Advertisement

Tag: essay

ಪೊಟ್ಟಣದ ಮೆಲುಕಿನಲ್ಲಿ..

ಅಶ್ವತ್ಥ ಕಟ್ಟೆಯ ದೊಡ್ಡ ಮರದ ಕೊಂಬೆಗಳಲ್ಲಿ, ಬೀದಿಯ ಸುತ್ತಮುತ್ತಲ ಮನೆಗಳು, ಕಾಂಪೌಂಡ್ ಗೋಡೆಗಳ ಮೇಲೆ, ರಾಮಮಂದಿರದೊಳಗೆ ಹಾಗೂ ದಾರಿಯುದ್ದಕ್ಕೂ ಇರುತ್ತಿದ್ದ ಕೋತಿಗಳ ಗುಂಪಿನ ದಾಳಿಯ ಭೀತಿಯಲ್ಲೇ ದಿನಸಿ ಬ್ಯಾಗನ್ನು ಉದ್ದನೆಯ ಲಂಗದ ನೆರಿಗೆಗಳಲ್ಲಿ ಮುಚ್ಚಿಟ್ಟುಕೊಂಡು ಅವುಗಳಿಂದ ತಪ್ಪಿಸಿಕೊಂಡು ಮನೆಗೆ ಹೋಗುವಷ್ಟರಲ್ಲಿ ಹೈರಾಣಾಗುತ್ತಿದ್ದೆ.
ಎಂ.ಜಿ. ಶುಭಮಂಗಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಝಂಡಾ ಊಂಚಾ ಬಿಟ್ಟು.. ಘಮಘಮಿಸುವ ಊಟದ ಹಿಂದೆ ಹೊರಟೂ…

ಮೌಂಟ್ ಅಬುನಲ್ಲಿನ ಆಶ್ರಮಕ್ಕೆ ಹೋಗಿದ್ದೆ. ಅಲ್ಲಿ ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇರುತ್ತೆ ಅಂತ ಯಾರೋ ಹೇಳಿದ್ದರು. ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇದ್ದರೆ ದೇವರನ್ನ ಯಾವಾಗ ನೋಡೋದು ಅನ್ನುವ ಸಂಶಯ ಹುಟ್ಟಿತ್ತು. ನನ್ನಾಕೆ ಒಂದು ಮೊಟಕು ಕೊಟ್ಟು ಇಪ್ಪತ್ನಾಲ್ಕು ಗಂಟೇನೂ ತಿಂತಲೇ ಕೂಡು ಹಾಗಿಲ್ಲ ಅಂತ ಭೋಜನ ಶಾಲೆಯಿಂದ ಆಚೆಗೆ ದರ ದರ ಎಳೆದುಕೊಂಡು ಹೋಗಿದ್ದಳು. ಊಟಕ್ಕೆ ಅಲ್ಲೂ ಚಪಾತಿ, ಅದಕ್ಕೆ ನೆಂಚಿಕೊಳ್ಳೂಕ್ಕೆ ಅದೇನೋ ಒಂದು.
ಎಚ್. ಗೋಪಾಲಕೃಷ್ಣ ಬರೆದ ಹಾಸ್ಯ ಪ್ರಬಂಧ ನಿಮ್ಮ ಓದಿಗೆ

Read More

ಮುದ್ದೆಯಾದ ಕಾಗದ!

ಮರುದಿನ ಅಜ್ಜಿಯ ಆರೋಗ್ಯ ಮತ್ತಷ್ಟು ಹದೆಗೆಟ್ಟಿತು. ಅವಳಿಗೆ ಎದ್ದು ತಿರುಗಾಡಲು ಆಗಲಿಲ್ಲ. ಮಲಗಿದ್ದಲ್ಲೇ ಮಲಗಿ ಒಂದೇ ಸವನೆ ನರಳತೊಡಗಿದಳು. ಆಗಲೂ ಅಮ್ಮನ ಮನಸ್ಸು ಕರಗಲಿಲ್ಲ. ಊಟ ತಿಂಡಿಯೂ ಹಾಕಲಿಲ್ಲ. ಇವಳಿಗೆ ಮನೆಯಲ್ಲಿಟ್ಟುಕೊಂಡರೆ ನಮಗೂ ರೋಗ ಬರಬಹುದು ಅಂತ ಯೋಚಿಸಿ ಮನೆಯ ಅಂಗಳದಲ್ಲಿ ಮಲಗಲು ಖಡಕ್ಕಾಗಿ ಸೂಚಿಸಿ ಅವಳ ಹಾಸಿಗೆ ಹೊಚ್ಚಿಗೆ ತಾಟು ತಂಬಿಗೆ ಎಲ್ಲವೂ ಬೇರ್ಪಡಿಸಿ ಕೈ ತೊಳೆದುಕೊಂಡಳು. ಈ ಎಲ್ಲ ದೃಶ್ಯಾವಳಿ ನೋಡಿ ರಾಜೂನ ದುಃಖ ಉಕ್ಕಿ ಬಂದಿತು. ಮಲ್ಲಿಕಾಳ ಕರುಳು ಹಿಂಡಿದಂತಾಯಿತು.
ಶರಣಗೌಡ ಬಿ ಪಾಟೀಲ ತಿಳಗೂಳ ಪ್ರಬಂಧ

Read More

ನಾನೂ ವಿದ್ಯುತ್ ತಯಾರಿಸಿದೆ!

ನನಗಿಂತ ದೊಡ್ಡದಾದ ರುಬ್ಬುವ ಕಲ್ಲಿನ ಮುಂದೆ ಕುಳಿತು ಬೆಳಗಿನ ಉಪಾಹಾರಕ್ಕೆ, ಮಧ್ಯಾಹ್ನದ ಭೋಜನಕ್ಕೆ ಮತ್ತೆ ರಾತ್ರಿಯ ಊಟಕ್ಕೆ ರುಬ್ಬುವ ಕೆಲಸ.  ಏಳು-ಎಂಟು ಕೂಲಿಯಾಳುಗಳು ದಿನಾ ಊಟಕ್ಕೆ. ಅಷ್ಟು ಮಾತ್ರವಲ್ಲ ನನ್ನ ತವರಿನ ಕಡೆಯಿಂದ ಬಂದ ಇಬ್ಬರು ಕೆಲಸಗಾರರು ಮನೆಯಲ್ಲೇ ಇರುತ್ತಿದ್ದರು. ಅವರಿಗೆ ರಾತ್ರಿಯೂ ಬೇಯಿಸಿ ಹಾಕುವ ಕೆಲಸ ನನ್ನದಾಗಿತ್ತು. ನೆಂಟರು ಬಂದರೆ ಕೇಳುವುದೇ ಬೇಡ. ಒಟ್ಟಿನಲ್ಲಿ ನನ್ನ ಬದುಕೇ ರುಬ್ಬುವುದರಲ್ಲಿ ಕಳೆದುಹೋಗುತ್ತಿತ್ತು. `ಇದರಿಂದ ನನಗೆ ಬಿಡುಗಡೆ ಯಾವಾಗ? ಎಂದು ಯೋಚಿಸುವಾಗ ವಿದ್ಯುತ್ ತಯಾರಿಸುವ ಯೋಚನೆ ಮನಸ್ಸಿಗೆ ಬಂತು. ಸಹನಾ ಕಾಂತಬೈಲು ಅವರ ‘ಆನೆ ಸಾಕಲು ಹೊರಟವಳು’ ಪುಸ್ತಕದ ಪ್ರಬಂಧ  ಇಲ್ಲಿದೆ. 

Read More

ನಮ್ಮೂರ ಆಸ್ಪತ್ರೆಯ ನೆನಪುಗಳು

ನಾನೆಷ್ಟೇ ಬೇಡವೆಂದುಕೊಂಡರೂ ನಮ್ಮ ಶಾಲೆಯ ಕಡೆಯಿಂದ ಕನಿಷ್ಠ ವರ್ಷಕ್ಕೊಮ್ಮೆಯಾದರೂ ಆಸ್ಪತ್ರೆಗೆ ತಪಾಸಣೆಗೆ ಕರೆದೊಯ್ಯುತ್ತಿದ್ದರು. ಸಾಲದ್ದಕ್ಕೆ ಅದು ಬೇರೆ ಚುಚ್ಚುಮದ್ದುಗಳ ಕಾಲ! ಸರ್ಕಾರೀ ಶಾಲೆಯಾದ್ದರಿಂದ, ಸರ್ಕಾರದ್ದೇ ನಿರ್ದೇಶನದ ಮೇರೆಗೆ ಹೇಳದೇ ಕೇಳದೇ ನಮ್ಮನ್ನು ಇದ್ದಕ್ಕಿದ್ದಂತೆ ಆಸ್ಪತ್ರೆಗೆ ನಡೆಸಿಕೊಂಡುಹೋಗಿ ವೈದ್ಯರ ಕೋಣೆಯ ಹೊರಗೆ ಸಾಲಾಗಿ ನಿಲ್ಲಿಸಿಬಿಡುತ್ತಿದ್ದರು. ನನಗಂತೂ ಈ ಇಂಜಕ್ಷನ್ ಎಂದರೆ ಇನ್ನಿಲ್ಲದ ಭಯ. ಎಂದಿನಂತೆ ನಡೆಯುತ್ತಿದ್ದ ತರಗತಿಯ ಮಧ್ಯೆ ಇದ್ದಕ್ಕಿದ್ದಂತೆ ಒಳಪ್ರವೇಶಿಸಿದ ಮುಖ್ಯಶಿಕ್ಷಕರು ‘ಎಲ್ಲರೂ ಸಾಲಾಗಿ ಆಸ್ಪತ್ರೆಯ ಕಡೆ ನಡೆಯಿರಿ. ಯಾರೂ ಗಲಾಟೆ ಮಾಡಬಾರದು’ ಎಂದು ಉಗ್ರ ದನಿಯಲ್ಲಿ ಘೋಷಿಸಿಬಿಟ್ಟರು.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ