ಬದುಕಿಗೆ ಪರಿಧಿಯ ಬರೆವ ಕರ್ಮಫಲವೆಂಬ ಕೈವಾರ: ರಾಮ್ ಪ್ರಕಾಶ್ ರೈ ಕೆ ಸರಣಿ
ಸುಜಿಗೆ ಒಳ್ಳೆಯ ಬದುಕಿತ್ತು. ಮಧುವಿನ ಪತ್ನಿಗೂ. ಆದರೆ, ಅವಳಲ್ಲಿನ ಖಾಲಿತನವನ್ನು ತುಂಬಲು ಆಕೆ ಹೊರಟಳು. ಸುಜಿ ಆ ಅವಕಾಶವನ್ನು ಬಳಸಿ ಆಕೆಯ ನಂಬಿಕೆ, ಆತ್ಮಾಭಿಮಾನದ ಜೊತೆಗೆ ಆಟವಾಡಿಬಿಟ್ಟ. ಇವೆಲ್ಲವೂ ನಡೆದಾಗ ಮಧು ಮೂಕ ಪ್ರೇಕ್ಷನಾಗಿದ್ದ. ಆದರೆ ಪತ್ನಿಯ ಮೇಲಿನ ಆತನ ಅಸ್ಖಲಿತ ಪ್ರೇಮ, ಗೌರವಕ್ಕೆ ಧಕ್ಕೆಯಾದಾಗ ಆತ ಹಿಂಸೆಯ ದಾರಿಯ ಹಿಡಿದ. ಸರಿ ತಪ್ಪುಗಳಾಚೆ ಇಂತಹ ಅದೆಷ್ಟೋ ಕ್ರಿಮಿಗಳಿಗೆ ‘ಸಾವು ಮಲಗಿರುತ್ತೆ ನಿನ್ನ ಪಕ್ಕದಲ್ಲೇ, ಗೊತ್ತಾಗೋದು ಎದ್ದಾಗಲೇ’ ಎಂದು ಪಾಠವಾಯಿತು ಆತನ ನಡೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಮಲಯಾಳಂನ ‘ಇಲಾ ವಿಳಾ ಪೂಂಚಿರಾ’ ಸಿನಿಮಾದ ವಿಶ್ಲೇಷಣೆ
