Advertisement

Tag: E Magazine

ಡಾ. ಚಂದ್ರಮತಿ ಸೋಂದಾ ಬರೆಯುವ ಸರಣಿ “ಮಾತು ಮಂದಲಿಗೆ” ಆರಂಭ

ಅದೃಷ್ಟದ ಪೆನ್ನು ಎಂದು ತಮ್ಮ ಪೆನ್ನಿನ ಬಗ್ಗೆ ಬಹಳ ಮುತುವರ್ಜಿವಹಿಸುವುದೂ ಇದೆ. ಅದೇನಾದರೂ ಕಳೆದುಹೋಯಿತು ಅಂದ್ರೆ ಆಗ ನೋಡಬೇಕು ಭೂಮಿ ಆಕಾಶ ಒಂದು ಮಾಡುವ ಥರಾ ಕೂಗಾಡುವುದನ್ನು. ಸಿಗಲಿಲ್ಲ ಅಂದರೆ ಮನೆಮಂದಿಗೆಲ್ಲ ಮಂತ್ರಾಕ್ಷತೆ ಬೇರೆ. ಅವರ ಅವತಾರ ನೋಡಿದ್ರೆ ಏನೋ ಆಗಬಾರದ್ದು ಆಗಿದೆ ಅನ್ನುವ ರೀತಿ ನಡವಳಿಕೆ. ಪೆನ್ನು ಕೈಗೆ ಬಂತು ಅಂದರೆ ಎಲ್ಲವೂ ತಣ್ಣಗೆ. ಕೆಲವರ ಸಹಿಯನ್ನಂತೂ ಯಾರಿಗೂ ನಕಲು ಮಾಡಲು ಆಗದಂತಹುದು.
ಡಾ. ಚಂದ್ರಮತಿ ಸೋಂದಾ ಬರೆಯುವ ಹಳೆ ಕಾಲದ ನೆನಪುಗಳ ಸರಣಿ “ಮಾತು ಮಂದಲಿಗೆ” ಇಂದಿನಿಂದ ಮೂರುವಾರಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಮಾವಿನ ತೋಪಿನ ಎರಡು ಕತೆಗಳು: ಮಾರುತಿ ಗೋಪಿಕುಂಟೆ ಸರಣಿ

ಅವನು ಓಡುವುದರಲ್ಲಿ ಯಾವಾಗಲೂ ಪ್ರಥಮ.. ಹಾಗಾಗಿ ಅವನೇನೊ ತಪ್ಪಿಸಿಕೊಂಡ. ಮರವನ್ನು ಹತ್ತುವುದರಲ್ಲಿ ಅಂತಹ ಅನುಭವವೇನು ಇಲ್ಲದ ನಾನು ನಿಧಾನವಾಗಿ ಮರ ಇಳಿಯುವುದರಲ್ಲಿ ಸಿಕ್ತಿಮ್ಮಜ್ಜ ಹತ್ತಿರವಾಗಿದ್ದ. ಅವನು ಹತ್ತಿರ ಬರುವುದು ಕಂಡದ್ದೇ ಎದೆಬಡಿತ ಜೋರಾಗಿತ್ತು. ಕೈ ಕಾಲುಗಳು ನಡುಗಲು ಪ್ರಾರಂಭಿಸಿದ್ದವು. ನನಗೆ ಬೇರೆ ದಾರಿ ಇರಲಿಲ್ಲ. ನಾನು ಮರದಿಂದ ಇಳಿಯಲಿಲ್ಲ, ಬದಲು ಅದರ ಮಧ್ಯದಲ್ಲಿ ಅವಿತುಕೊಂಡೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ಕಾವ್ಯ ಸಾಗರದಲ್ಲೊಂದು ‘ಒದ್ದೆಗಣ್ಣಿನ ದೀಪ’….

ಈ ಎಲ್ಲ ಕವಿತೆಗಳೂ ವಿವಿಧ ವಿಷಯಗಳನ್ನು ಕುರಿತು ಮಾತನಾಡಿವೆ. ಧರ್ಮ, ರಾಜಕೀಯ, ಪ್ರಭುತ್ವ, ನಿರಂಕುಶಾಧಿಕಾರ, ಕೋಮುವಾದ, ಧರ್ಮಾಂಧತೆ, ಬಡತನ, ಹಸಿವು, ಗೊಡ್ಡು ಸಂಪ್ರದಾಯ, ಪ್ರೇಮ, ಅಗಲಿಕೆ, ಸಾವು ಇತ್ಯಾದಿಗಳು ಸೇರಿಕೊಂಡಿವೆ. ಕಾವ್ಯದ ಕುರಿತು ಹೆಚ್ಚು ಗಂಭೀರ ಚರ್ಚೆಗಳಾಗುತ್ತಿಲ್ಲ ನಿಜ. ಆದರೆ ನಿಜವಾದ ಕಾವ್ಯಕ್ಕೆ ಇಂಥ ಔಪಚಾರಿಕ ಚೌಕಟ್ಟುಗಳೇಕೆ ಬೇಕು? ಸತ್ವಯುತವಾದ ಕಾವ್ಯ ಎಂದೆಂದಿಗೂ ತನ್ನ ಬೆಲೆಯನ್ನು ಕಳೆದುಕೊಳ್ಳುವುದಿಲ್ಲ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಚಾಂದ್‌ ಪಾಷಾ ಎನ್.ಎಸ್. ಕವನ ಸಂಕಲನದ ಕುರಿತು ಬರೆದಿದ್ದಾರೆ

Read More

‘ಮುಂಬಯಿ ಕನ್ನಡ ಲೋಕʼದ ಅನಾವರಣ

ಮುಂಬಯಿ ಬದುಕಿನ ವಿವಿಧ ವಿನ್ಯಾಸಗಳು ಕನ್ನಡ ಕಾವ್ಯದಲ್ಲಿ ಮೂಡಿ ಬಂದಿರುವ ಬಗೆಯನ್ನು ‘ಮುಂಬಯಿ ಕವಿಗಳು ಕಂಡ ಮುಂಬಯಿ’ ಭಾಗದಲ್ಲಿ ಕಟ್ಟಿಕೊಡಲಾಗಿದೆ. ಇಲ್ಲಿ ಲೇಖಕರು ಜಿ.ಎಸ್.ಎಸ್. ಅವರ ‘ಮುಂಬಯಿ ಜಾತಕ’ವನ್ನು ಮೊದಲ್ಗೊಂಡು, ಜಯಂತ ಕಾಯ್ಕಿಣಿ, ಕರುಣಾಕರ ಶೆಟ್ಟಿ, ಗಿರಿಜಾ ಶಾಸ್ತ್ರಿ, ಸಾ.ದಯಾ, ಅರವಿಂದ ನಾಡಕರ್ಣಿ, ಸನದಿ, ತುಳಸಿ ವೇಣುಗೋಪಾಲ್, ಕೆ.ವಿ. ಕಾರ್ನಾಡ್, ಗೋಪಾಲ್ ತ್ರಾಸಿ, ಜಿ.ಪಿ. ಕುಸುಮಾ ಮೊದಲಾದವರ ಕವಿತೆಗಳಲ್ಲಿ ಮುಂಬಯಿ ವಿಭಿನ್ನ ರೀತಿಯಲ್ಲಿ ಅನಾವರಣಗೊಂಡಿರುವುದನ್ನು ಲೇಖಕರು ಕಂಡು ಕೊಂಡಿದ್ದಾರೆ.
ಡಾ. ಕೆ. ರಘುನಾಥ್‌ ಬರೆದ ‘ಮುಂಬಯಿ ಕನ್ನಡ ಲೋಕʼ ಕೃತಿಯ ಕುರಿತು ದಯಾನಂದ ಸಾಲ್ಯಾನ್‌ ಬರಹ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ