ಉತ್ತಮ ಪೂರ್ವಜರಾಗುವುದು ಹೇಗೆ?

ನಮ್ಮಲ್ಲಿ ಅರಣ್ಯ ವಿಸ್ತೀರ್ಣ ಹೆಚ್ಚಾಗಿದೆ ಎಂದು ಉಪಗ್ರಹ ಚಿತ್ರಗಳ ಆಧರಿಸಿ ಸರಕಾರಿ ಅಂಕಿ ಅಂಶಗಳ ಘೋಷಣೆಯಾಗುತ್ತದೆ. ಅಂಥ ಅರಣ್ಯದಲ್ಲಿ ಜೀವಾವಾಸ ನಿಜಕ್ಕೂ ಹೆಚ್ಚಾಗಿದೆಯೆ, ಪಶುಪಕ್ಷಿಗಳ ಸಂಖ್ಯೆ, ದುಂಬಿ-ಜೇನ್ನೊಣಗಳ ಸಾಂದ್ರತೆ ಹೆಚ್ಚಿದೆಯೆ, ನದಿ ಕೊಳ್ಳಗಳಲ್ಲಿ ಜಲಚರಗಳ ಸಂಖ್ಯೆ ಹೆಚ್ಚಾಗಿದೆಯೆ, ಅದು ಗೊತ್ತಿರುವುದಿಲ್ಲ. ಮಳೆ ಚೆನ್ನಾಗಿ ಸುರಿದಾಗ ಎಲ್ಲ ಕೆರೆಕಟ್ಟೆಗಳಲ್ಲೂ ನೀರು ತುಂಬಿ ಹೊರಕ್ಕೆ ಹರಿಯುತ್ತದೆ; ಆದರೆ ಅಂಥ ಕೆರೆಗಳಲ್ಲಿ ಹೂಳು ಎಷ್ಟು ತುಂಬಿದೆ ಎಂಬುದು ಲೆಕ್ಕಕ್ಕೆ ಬರುವುದೇ ಇಲ್ಲ.
ಪರಿಸರವಾದಿ ನಾಗೇಶ ಹೆಗಡೆಯವರ ಹೊಸ ಕೃತಿ “ಅಪಾಯ ಬಂದಿದೆ: ಅಡಗಲು ಸ್ಥಳವೆಲ್ಲಿ?”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More