Advertisement

Tag: DR. Vinathe Sharma

‘ಇಂಡೀಜಿನಸ್ ವಾಯ್ಸ್’ – ಸಮತೆಯತ್ತ ಆಸ್ಟ್ರೇಲಿಯಾ

ದೇಶದ ಮೂಲಜನರಿಗೆ ಸಂಬಂಧಿಸಿದ್ದರೂ 55 ವರ್ಷಗಳ ನಂತರ ಪ್ರತಿಯೊಬ್ಬ ಆಸ್ಟ್ರೇಲಿಯನ್ ವಯಸ್ಕ ಪ್ರಜೆಯೂ ಕಡ್ಡಾಯವಾಗಿ ಮತ ಚಲಾಯಿಸಬೇಕಾದ, ದೇಶದ ಸಂವಿಧಾನಕ್ಕೆ ತಿದ್ದುಪಡಿ ತರಲು ಕೇಳಬೇಕಿದ್ದ ಅತ್ಯಂತ ಮುಖ್ಯವಾದ ಪ್ರಶ್ನೆಯನ್ನು ಅವರು ಅಧಿಕೃತವಾಗಿ ಬಿಡುಗಡೆ ಮಾಡುವವರಿದ್ದರು. ತಮ್ಮ ಬಿಳಿಯ ಜನರಿಗೆ ಸಾರಾಸಾಗಾಟಾಗಿ, ಯಾವುದೇ ಅಡ್ಡಿಗಳಿಲ್ಲದೆ ‘ಸ್ವಾಭಾವಿಕವಾಗಿ’ ಲಭ್ಯವಿರುವ ಸ್ವಯಂ-ನಿರ್ಣಯದ ಹಕ್ಕು ಇದೇ ದೇಶದ ಮೂಲಜನರಿಗೆ ಇಲ್ಲವಾಗಿರುವುದನ್ನು ಅವರು ಎತ್ತಿ ಹಿಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬನ್ಯಾ ಮರ ಹಬ್ಬ ಮತ್ತು ಬನ್ಯಾ ಡ್ರೀಮಿಂಗ್

ಅಬೊರಿಜಿನಲ್ ಜನರ ಜೀವನದಲ್ಲಿ ಡ್ರೀಮಿಂಗ್ ಸ್ಟೋರೀಸ್ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಭಾರತೀಯ ಹಿಂದೂ ಧರ್ಮದಲ್ಲಿ ದೇವರುಗಳು ಮತ್ತು ಅನೇಕಾನೇಕ ಪುರಾಣಗಳು ಹಾಸುಹೊಕ್ಕಾಗಿರುವಂತೆ. ಅಬೊರಿಜಿನಲ್ ಜೀವನದಲ್ಲಿ ಪ್ರತಿಯೊಂದನ್ನೂ ಸ್ಪಿರಿಟ್‌ಗಳು, ಅವುಗಳು ಎಲ್ಲ ಬಗೆಯ ಜೀವಜಾಲದೊಂದಿಗೆ ಹೊಂದಿರುವ ಸಂಬಂಧವು ಎಲ್ಲರ ಜೀವನದ ಆಗುಹೋಗುಗಳನ್ನು ನಿರ್ದೇಶಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಆಸ್ಟ್ರೇಲಿಯಾದ ‘ಬಿಗ್ ಥಿಂಗ್ಸ್’ ಆಕರ್ಷಣೆಗಳು

ಏನಿದು ‘ಬಿಗ್ ಥಿಂಗ್ಸ್’ ಎಂದು ಮೊದಲ ಬಾರಿ ಕೇಳಿದಾಗ ನನ್ನ ಆಸ್ಟ್ರೇಲಿಯನ್ ಸ್ನೇಹಿತೆಯ ಗಂಡ ಬಲು ಸೊಗಸಾಗಿ ವಿವರಿಸಿದ್ದರು. ಒಂದೂರಿನ ಜನರು ಸೇರಿ ತಮಗೆ ಆಪ್ತವೆನಿಸಿದ ಹಣ್ಣು, ಆಹಾರ, ಪ್ರಾಣಿ, ಪಕ್ಷಿ, ಮರ ಇತ್ಯಾದಿಗಳಲ್ಲಿ ಒಂದನ್ನು ಆರಿಸಿಕೊಂಡು ಅದನ್ನು ದೊಡ್ಡ ಗಾತ್ರದ ಶಿಲ್ಪ ಕೃತಿಯಾಗೋ, ಲೋಹ ಕಲಾ ಕೃತಿಯಾಗಿಯೋ ನಿರ್ಮಿಸಿ ಹೆಮ್ಮೆಯಿಂದ ಆ ಪ್ರತಿಮೆಯನ್ನು ತಮ್ಮೂರಲ್ಲಿ ಸ್ಥಾಪಿಸುವುದು. ಕ್ರಮೇಣ ಅದಕ್ಕೆ ಪ್ರಚಾರ ಕೊಟ್ಟು ಅದನ್ನು ದೇಶದ ‘ಬಿಗ್ ಥಿಂಗ್ಸ್’ ಪಟ್ಟಿಗೆ ಸೇರುವಂತೆ ಮಾಡುವುದು. ಇದರಿಂದ ಆ ಊರಿಗೆ ಅದೇನೋ ವಿಶೇಷ ಗುರುತು ಸಿಕ್ಕಿದಂತಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು: ಭಾಗ ಒಂದು

ಈ ಬಾರಿ ನಾವು ಹೂಡಿದ ‘ಅಡಿಗೆಮನೆ’ ಇದ್ದದ್ದು ಮರಗಳ ಅಂಚಿನಲ್ಲಿ. ಈ ಅಂಚಿನ ಆಚೆ ಕಡೆ ನೂರು ಮೀಟರ್ ದೂರದಲ್ಲಿ ನೀರಿಲ್ಲದೆ ಬೇಸಿಗೆಯ ಬಿಸಿಲಿಗೆ ಸೊರಗಿದ್ದ ನದಿಯಿತ್ತು. ಕಳೆದ ಫೆಬ್ರವರಿ-ಮಾರ್ಚ್ ತಿಂಗಳುಗಳಲ್ಲಿ ಸಂಭವಿಸಿದ ಅಧಿಕ ಮಳೆ-ಜಲ ಪ್ರವಾಹದಲ್ಲಿ ಈ ನದಿ ಉಕ್ಕೇರಿ ಆ ನೂರೂ ಮೀಟರ್ ದೂರವನ್ನಾಕ್ರಮಿಸಿಕೊಂಡು ಈ ಮರಗಳ ಅಂಚಿನ ತನಕ ಬಂದಿತ್ತು ಎನ್ನುವುದು ಅಲ್ಲಿ ಚೆಲ್ಲಾಡಿದ್ದ ಮರಕೊಂಬೆಗಳು, ರೆಂಬೆಗಳಿಂದ ಸ್ಪಷ್ಟವಾಗಿತ್ತು. ನಾವೇನೋ ಖುಷಿಯಿಂದಲೇ ಅಲ್ಲಿ ಅಡಿಗೆಮನೆ ಮತ್ತು ನೆಲದ ಹಾಸುಗಳನ್ನು ಸ್ಥಾಪಿಸಿದ್ದೆವು. ಒಂದೆರೆಡು ದಿನಗಳಲ್ಲಿ ಬಿದ್ದ ಮಳೆಯಿಂದ ನಮ್ಮ ಖುಷಿ ಕಡಿಮೆಯಾಯ್ತು. ನೆಲದ ಹಾಸು ಮಳೆನೀರು, ಮಣ್ಣಿನ ರಾಡಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

‘ಆಲ್ ಈಸ್ ಕಾಮ್’ ಎನ್ನುವ ಕ್ರಿಸ್ಮಸ್ ಹಬ್ಬ

ಅದು ಚಳಿಗಾಲದಲ್ಲಿ ಬರುವ ಒಂದು ಸಂಕ್ರಮಣದ ದಿನ. ಆ ದಿನದಿಂದ ಸೂರ್ಯನ ಬೆಳಕು ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ‘ಆಲ್ ಈಸ್ ಬ್ರೈಟ್’ ಎನ್ನುವ ಪದಗಳಿಗೆ ಹೊಸ ಅರ್ಥ ಹೊಳೆಯುತ್ತದೆ. ಹೊಸ ಬೆಳಕನ್ನ, ಸೂರ್ಯ ರಶ್ಮಿಯನ್ನ ತರುವ ಚೇತನವೊಂದು ಪ್ರಕೃತಿಯಲ್ಲಿ ಮೂಡಿತೇನೊ ಎನ್ನುವ ನಂಬಿಕೆ ಹುಟ್ಟುತ್ತದೆ. ರೋಮನ್ನರು ಆ ದಿನವನ್ನೇ ಪ್ರಶಸ್ತವೆಂದು ಆರಿಸಿಕೊಂಡರು. ಅವರು ‘ಧರ್ಮಬಾಹಿರ’ವೆಂದು ತಿಳಿದಿದ್ದ ಪೇಗನ್ ಸಂಸ್ಕೃತಿಯ ಹಬ್ಬಗಳ ಹುಟ್ಟಡಗಿಸಲು ಕೂಡ ಡಿಸೆಂಬರ್ ತಿಂಗಳನ್ನ….

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ