Advertisement

Tag: H Gopalakrishna

ಮರೆತುಹೋಗುತ್ತಿದ್ದೆ ಬಿಲ್ಲು ಪಾವತಿಸಲು!: ಎಚ್. ಗೋಪಾಲಕೃಷ್ಣ ಸರಣಿ

ಮದುವೆ ಆದ ಮೇಲೆ ನನ್ನಾಕೆಗೆ ಈ ಕೇಸರಿಬಾತ್ ಕತೆ ಹೇಳಿದ್ದೆ. ನಂತರ ನಾನೂ ಅವಳೂ ಬೆಳಿಗ್ಗೆ, ನನಗೆ ಸೆಕೆಂಡ್ ಶಿಫ್ಟ್ ಇದ್ದಾಗ ಕೇಸರಿ ಭಾತ್‌ಗೆ ಲಗ್ಗೆ ಹಾಕ್ತಾ ಇದ್ದೆವು. ಆಗ ತಿಂದ ಡಬರಿ ಗಟ್ಟಲೆ ಕೆಸರಿಭಾತಿನ ರುಚಿ ನನಗೆ ಈಗಲೂ ಬಾಯಿ ಸಮುದ್ರ ಮಾಡುತ್ತೆ. ಸಣ್ಣ ವಯಸ್ಸು, ಕಲ್ಲು ತಿಂದು ಅರಗಿಸಿಕೊಳ್ಳುವ ಯೌವ್ವನ ಹಾಗೂ ಸಕ್ಕರೆ ಖಾಯಿಲೆ ಅಂಟುವ ವಯಸ್ಸಲ್ಲ, ಅದರಿಂದ ಅದೆಷ್ಟೋ ಕ್ವಿಂಟಾಲ್ ಕೇಸರಿಬಾತ್‌ಗೆ ಮುಕ್ತಿ ಕಾಣಿಸಿದ್ದೆವು. ಇದು ಸುಮಾರು 83ನೇ ಇಸವಿಯವರೆಗೆ ಅನೂಚಾನವಾಗಿ ನಡೆದುಕೊಂಡು ಬಂತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ತಾವಾಗೇ ಬಿದ್ದವರು ನನ್ನ ಬೈದಿದ್ದರು!: ಎಚ್. ಗೋಪಾಲಕೃಷ್ಣ ಸರಣಿ

ಬರ್ತಾ ಬರ್ತಾ ಅಜ್ಜಿ ಒಂದು ಗುಂಡಿಯಲ್ಲಿ ನೋಡದೆ ಕಾಲು ಇಟ್ಟಿತು. ಮೊಗಚಿಕೊಂಡು ಹಳ್ಳದಲ್ಲಿ ಮುಖಾಡೆ ಬಿದ್ದು ಬಿಡ್ತು. ಎಪ್ಪತ್ತು ವರ್ಷದ ಕೆಂಪು ಸೀರೆ ಉಟ್ಟ ಮಡಿ ಹೆಂಗಸು ಅಜ್ಜಿ ಆಗ. ತೆಳು ದೇಹ, ಮುಟ್ಟಿದ ಕಡೆ ಎಲ್ಲಾ ಮೂಳೆಗಳೇ, ಬೊಚ್ಚು ಬಾಯಿ ವಟ ವಟ ವಟ ನಾನ್ ಸ್ಟಾಪ್ ಮಾತು. ಅದು ಹೇಗೋ ಅವರನ್ನು ಮೇಲೆ ಎಬ್ಬಿಸಿದೆ. ದಾರಿ ಉದ್ದಕ್ಕೂ ಅದರ ಕೈಲಿ ಸಹಸ್ರ ನಾಮ ಮಾಡಿಸಿಕೊಂಡೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ದೇವಸ್ಥಾನಗಳ ವಾಸಸ್ಥಾನ….: ಎಚ್. ಗೋಪಾಲಕೃಷ್ಣ ಸರಣಿ

ಆಗ ಮೈಸೂರು ರಾಜ್ಯದಲ್ಲಿ ಊದುಬತ್ತಿ ತಯಾರಿಕೆ ಮತ್ತು ಮಾರಾಟ ಉಚ್ಛ್ರಾಯ ಸ್ಥಿತಿಯಲ್ಲಿತ್ತು. ಮುದ್ದಣ್ಣ ಬ್ರಾಂಡ್‌ನ ತುಂಬಾನೇ ದೊಡ್ಡ ಬೋರ್ಡ್ (ರಸ್ತೆ ಅಗಲದ್ದು) ಒಂದು ಚಿಕ್ಕ ಪೇಟೆಯಲ್ಲಿ ನೋಡಿದ್ದ ನೆನಪು ನನಗಿದೆ. ಪ್ರಕಾಶ ನಗರ, ಶ್ರಿರಾಮಪುರದ ಪ್ರತಿ ಮನೆಯ ಮುಂದೂ ಎಲ್ಲಾ ವಯಸ್ಸಿನ ಹೆಂಗಸರು ಊದು ಬತ್ತಿ ಹೊಸೆಯುತ್ತಾ ಕುಳಿತಿರುತ್ತಿದ್ದ ಗುಂಪನ್ನು ಕಾಣಬಹುದಿತ್ತು. ಅದೆಷ್ಟೋ ಸಾವಿರ ಕಡ್ಡಿ ಹೊಸೆದರೆ ಕೆಲವು ಆಣೆ ಕೂಲಿ. ಸಂಸಾರ ತೂಗಿಸುವಲ್ಲಿ ಮಹಿಳೆಯರೂ ಸಹ ಪ್ರಮುಖ ಪಾತ್ರ ವಹಿಸುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ರಾತ್ರಿ ತೀರಿಕೊಂಡ ತಾತ ಬೆಳಗ್ಗೆ ಎದ್ದು ಬಂದಿದ್ದರು!

ಎಲ್ಲರೂ ಕೂತು ತೂಕಡಿಸುತ್ತಾ ಇದ್ದೀವಿ. ಊರುಗೋಲು ಟಕ್ ಟಕ್ ಎಂದು ಹೆಜ್ಜೆ ಸಮೇತ ಶಬ್ದ ಕೇಳಿಸಿತು. ಕಣ್ಣು ಬಿಟ್ಟು ನೋಡಿದರೆ ಅದೇನು ಆಶ್ಚರ್ಯ ಅಂತೀರಿ… ತಾತ ಕೋಲು ಊರಿಕೊಂಡು ಬಚ್ಚಲಿಗೆ ಹೋಗುತ್ತಿದ್ದಾರೆ! ತಾತ ಬದುಕಿದೆ, ಸತ್ತಿಲ್ಲ. ಖುಷಿಯಿಂದ ಮೊಮ್ಮಕ್ಕಳು ಕುಣಿದಾಡಿದರು. ದೊಡ್ಡವರೂ ಸಹ ದೊಡ್ಡ ನಿಟ್ಟುಸಿರುಬಿಟ್ಟು ಮುಖದಲ್ಲಿ ನಗು ತಂದುಕೊಂಡರು. ಬೆಳಿಗ್ಗೆ ಎದ್ದ ಕೂಡಲೇ ಡಾಕ್ಟರ ಮನೆಗೆ ನನ್ನನ್ನೇ ಕಳಿಸಿದರು. ತಾತ ಬದುಕಿದೆ, ಹೀಗೆ ರಾತ್ರಿ ಒಂದೂವರೆಗೆ ಅವರೇ ಎದ್ದು ಒಂದಕ್ಕೆ ಹೋದರು ಅಂತ ಹಾವಭಾವ ಸಮೇತ ವಿವರಿಸಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಕನ್ನಡ ಚಳವಳಿಯ ಕಾಲದಲ್ಲಿ…

ಕನ್ನಡ ಸಂಯುಕ್ತ ರಂಗ ಎನ್ನುವ ಸಂಘಟನೆ ಚಳವಳಿಗೆ ಅಂತಲೇ ರೂಪುಗೊಂಡಿತ್ತು. ರಾಮಮಂದಿರದ ಬಳಿಯ ಒಂದು ಅಂಗಡಿಯ ಮೇಲೆ ಎರಡು ಮೈಕ್ ಸ್ಟಾಂಡ್ ಇಟ್ಟು ಮೂರು ನಾಲ್ಕು ಕಬ್ಬಿಣದ ಫೋಲ್ಡಿಂಗ್ ಖುರ್ಚಿ ಹಾಕುತ್ತಿದ್ದ ವೇದಿಕೆ ಅದು. ಪಕ್ಕದಲ್ಲೇ ಇಪ್ಪತ್ತು ಮೂವತ್ತು ಅಡಿ ಎತ್ತರದ ಬೊಂಬಿನ ಏಣಿ ಇಟ್ಟಿರುತ್ತಿದ್ದರು. ಅದರ ಮೂಲಕ ಅಂಗಡಿ ಚಾವಣಿ ಏರುತ್ತಿದ್ದರು, ಭಾಷಣಕಾರರು. ಒಬ್ಬೊಬ್ಬರ ಭಾಷಣವೂ ಉದ್ರೇಕ ರಹಿತ ಮತ್ತು ಅತ್ಯಂತ ಸೌಮ್ಯ. ಹೇಳಬೇಕಾದ್ದನ್ನು ಅತಿಶಯೋಕ್ತಿ ಇಲ್ಲದೆ ಚಿಕ್ಕ ಚೊಕ್ಕದಾಗಿ ಹೇಳುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ