಮಕ್ಕಳು ಎಂದು ಆತ್ಮವಿಶ್ವಾಸದಿಂದ ಹೇಳುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಯೂತ್ ಕ್ರೈಂ ಕತೆಗಳು: ವಿನತೆ ಶರ್ಮ ಅಂಕಣ

ಎಷ್ಟೋ ಬಾರಿ ಪೊಲೀಸರು ಈ ಮಕ್ಕಳಿಗೆ ಎಚ್ಚರಿಕೆ ಕೊಟ್ಟು ಕಳಿಸುತ್ತಾರೆ. ಕೆಲವೊಮ್ಮೆ ದೊಡ್ಡ ಮಕ್ಕಳು ಯೂತ್ ಜಸ್ಟಿಸ್ ಮುಖಾಮುಖಿ ಸಭೆಗಳಲ್ಲಿ ಸಲಹೆ, ಬುದ್ಧಿವಾದಗಳನ್ನು ಪಡೆದು ಹೋಗುತ್ತಾರೆ. ಕೆಲವರಿಗೆ ಅಪರಾಧ ಮಾಡುವುದು ತಮಾಷೆಯಾದರೆ ಇನ್ನೂ ಕೆಲವು ಮಕ್ಕಳಿಗೆ ಅದು ಉದ್ದೇಶಪೂರ್ವಕವಾದ ನಡವಳಿಕೆ ಆಗಿರುತ್ತದೆ ಎಂದು ಸಮಾಜ ಕಾರ್ಯಕರ್ತರು, ಆಪ್ತಸಮಾಲೋಚನಾ ತಜ್ಞರು ಹೇಳುತ್ತಾರೆ. ಚಿಂತಿಸುವ ವಿಷಯವೆಂದರೆ ಅವರಲ್ಲಿ ಅನೇಕರು ಪದೇಪದೇ ಅದೇ ರೀತಿಯ ಅಪರಾಧಗಳನ್ನು ಮಾಡುತ್ತಾ ಇರುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ