Advertisement

Tag: India

ಹಳ್ಳಿಯ ಸಹವಾಸವೇ ಬೇಡ…!

ಕಾರ್ಪೊರೇಟ್ ಜಗತ್ತಿನಲ್ಲಿ ನಡೆಯುವ ರಾಜಕೀಯಗಳಿಂದ ರೋಸಿ ಹೋಗಿ ಕೆಲಸ ಬಿಟ್ಟು ಬಂದು ಹಳ್ಳಿಯಲ್ಲಿ ನೆಮ್ಮದಿ ಕಾಣಬೇಕು ಅಂದರೆ ಇಲ್ಲಿ ಇನ್ನೂ ಹದಗೆಟ್ಟ ಪರಿಸ್ಥಿತಿ ಇದೆ ಅನಿಸಿತು. ಸುಳ್ಳುಗಳು, ಜಾತಿ, ಕಳುವು ಇನ್ನೂ ಏನೇನು ನೋಡೋದು ಇದೆಯೋ ಇಲ್ಲಿ ಅನಿಸಿತು. ಅತ್ತೆ ಮಾವ ನಮ್ಮ ಸಂಬಂಧಿಯೇ ಆಗಿದ್ದರೂ ಅವರು ನಮ್ಮ ಪರವಾಗಿ ನಿಲ್ಲಲಾರರು ಎಂಬ ಕಟು ಸತ್ಯದ ಅರಿವು ಆಗಿತ್ತು. ಎಷ್ಟೇ ಅಂದರೂ ಅಲ್ಲಿನ ಜನರ ಜೊತೆಗೆ ಬದುಕುವ ಅವರು, ಎಲ್ಲಿಂದಲೋ ಬಂದ ಯಾವಾಗಲೋ ಒಮ್ಮೆ ಬಂದು ಹೋಗುವ ನನ್ನ ಪರವಾಗಿ ಹೇಗೆ ತಾನೇ ನಿಂತಾರು?
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 18ನೇ ಕಂತು

Read More

ಇದ್ದ ಮೂವರಲ್ಲಿ ಕದ್ದವರು ಯಾರು?

ಹಿಂದೊಮ್ಮೆ ಹುಸೇನ್ ಸಾಬ್‌ಗೆ ಹೊಲ ಮಾಡಲು ಕೊಟ್ಟಾಗ ಸುತ್ತಲೂ ಒಂದೈವತ್ತು ಅಪ್ಪೆ ಮಿಡಿ ಗಿಡಗಳನ್ನು ನೆಟ್ಟಿದ್ದೆ. ಸ್ವಲ್ಪ ಬೆಳೆದಾದ ಮೇಲೆ ಪೂರ್ತಿ ಗಿಡಗಳನ್ನು ಬೆಂಕಿ ಹಚ್ಚಿ ಇಲ್ಲದಂತೆ ಮಾಡಿದ್ದರು. ಬೆಂಕಿ ಹಚ್ಚಿದ್ದು ಯಾರು ಅಂತ ಕೊನೆಗೂ ಗೊತ್ತಾಗಲಿಲ್ಲ. ಒಬ್ಬರ ಮೇಲೆ ಒಬ್ಬರು ಹಾಕಿ ನನ್ನನ್ನು ಮಂಗ ಮಾಡಿದ್ದರು! ಇಲ್ಲಿನವರೆ ಕಳ್ಳರು, ಆ ಜಾತಿಯವರನ್ನು ನಂಬಬಾರದು ಅಂತೆಲ್ಲ ಹೇಳೋದೆಲ್ಲ ತಪ್ಪು. ಕಳ್ಳರದೇ ಒಂದು ಪ್ರತ್ಯೇಕ ಜಾತಿ! ಏನಾಗುತ್ತೋ ನೋಡೋಣ ಅಂತ ಸುಮ್ಮನಾದೆ. ಆದರೂ ಮುಂದೊಮ್ಮೆ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಬೇಕು ಅಂತ ನಿರ್ಧರಿಸಿದೆ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 17ನೇ ಕಂತು

Read More

ನಿಮ್ಮ ಜಾತಿ ಯಾವುದು!

ಹೊಲದ ಹತ್ತಿರ ಅನ್ನುವ ಕಾರಣಕ್ಕೆ ನನಗೆ ಮನೆ ಇಷ್ಟವಾಯ್ತು. ಮನೆಯನ್ನು ಕೂಲಂಕುಷವಾಗಿ ನೋಡಿದ ಮೇಲೆ ಗೌಡರ ಜೊತೆಗೆ ಮಾತಾಡಲು ಅಲ್ಲೇ ಹತ್ತಿರವೇ ಇದ್ದ ಅವರ ಮನೆಗೆ ಹೋದೆ. ಹೆಸರು ಕೇಳಿದವರೆ ಯಾವ ಜಾತಿ ನಿಮ್ಮದು ಅಂದರು. ನನಗೆ ತುಂಬಾ ಇರುಸು ಮುರುಸು ಆಯ್ತು. ನಾನು ಯಾರಿಗೂ ಜಾತಿ ಕೇಳೋದಿಲ್ಲ, ನನಗೆ ಯಾರಾದರೂ ಕೇಳಿದರೂ ನನಗೆ ಆಗೋಲ್ಲ. ಆದರೆ ಹಳ್ಳಿಯಲ್ಲಿ ಜಾತಿ ವ್ಯವಸ್ಥೆ ಇನ್ನೂ ಗಟ್ಟಿಯಾಗಿಯೇ ಇದೆ. ನನ್ನ ಜಾತಿ ಯಾಕೆ ಬೇಕು ಅಂತ ಕೇಳಿದಾಗ “ಒಳ್ಳೆಯವರಿಗೆ ಕೊಡಬೇಕಲ್ರಿ ಮನಿ ಅದಕ್ಕ ಕೇಳತೀವಿ” ಅಂದರು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಹೃದಯ ವೈಶಾಲ್ಯತೆಗೆ ಬೇಲಿ ಹಾಕಿಕೊಳ್ಳುವ ಅನಿವಾರ್ಯ!

ನಾವು ಮಾನವೀಯತೆಯಿಂದ ಯೋಚಿಸುವುದನ್ನು ಹಳ್ಳಿಯಲ್ಲಿ ಬೇರೆಯ ತರಹವೆ ನೋಡುತ್ತಾರೆ! ನಾವು ಕೇಳದೆ ಅವರಿಗೆ ಹೀಗೆ ಬೋನಸ್‌ಗಳನ್ನು ಕೊಟ್ಟರೆ ನಾವು ಅವರಿಗೆ ತುಂಬಾ ಹಣವಂತರ ಹಾಗೆ ಕಾಣುತ್ತೇವೆ. ಅದು ನಮಗೆ ಆಮೇಲಾಮೇಲೆ ನಿಧಾನವಾಗಿ ಅರ್ಥವಾಗತೊಡಗಿತು! ಅಲ್ಲಿ ಹೇಗಿರಬೇಕು ಅಂದರೆ, ತುಂಬಾ ಚೌಕಾಶಿ ಮಾಡಬೇಕು, ಒಂದು ರೂಪಾಯಿನೂ ಕಾಡಿಸಿ ಕಾಡಿಸಿ ಕೊಡಬೇಕು, ಸಾಲವನ್ನಂತೂ ಮರಳಿ ಕೂಡಲೇ ಕೂಡದು ಇತ್ಯಾದಿಗಳು… ನನಗೆ ಇದನ್ನೆಲ್ಲ ಮಾಡಲು ಮನಸ್ಸು ಒಪ್ಪುತ್ತಿರಲಿಲ್ಲ.
ಗುರುಪ್ರಸಾದ್‌ ಕುರ್ತಕೋಟಿ ಅಂಕಣ

Read More

ಬೋರ್‌ವೆಲ್ ಮತ್ತು ʻನೀರʼಕ್ಷರಿಗಳು

ಕಡೆಗೊಮ್ಮೆ ಬೋರ್ ಕೊರೆಸುವ ಮನಸ್ಸು ಮಾಡಿದೆವು. ನೀರಿನ ಸೆಲೆಯನ್ನು ಕಂಡು ಹಿಡಿಯುವುದು ಅತ್ಯಂತ ಕ್ಲಿಷ್ಟವಾದ ಕೆಲಸ. ಮೇಲೆ ನಿಂತುಕೊಂಡು ಭೂಮಿಯಲ್ಲಿ ಇಷ್ಟು ಆಳದಲ್ಲಿ ನೀರು ಸಿಗುತ್ತದೆ ಅಂತ ಹೇಳುವುದು ಸುಲಭ ಅಲ್ಲ. ಆದರೆ ಹಾಗೆ ಹೇಳುತ್ತೇವೆ ಅಂತ ತೆಂಗಿನಕಾಯಿ ಸರ್ಕಸ್ ಮಾಡಿ ಜನರನ್ನು ಯಾಮಾರಿಸುವ ತುಂಬಾ ಜನರು ಹುಟ್ಟಿಕೊಂಡಿದ್ದಾರೆ. ತೆಂಗಿನಕಾಯಿ ಅಲುಗಾಡಿಸಿ ಒಂದು ಪಾಯಿಂಟ್ ತೋರಿಸಿ ಅಲ್ಲಿ ನೀರು ಬರದಿದ್ದರೆ ಅರ್ಧ ದುಡ್ಡು ವಾಪಸ್ಸು ಅಂತ ಹೇಳುವವರೂ ಇದ್ದಾರೆ. ಹತ್ತಿದರೆ ಅವರಿಗೆ ಲಾಟರಿ. ಇಲ್ಲದಿದ್ದರೆ ಅವರಿಗೆ ಅರ್ಧ ದುಡ್ಡು. ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ