Advertisement

Tag: Guruprasad Kurtakoti

ಯಾರು ಹಿತವರು ನಮಗೆ?: ಗುರುಪ್ರಸಾದ ಕುರ್ತಕೋಟಿ ಅಂಕಣ

ಪಟ್ಟಣಗಳಲ್ಲಿ ಹಲವು ವರ್ಷಗಳು ಇದ್ದು ರೂಢಿಯಾದವರಿಗೆ ಹಳ್ಳಿಗೆ ಹೋಗಿ ಇರುವುದು ಅಷ್ಟು ಸುಲಭ ಅಲ್ಲ.. ಸೌಲಭ್ಯಗಳು ಅಲ್ಲಿ ಸುಧಾರಿಸಿವೆ, ಸಿಗ್ನಲ್‌ನಿಂದ ಹಿಡಿದು ಹಲವಾರು ವ್ಯವಸ್ಥೆಗಳು ಈಗ ಅಲ್ಲಿವೆಯಾದರೂ ಜನರ ಮನಸ್ಥಿತಿ ಹಾಗೂ ಕೆಲವು ಪ್ರಶ್ನೆಗಳು ಹೈರಾಣು ಮಾಡುತ್ತವೆ! ಆದರೆ ಕ್ರಮೇಣ ಅದನ್ನು ತಮಾಷೆಯಾಗಿ ತೆಗೆದುಕೊಂಡರೆ ನಮ್ಮ ತಲೆ ಹಾಳು ಮಾಡಿಕೊಳ್ಳುವುದು ತಪ್ಪುತ್ತದೆ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣದ ಹೊಸ ಬರಹ ನಿಮ್ಮ ಓದಿಗೆ

Read More

ಬೆಳೆದ ಅಕ್ಕಿಯ ಉಣ್ಣುವ ತವಕ…: ಗುರುಪ್ರಸಾದ ಕುರ್ತಕೋಟಿ ಅಂಕಣ

ಇದೊಂಥರ ವೈರುಧ್ಯ. ಚೆನ್ನಾಗಿದೆ ಆದರೂ ತಿನ್ನೋಲ್ಲ! ಯಾಕಿರಬಹುದು? ಬಹುಶಃ ಬೆಳ್ಳಗೆ ಪಾಲಿಶ್ ಮಾಡಿದ ರೇಷನ್ ಅಕ್ಕಿಯನ್ನು ತಿಂದು ತಿಂದು ಅವರಿಗೆ ರೂಡಿ ಆಗಿಬಿಟ್ಟಿದೆಯೋ ಏನೋ. ತವಡನ್ನು ತೆಗೆದು ಅದರಲ್ಲಿ ಏನೂ ಇರದಂತೆ ಮಾಡಿ ಪಾಲಿಶ್ ಮಾಡಿ ಕೊಡುವ ಅಕ್ಕಿಯೇ ಎಲ್ಲರಿಗೂ ಪ್ರಿಯ. ಶ್ರೀಮಂತರು ಅಷ್ಟೇ ಯಾಕೆ ತಿನ್ನಬೇಕು ಎಲ್ಲರೂ ತಿನ್ನೋಣ ಅಂತ ಇವರೂ ಪಾಲಿಶ್ ಅಕ್ಕಿಯ ಮೊರೆ ಹೋದರೆ? ಇದೆ ಕಾರಣಕ್ಕೆ ಶ್ರೀಮಂತರಿಗೆ ಬರುವ ಸಕ್ಕರೆ ಕಾಯಿಲೆ, ಹೃದಯ ರೋಗ ಈಗ ಎಲ್ಲರಿಗೂ ಬರುತ್ತಿದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಕೊನೆಗೂ ಕೈಗೆ ಬಂದ ಭತ್ತ!: ಗುರುಪ್ರಸಾದ ಕುರ್ತಕೋಟಿ ಅಂಕಣ

ಎರಡು ಟ್ರಾಕ್ಟರ್ ಮೇಲೆ ಸ್ವಲ್ಪ ಹೆಚ್ಚು ಭತ್ತ ಸಿಕ್ಕಿತ್ತು. ಅದು ಹೆಚ್ಚು ಕಡಿಮೆ 25 ಚೀಲ ಆಗುತ್ತೆ ಎಂಬ ಅಂದಾಜು ಸಿಕ್ಕಿತು. ಒಂದು ಚೀಲ ಅರವತ್ತು ಕೆಜಿ ತೂಕ. ಹೀಗಾಗಿ ನಮಗೆ ಸಿಕ್ಕಿದ್ದು 1500 ಕೆಜಿ ಭತ್ತ. ಅದನ್ನು ಅಕ್ಕಿ ಮಾಡಿಸಿದರೆ ಹೆಚ್ಚು ಕಡಿಮೆ 1೦೦೦ ಕೆಜಿ ಅಕ್ಕಿ ಸಿಕ್ಕೀತು. ಅದು ಪ್ರಥಮ ಬಾರಿ ಬೆಳೆದ ನಮ್ಮ ಮಟ್ಟಿಗೆ ತುಂಬಾ ಹೆಮ್ಮೆಯ ಸಂಗತಿಯೇ ಆಗಿತ್ತು. ಆದರೆ ಅಲ್ಲಿಯವರೆಗೆ ಬರಲಿಕ್ಕೆ ಇನ್ನೂ ತುಂಬಾ ಸಮಯ ಇತ್ತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಇದ್ದ ಮೂವರಲ್ಲಿ ಕದ್ದವರು ಯಾರು?

ಹಿಂದೊಮ್ಮೆ ಹುಸೇನ್ ಸಾಬ್‌ಗೆ ಹೊಲ ಮಾಡಲು ಕೊಟ್ಟಾಗ ಸುತ್ತಲೂ ಒಂದೈವತ್ತು ಅಪ್ಪೆ ಮಿಡಿ ಗಿಡಗಳನ್ನು ನೆಟ್ಟಿದ್ದೆ. ಸ್ವಲ್ಪ ಬೆಳೆದಾದ ಮೇಲೆ ಪೂರ್ತಿ ಗಿಡಗಳನ್ನು ಬೆಂಕಿ ಹಚ್ಚಿ ಇಲ್ಲದಂತೆ ಮಾಡಿದ್ದರು. ಬೆಂಕಿ ಹಚ್ಚಿದ್ದು ಯಾರು ಅಂತ ಕೊನೆಗೂ ಗೊತ್ತಾಗಲಿಲ್ಲ. ಒಬ್ಬರ ಮೇಲೆ ಒಬ್ಬರು ಹಾಕಿ ನನ್ನನ್ನು ಮಂಗ ಮಾಡಿದ್ದರು! ಇಲ್ಲಿನವರೆ ಕಳ್ಳರು, ಆ ಜಾತಿಯವರನ್ನು ನಂಬಬಾರದು ಅಂತೆಲ್ಲ ಹೇಳೋದೆಲ್ಲ ತಪ್ಪು. ಕಳ್ಳರದೇ ಒಂದು ಪ್ರತ್ಯೇಕ ಜಾತಿ! ಏನಾಗುತ್ತೋ ನೋಡೋಣ ಅಂತ ಸುಮ್ಮನಾದೆ. ಆದರೂ ಮುಂದೊಮ್ಮೆ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಬೇಕು ಅಂತ ನಿರ್ಧರಿಸಿದೆ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 17ನೇ ಕಂತು

Read More

ನಿಮ್ಮ ಜಾತಿ ಯಾವುದು!

ಹೊಲದ ಹತ್ತಿರ ಅನ್ನುವ ಕಾರಣಕ್ಕೆ ನನಗೆ ಮನೆ ಇಷ್ಟವಾಯ್ತು. ಮನೆಯನ್ನು ಕೂಲಂಕುಷವಾಗಿ ನೋಡಿದ ಮೇಲೆ ಗೌಡರ ಜೊತೆಗೆ ಮಾತಾಡಲು ಅಲ್ಲೇ ಹತ್ತಿರವೇ ಇದ್ದ ಅವರ ಮನೆಗೆ ಹೋದೆ. ಹೆಸರು ಕೇಳಿದವರೆ ಯಾವ ಜಾತಿ ನಿಮ್ಮದು ಅಂದರು. ನನಗೆ ತುಂಬಾ ಇರುಸು ಮುರುಸು ಆಯ್ತು. ನಾನು ಯಾರಿಗೂ ಜಾತಿ ಕೇಳೋದಿಲ್ಲ, ನನಗೆ ಯಾರಾದರೂ ಕೇಳಿದರೂ ನನಗೆ ಆಗೋಲ್ಲ. ಆದರೆ ಹಳ್ಳಿಯಲ್ಲಿ ಜಾತಿ ವ್ಯವಸ್ಥೆ ಇನ್ನೂ ಗಟ್ಟಿಯಾಗಿಯೇ ಇದೆ. ನನ್ನ ಜಾತಿ ಯಾಕೆ ಬೇಕು ಅಂತ ಕೇಳಿದಾಗ “ಒಳ್ಳೆಯವರಿಗೆ ಕೊಡಬೇಕಲ್ರಿ ಮನಿ ಅದಕ್ಕ ಕೇಳತೀವಿ” ಅಂದರು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ