Advertisement

Tag: DR. Vinathe Sharma

ಭೂಮಿಯ ಆರೋಗ್ಯ ನಮ್ಮ ಆರೋಗ್ಯವೆಂದ ಮಕ್ಕಳು : ಡಾ. ವಿನತೆ ಶರ್ಮ ಅಂಕಣ

ಈ ಪತ್ರವನ್ನು ಬರೆಯುತ್ತಿರುವಾಗ ಬಂದ ಸುದ್ದಿ ಪ್ರಕಾರ ಗೋಲ್ಡ್ ಕೋಸ್ಟ್ ಪ್ರದೇಶದಲ್ಲಿ ಕೋಲ್ಮಿಂಚಿನ ಭಾರಿ ಮಳೆ ಬಿದ್ದು ಮುಷ್ಟಿಗಾತ್ರದ ಆಲಿಕಲ್ಲು ಸುರಿದಿದೆ. ಭಾರಿಮಳೆ ಸೂಚನೆ ಸಿಕ್ಕಿದ ಕೂಡಲೇ ಹವಾಮಾನ ಸಿಬ್ಬಂದಿ ಅದನ್ನು ಸಾರ್ವಜನಿಕರಿಗೆ ತಿಳಿಸಿದರೂ ಅನೇಕರು ಮಳೆಗೆ ಸಿಲುಕಿ ಪರಿಸ್ಥಿತಿ ಏರುಪೇರಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕನ್ನಡತನ ಜ್ವಲಿಸುವ ವಿಶೇಷ ತಿಂಗಳು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಹುಟ್ಟಿ ಬೆಳೆಯುವ ಕನ್ನಡಿಗ ದಂಪತಿಗಳ ಮಕ್ಕಳು ಕನ್ನಡದಲ್ಲಿ ಮಾತನಾಡುವುದು ಕಡಿಮೆ. ಒಂದುವೇಳೆ ಅವರು ಕಷ್ಟಪಟ್ಟು ಪ್ರಯತ್ನಿಸಿದರೂ ಅವರುಗಳು ಪ್ರತಿದಿನವೂ ಮಾತನಾಡುವ ಆಸ್ಟ್ರೇಲಿಯನ್ ಇಂಗ್ಲಿಷ್ ಉಚ್ಚಾರದ ಪ್ರಭಾವದಲ್ಲಿ ತಮ್ಮ ಕನ್ನಡವನ್ನು ಹೊರಡಿಸಿದಾಗ ಮಿಶ್ರಿತ ಭಾವಗಳು ಏಳುತ್ತವೆ. ಕರ್ನಾಟಕದಲ್ಲಿಯೇ ಹುಟ್ಟಿ ಕೆಲವರ್ಷ ಅಪ್ಪಟ ಕನ್ನಡತನದಲ್ಲಿ ಅಲ್ಲಿಯೇ ಬೆಳೆದು ತಮ್ಮ ಬಾಲ್ಯದಲ್ಲಿ ಆಸ್ಟ್ರೇಲಿಯಾಕ್ಕೆ ಬರುವ ಮಕ್ಕಳು ಕೆಲವೇ ವರ್ಷಗಳಲ್ಲಿ ಆಸ್ಟ್ರೇಲಿಯನ್ ಇಂಗ್ಲಿಷ್ – ಕನ್ನಡವನ್ನು ರೂಢಿಸಿಕೊಳ್ಳುತ್ತಾರೆ. ಅಪ್ಪ-ಅಮ್ಮ ಕನ್ನಡದಲ್ಲಿ ಮಾತನಾಡಿಸುವಾಗ ಈ ಮಕ್ಕಳು ಇಂಗ್ಲೀಷಿನಲ್ಲಿ ಉತ್ತರಿಸುವುದು ಸರ್ವೇಸಾಮಾನ್ಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಹಣದುಬ್ಬರ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಕಥೆಗಳು: ವಿನತೆ ಶರ್ಮ ಅಂಕಣ

ಒಂದು ರೀತಿಯಲ್ಲಿ ನೋಡುವುದಾದರೆ, ಈ ಶಿಕ್ಷಣ ಸಾಲವನ್ನು ನೇರವಾಗಿ ವಿದ್ಯಾರ್ಥಿಯೇ ಮುಂದೆ ಉದ್ಯೋಗಸ್ಥನಾದ ಮೇಲೆ ಕಟ್ಟುವುದರಿಂದ ಪೋಷಕರಿಗೆ ಅವನ ಶಿಕ್ಷಣದ ಶುಲ್ಕದ ಹೊರೆ ತಗುಲುವುದಿಲ್ಲ. ಇನ್ನೊಂದು ರೀತಿಯಲ್ಲಿ ನೋಡಿದರೆ, ಅಯ್ಯೋ ಪಾಪ ಕೇವಲ 18 ವರ್ಷ ವಯಸ್ಸಿನಿಂದಲೇ ಈ ಕಿರಿಯರು ಸಾಲಕ್ಕೆ ಸಿಲುಕುತ್ತಾರಲ್ಲಾ ಎಂದು ಬೇಸರವಾಗುತ್ತದೆ. ಹಾಗೆ ವ್ಯಥೆ ಪಡದೆ ಪೋಷಕರೇ ತಮ್ಮ ವಿದ್ಯಾರ್ಥಿಗಳ ಶಿಕ್ಷಣಶುಲ್ಕವನ್ನು ಕಟ್ಟಬಹುದು, ಆದರೆ ಸರಾಸರಿ ತಿಂಗಳ ಸಂಬಳಕ್ಕೆ ಹೋಲಿಸಿದರೆ ಶಿಕ್ಷಣದ ಫೀಸ್ ಬಲು ದುಬಾರಿ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಂಗೀತ-ನೃತ್ಯ ರೂಪಕದೊಳಗೆ ಎಲ್ಲರಿಗೂ ಸಲ್ಲುವ ಅಮೆರಿಕೆಯ

ಹೊಸ ದೇಶವನ್ನು ರೂಪಿಸಲು ಹೆಣಗಾಡುತ್ತಿದ್ದ ತನ್ನ ನಾಯಕ ಜಾರ್ಜ್ ವಾಷಿಂಗ್ಟನ್ ಅವರಿಗೆ ತೋಳ್ಬಲ ಕೊಟ್ಟು ರಾಜಕೀಯದಲ್ಲಿನ ಭುಜಬಲನಾದ. ಹೊಸ ಅಮೆರಿಕಾದ ಮೊಟ್ಟಮೊದಲ ಅಧ್ಯಕ್ಷರಾದ ವಾಷಿಂಗ್ಟನ್ ಅವರ ಸರಕಾರದಲ್ಲಿ ಪ್ರಮುಖ ಪದವಿಗಳನ್ನು ನಿರ್ವಹಿಸುತ್ತಾ ತನ್ನನ್ನು ತಾನೇ ದೇಶೀಯ ಮಟ್ಟದಲ್ಲಿ ಒಬ್ಬ ನಂಬಿಕೆಯ ರಾಜಕಾರಣಿ, ರಾಜನೀತಿ ತಜ್ಞನಾಗಿ ರೂಪಿಸಿಕೊಂಡ ಹ್ಯಾಮಿಲ್ಟನ್ ತನ್ನ ಅಲ್ಪಾಯಸ್ಸಿನ ಕಾಲದಲ್ಲಿ ಅಮೆರಿಕಾವನ್ನು ಒಂದು ಸುಸಂಸ್ಥಿತ ದೇಶವನ್ನಾಗಿ ರೂಪಿಸಲು ಅನೇಕ ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಮಳೆಬೆಳೆ, ಸಂತೋಷ, ನೆಮ್ಮದಿಗಳ ಕಣಜ

ಕಳೆದ ಇಡೀ ಬೇಸಿಗೆಯಲ್ಲಿ ನಮ್ಮ ರಾಣಿರಾಜ್ಯದಲ್ಲಿ ಮಳೆ ಎಂಬುದು ಮರೀಚಿಕೆಯಾಗಿತ್ತು. ಬೇಸಿಗೆ ಬರುವುದಕ್ಕೂ ಮುನ್ನ ಸರ್ಕಾರವು ಬರಲಿರುವ ಚಂಡಮಾರುತಗಳ ಬಗ್ಗೆ, ಮಳೆಪ್ರವಾಹಗಳ ಬಗ್ಗೆ ಅದೇನೆಲ್ಲಾ ಎಚ್ಚರಿಕೆ ಕೊಟ್ಟಿತ್ತು ಎಂದರೆ ದೂರಪ್ರವಾಸಕ್ಕೇನಾದರೂ ಹೋದರೆ ಮನೆಕಡೆ ಪರಿಸ್ಥಿತಿ ಏನಪ್ಪಾ ಎಂದೆಲ್ಲ ಚಿಂತೆಯಾಗಿತ್ತು. ಹಾಗೇನೂ ಆಗದೆ ಕಡೆಗೆ ನೆಟ್ಟಗೊಂದು ಸರಿಯಾದ ಮಳೆಯೂ ಬೀಳದೆ, ಬೇರೊಂದು ತರಹದ ಚಿಂತೆಯಾಗಿತ್ತು. ಬಿಸಿಲು ಹೆಚ್ಚಾಗಿ, ಮಳೆನೀರು ಕೊಯ್ಲಿನ ಟ್ಯಾಂಕ್ ಪೂರಾ ಖಾಲಿಯಾಗಿ, ಏನೊಂದೂ ತರಕಾರಿ ಬೆಳೆಯಲಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ