Advertisement

Tag: guruprasad kurthakoti

ಹಳ್ಳಿಯ ಸಹವಾಸವೇ ಬೇಡ…!

ಕಾರ್ಪೊರೇಟ್ ಜಗತ್ತಿನಲ್ಲಿ ನಡೆಯುವ ರಾಜಕೀಯಗಳಿಂದ ರೋಸಿ ಹೋಗಿ ಕೆಲಸ ಬಿಟ್ಟು ಬಂದು ಹಳ್ಳಿಯಲ್ಲಿ ನೆಮ್ಮದಿ ಕಾಣಬೇಕು ಅಂದರೆ ಇಲ್ಲಿ ಇನ್ನೂ ಹದಗೆಟ್ಟ ಪರಿಸ್ಥಿತಿ ಇದೆ ಅನಿಸಿತು. ಸುಳ್ಳುಗಳು, ಜಾತಿ, ಕಳುವು ಇನ್ನೂ ಏನೇನು ನೋಡೋದು ಇದೆಯೋ ಇಲ್ಲಿ ಅನಿಸಿತು. ಅತ್ತೆ ಮಾವ ನಮ್ಮ ಸಂಬಂಧಿಯೇ ಆಗಿದ್ದರೂ ಅವರು ನಮ್ಮ ಪರವಾಗಿ ನಿಲ್ಲಲಾರರು ಎಂಬ ಕಟು ಸತ್ಯದ ಅರಿವು ಆಗಿತ್ತು. ಎಷ್ಟೇ ಅಂದರೂ ಅಲ್ಲಿನ ಜನರ ಜೊತೆಗೆ ಬದುಕುವ ಅವರು, ಎಲ್ಲಿಂದಲೋ ಬಂದ ಯಾವಾಗಲೋ ಒಮ್ಮೆ ಬಂದು ಹೋಗುವ ನನ್ನ ಪರವಾಗಿ ಹೇಗೆ ತಾನೇ ನಿಂತಾರು?
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 18ನೇ ಕಂತು

Read More

ಕಳೆ ಕತ್ತರಿಸುವ ಯಂತ್ರ ಎಂಬ ಅದ್ಭುತ ಸಾಧನ

ನನ್ನ ಕಾರ್‌ನಲ್ಲಿ ಹಿಂದಿನ ಸೀಟು ಖಾಲಿ ಇತ್ತು. ಹಾಗೆಯೇ ಹೋಗುತ್ತಾ ನಾಲ್ಕು ಹುಡುಗರಿಗೆ ಶಾಲೆಯವರೆಗೆ ಲಿಫ್ಟ್ ಕೊಡೋಣ ಅನಿಸಿತು. ಒಂದು ಹುಡುಗರ ಗುಂಪಿನ ಪಕ್ಕ ಗಕ್ಕಂತ ನಿಲ್ಲಿಸಿದೆ. ನಾನು ಏನೋ ಹೇಳುವಷ್ಟರಲ್ಲಿ ಒಬ್ಬ ಹುಡುಗ ಹಿಂದೆ ಓಡಲು ಶುರು ಮಾಡಿದ. ಅವನ ಜೊತೆಗೆ ಉಳಿದ ಹುಡುಗರೂ ಓಡತೊಡಗಿದರು! ಅಯ್ಯೊ ದೇವ್ರೆ ನನ್ನನ್ನ ಕಿಡ್ನ್ಯಾಪರ್‌ ಅಂದುಕೊಂಡರೋ ಏನೋ!? ಉಪಕಾರ ಮಾಡೋದು ಬೇಡವೇ ಬೇಡ ಅಂತ ನಾನು ಮುಂದೆ ಹೊರಟೆ. ನನ್ನ ಮುಖವನ್ನು ಕಾರಿನ ಕನ್ನಡಿಯಲ್ಲಿ ನೋಡಿಕೊಂಡೆ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಅಯ್ಯೋ ಸರ್ ಇಲ್ಲಿ ಹಲ್ಲಿಗಳು ಇವೆ!

ನನ್ನ ಬೆಂಗಳೂರಿನ ತರಬೇತಿಗಳು ಮುಗಿದ ತಕ್ಷಣ ನಾನು ರಾಮ್ ಇಬ್ಬರೂ ಕಾರಿನಲ್ಲಿ ಹಳ್ಳಿಗೆ ಹೊರಟೆವು. ಅದೇ ವಾರಾಂತ್ಯದಲ್ಲಿ ವಿನೋದ ಅವರಿಗೂ ಕೂಡ ಬರಲು ಹೇಳಿದ್ದೆ. ಅವರೂ ಹಳ್ಳಿಯಲ್ಲಿ ನಾವು ಸಧ್ಯ ವಾಸಕ್ಕಿದ್ದ ಹೊಸ ಮನೆಯನ್ನು ಇನ್ನೂ ನೋಡಿರಲಿಲ್ಲ. ಅದೂ ಅಲ್ಲದೆ ರಾಮನನ್ನು ಅವರಿಗೆ ಪರಿಚಯಿಸಿದಂತಾಗುತ್ತದೆ ಎಂಬುದು ನನ್ನ ಯೋಚನೆ. ಬೆಂಗಳೂರಿನಿಂದ ನಮ್ಮ ಹಳ್ಳಿಗೆ ಹೋಗಲು ಹೆಚ್ಚು ಕಡಿಮೆ ಏಳು ಗಂಟೆಗಳು ಬೇಕು. ರಾಮನಿಗೆ ಅದು ಮೊದಲ ಆಘಾತ!
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ಕ್ರಮೇಣ ನಮಗೆ ಊರು ಪರಿಚಯವಾಗತೊಡಗಿತ್ತು. ಅದು ತುಂಬಾ ಮುಖ್ಯ. ಯಾವ ಊರಿನಲ್ಲಿ ನಾವು ಬೆಳೆಯಲು ಬಯಸುತ್ತೇವೋ ಅಲ್ಲಿನ ಜನರ ಜೊತೆಗೆ ಬೆಳೆಯಬೇಕೆ ವಿನಹ ನಮ್ಮಷ್ಟಕ್ಕೆ ನಾವು ಇರಲು ಸಾಧ್ಯವಿಲ್ಲ. ಇದೆ ರೀತಿ ನಾವು ನಮ್ಮ ಹೊಲದ ಬಳಿಯ ಜನರಿಗೂ ಹತ್ತಿರವಾಗಬೇಕಿತ್ತು. ಅದು ಇನ್ನೂ ಸಾಧ್ಯವಾಗಿರಲಿಲ್ಲ. ನಮಗಿನ್ನೂ ಅಲ್ಲೊಂದು ಮನೆ ಸಿಕ್ಕಿರಲಿಲ್ಲ. ಆದರೆ ಅದಕ್ಕಿಂತ ಮೊದಲು ಶಂಭುಲಿಂಗ ಹೆಗಡೆ ಅವರು ನಮಗೆ ಸಿಕ್ಕಿದ್ದು ತುಂಬಾ ಅನುಕೂಲ ಆಗಿತ್ತು. ಅವರು ನಮಗೆ ಬೇಕಾದ ಮೂಲಭೂತ ಸೌಕರ್ಯಗಳನ್ನೆಲ್ಲ ಚಿಟಿಕೆ ಹೊಡೆದಂತೆ ಕೊಡಿಸಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣದಲ್ಲಿ ಹೊಸ ಬರಹ

Read More

ಬೋರ್‌ವೆಲ್ ಮತ್ತು ʻನೀರʼಕ್ಷರಿಗಳು

ಕಡೆಗೊಮ್ಮೆ ಬೋರ್ ಕೊರೆಸುವ ಮನಸ್ಸು ಮಾಡಿದೆವು. ನೀರಿನ ಸೆಲೆಯನ್ನು ಕಂಡು ಹಿಡಿಯುವುದು ಅತ್ಯಂತ ಕ್ಲಿಷ್ಟವಾದ ಕೆಲಸ. ಮೇಲೆ ನಿಂತುಕೊಂಡು ಭೂಮಿಯಲ್ಲಿ ಇಷ್ಟು ಆಳದಲ್ಲಿ ನೀರು ಸಿಗುತ್ತದೆ ಅಂತ ಹೇಳುವುದು ಸುಲಭ ಅಲ್ಲ. ಆದರೆ ಹಾಗೆ ಹೇಳುತ್ತೇವೆ ಅಂತ ತೆಂಗಿನಕಾಯಿ ಸರ್ಕಸ್ ಮಾಡಿ ಜನರನ್ನು ಯಾಮಾರಿಸುವ ತುಂಬಾ ಜನರು ಹುಟ್ಟಿಕೊಂಡಿದ್ದಾರೆ. ತೆಂಗಿನಕಾಯಿ ಅಲುಗಾಡಿಸಿ ಒಂದು ಪಾಯಿಂಟ್ ತೋರಿಸಿ ಅಲ್ಲಿ ನೀರು ಬರದಿದ್ದರೆ ಅರ್ಧ ದುಡ್ಡು ವಾಪಸ್ಸು ಅಂತ ಹೇಳುವವರೂ ಇದ್ದಾರೆ. ಹತ್ತಿದರೆ ಅವರಿಗೆ ಲಾಟರಿ. ಇಲ್ಲದಿದ್ದರೆ ಅವರಿಗೆ ಅರ್ಧ ದುಡ್ಡು. ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ