Advertisement

Tag: Dr. Vishwanath Neralakatte

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”

Read More

ದೊಡ್ಡ ದ್ವೀಪ ಅಕ್ಷರ ದೀಪ ಕ್ಯೂಬಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

1903ರಿಂದ ಕ್ಯೂಬಾ ದೇಶವು ಗ್ವಾಂಟನಾಮೊ ಹೆಸರಿನ ಕೊಲ್ಲಿಯನ್ನು ಅಮೇರಿಕಾಕ್ಕೆ ಗುತ್ತಿಗೆ ನೀಡಿತ್ತು. ಇದಕ್ಕೆ ಸಂಬಂಧಪಟ್ಟ ಒಪ್ಪಂದವನ್ನು ಮಾಡಿಕೊಂಡಿತ್ತು. ಇದರ ಹೊರತಾಗಿಯೂ ಕೆರಿಬಿಯನ್ ಸಮುದ್ರದಲ್ಲಿ ಸೈನಿಕ ನೆಲೆಯಾಗಿ ಈ ಕೊಲ್ಲಿಯನ್ನು ಬಳಸಲು ಅಮೇರಿಕಾ ಪ್ರಯತ್ನಿಸಿತ್ತು. ಶಸ್ತ್ರಾಸ್ತ್ರಗಳ ಬಳಕೆಯ ಮೂಲಕ ಕ್ಯೂಬಾವನ್ನು ಮೆತ್ತಗಾಗಿಸುವ ಪ್ರಯತ್ನವನ್ನೂ ನಡೆಸಿತ್ತು. ಅಮೇರಿಕಾದ ಈ ಬಗೆಯ ನಡತೆಯಿಂದಾಗಿ ಅದರ ಜೊತೆಗಿನ ಒಪ್ಪಂದ ಅನ್ಯಾಯಕರವಾದದ್ದು ಎನ್ನುವುದು ಕ್ಯೂಬಾದ ಜನರ ಅರಿವಿಗೆ ಬಂತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕ್ಯೂಬಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಚಿನ್ನದ ದ್ವೀಪ, ಶವದ ಹೂವು ಮತ್ತು ಮಲೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಮಲಯ ಪೆನಿನ್ಸುಲಾ ಮತ್ತು ಬೋರ್ನಿಯೊದ ಉತ್ತರ ಕರಾವಳಿ ಪ್ರದೇಶವು ಪ್ರಪಂಚದ ಪ್ರಮುಖ ಕಡಲ ವ್ಯಾಪಾರ ಮಾರ್ಗಗಳಲ್ಲಿ ಒಂದಾಗಿದೆ. ಏಷ್ಯಾದ ಇತರ ಭಾಗಗಳ ಜನರು ಇಲ್ಲಿಗೆ ಭೇಟಿ ಕೊಡುತ್ತಾರೆ. ಈ ಕಾರಣದಿಂದಾಗಿ ಆಗ್ನೇಯ ಏಷ್ಯಾದ ಬೇರೆ ರಾಷ್ಟ್ರಗಳಲ್ಲಿ ಕಂಡುಬರುವಂತೆ ಮಲೇಷ್ಯಾದಲ್ಲಿಯೂ ಜನಾಂಗೀಯ ವೈವಿಧ್ಯತೆಯಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಮಲೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ನೇಪಾಳವೆಂಬ ಮತ್ತೊಂದು ಭಾರತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ನೇಪಾಳದ ಜನರು ಶ್ರಮಜೀವಿಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಪರ್ವತ ಪ್ರದೇಶಗಳನ್ನು ಅವರು ಏರುವ ಮತ್ತು ಇಳಿಯುವ ರೀತಿ ಎಂಥವರಲ್ಲೂ ಅಚ್ಚರಿ ಮೂಡಿಸುತ್ತದೆ. ಮೊದಮೊದಲು ಪರ್ವತಾರೋಹಣಕ್ಕೆ ಹೊರಟವರಿಗೆ ಖಾಲಿ ಕೈಯ್ಯಲ್ಲಿ ಪರ್ವತದ ತುದಿ ತಲುಪುವುದೇ ಅಬ್ಬಬ್ಬಾ ಎನಿಸಿಬಿಡುತ್ತದೆ. ಆದರೆ ನೇಪಾಳದವರು ತಮ್ಮ ಬೆನ್ನ ಮೇಲೆ ಭಾರವಾದ ಚೀಲಗಳನ್ನು ಇಲ್ಲವೇ ವಸ್ತುಗಳನ್ನು ಹೊತ್ತುಕೊಂಡು ಪರ್ವತವನ್ನು ಏರುತ್ತಾರೆ; ಇಳಿಯುತ್ತಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ನೇಪಾಳದ ಕುರಿತ ಬರಹ ನಿಮ್ಮ ಓದಿಗೆ

Read More

ತಿಳಿವಳಿಕೆಯ ಚಳುವಳಿಗಳಿಂದ ಅರಳಿನಿಂತ ಫ್ರಾನ್ಸ್: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಫ್ರಾನ್ಸ್ ಕಲಾವಲಯದ ಕುರಿತ ವಿವರಣೆಯು ಪ್ಯಾಬ್ಲೋ ಪಿಕಾಸೊ ಅವರ ಪ್ರಸ್ತಾಪವಿಲ್ಲದೆ ಪೂರ್ಣವಾಗಲಾರದು. ಶಿಲ್ಪಕಲೆಯನ್ನು ಪ್ರಧಾನವಾಗಿಸಿಕೊಂಡು ಇತರ ಕಲೆಗಳಲ್ಲಿಯೂ ತೊಡಗಿಸಿಕೊಂಡ ಇವರು ಸ್ಪೇನ್ ಮೂಲದವರು. ಇಪ್ಪತ್ತನೇ ಶತಮಾನದ ಫ್ರಾನ್ಸ್ ಶಿಲ್ಪಕಲೆಯ ಮೊದಲ ಅರ್ಧಭಾಗ ಪಿಕಾಸೊ ಅವರಿಗೆ ಮೀಸಲಾಗಿದೆ. ‘ಮ್ಯಾನ್ ವಿದ್ ಅ ಲ್ಯಾಂಬ್’ ಎನ್ನುವ ಅವರ ಶಿಲ್ಪಕಲಾ ಕೆತ್ತನೆಯಲ್ಲಿ ಮಾನವೀಯತೆ ಅಭಿವ್ಯಕ್ತಗೊಂಡಿದ್ದರೆ, ‘ಡೆತ್ಸ್ ಹೆಡ್’ ಎನ್ನುವ ಕೆತ್ತನೆಯು ಯುದ್ಧದ ಭೀಕರತೆಯನ್ನು ಮನದಟ್ಟು ಮಾಡಿಕೊಡುವಂತಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ