Advertisement

Tag: Indian Theatre

ಒಂದು ಡೈಲಾಗ್‌ ಹೇಳಿ!: ಚಿತ್ರಾ ವೆಂಕಟರಾಜು ಸರಣಿ

ಕಲಿಕೆಯ ಪ್ರಾರಂಭದಲ್ಲಿ ಎಲ್ಲಾ ಕಲೆಗಳಲ್ಲೂ ಅದನ್ನು ಕಲಿಸುವವರನ್ನು ಅನುಕರಣೆ ಮಾಡುತ್ತಾರೆ. ಒಂದು ಹಂತದಲ್ಲಿ ಅದು ಅನಿವಾರ್ಯ ಕೂಡಾ. ನಂತರ ನಿಧಾನವಾಗಿ ಅದನ್ನು ಬಿಡಿಸಿಕೊಂಡು ಅಂದರೆ ಕೌಶಲವನ್ನು ಮೀರಿ, ಒಂದು ನಿರ್ದಿಷ್ಟ ಸನ್ನಿವೇಶದಲ್ಲಿ ಒಂದು ಪಾತ್ರದ ನಡವಳಿಕೆ ಹೇಗಿರಬಹುದು ಎನ್ನುವುದರಿಂದ ನಟನೆಯ ಪ್ರಕ್ರಿಯೆಯನ್ನು ಪ್ರಾರಂಭ ಮಾಡಬೇಕಾಗುತ್ತದೆ. ಇಲ್ಲದಿದ್ದರೆ, ವರ್ಷಗಳ ಹಿಂದೆ ಅನುಕರಣೆ ಮಾಡಿದ ರೀತಿಯಲ್ಲೇ ಎಲ್ಲಾ ಸಂಭಾಷಣೆಗಳನ್ನೂ ಹೇಳುತ್ತೇವೆ. ಕಾಳಿದಾಸನಿಂದ ಹಿಡಿದು ಷೇಕ್ಸ್‌ಪಿಯರ್‌ ನವರೆಗೂ ಎಲ್ಲಾ ನಾಟಕದ ಎಲ್ಲಾ ಪಾತ್ರಗಳೂ ಒಂದೇ ರೀತಿ ಮಾತನಾಡುತ್ತವೆ. ನಿಜ ಜೀವನದಲ್ಲಿ ಮಾತನಾಡುವಂತೆ ರಂಗದ ಪಾತ್ರಗಳು ಮಾತನಾಡಲು ಆಗುವುದಿಲ್ಲ ಅದಕ್ಕೊಂದು ನಾಟಕೀಯತೆ ಇರಬೇಕಾಗುತ್ತದೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು”

Read More

ಜೀವಜಾಲದ ಪ್ರೋಗ್ರಾಮಿಂಗ್‌ನ ವಿಸ್ಮಯ: ಸತೀಶ್‌ ತಿಪಟೂರು ಬರಹ

ವ್ಯಕ್ತಿ ಪ್ರಕೃತಿಯು ತನ್ನ ಪರಿಸರದ ಪ್ರಭಾವದ ವಿರುದ್ಧ ಪ್ರತಿಭಟಿಸಿ, ಸೆಣೆಸಿ ತನ್ನದೇ ನಡೆಗಳ ದಾರಿಯಲ್ಲಿ ಚಲಿಸಲು ಯಾವುದೋ ಒಂದು ಆಂತರಿಕ ಸೆಳೆತವಿರಬೇಕು. ಈ ಸೆಳೆತ ಇಂದು ನೆನ್ನೆಯದಲ್ಲ; ಇನ್ನೂ ಹಿಂದಿನದು, ಬಹುದೂರ ಕಾಲ ಹಿಂದಿನದು. ಎಂದೋ ಯಾವ ಕಾಲದಲ್ಲೋ ಯರ‍್ಯಾರ ಕಾಲ-ದೇಶ-ಪ್ರಭಾವ-ಪ್ರವಾಹಗಳ ಹರಿವಿನಲ್ಲೋ ಮೊಳೆತಿದ್ದಿರಬೇಕು. ಹೀಗೆ ಕಾಲಾಂತರ ಕಾದು ಕಾದು ತನ್ನನ್ನು ತಾನು ಅರಿವಿನಲ್ಲಿ ಕಂಡುಕೊಂಡುದುದು. ಇದು ಮೊಳೆತು ಬೆಳೆದು ವಿಕಾಸವಾಗಬಹುದಾದ ಬೀಜರೂಪ ಮಾತ್ರ. ಇದು ಬೆಳೆದು ಬೃಹತ್ ವೃಕ್ಷವಾಗಲು ಏನೆಲ್ಲಾ ಒದಗಿ ಬರಬೇಕೋ?
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿ ಸರಣಿಯ ಕೊನೆಯ ಕಂತು ನಿಮ್ಮ ಓದಿಗೆ

Read More

ಮಳೆ ನಕ್ಷತ್ರಗಳ ಲೆಕ್ಕಾಚಾರದ ನಡುವೆ

ಹಳ್ಳಿಗರು ನಮಗಿಂತ ಬೆಸ್ಟ್. ಅವರಲ್ಲೂ ನಾಟಕ ಮಾಡುವ ಉಮೇದು ಇದೆ. ಹಾಗೆ ನೋಡಿದರೆ ನಮಗಿಂತ ಹೆಚ್ಚು ಇದೆ. ಆದರೆ ಅವರಿಗೆ ನಾಟಕ ಎನ್ನುವುದು ತಮ್ಮ ಬಿಡುವಿನ ದಿನಗಳ ಒಂದು ದಿವ್ಯ ಬಾಬ್ತು. ಮಳೆಗಾಲ ಆರಂಭವಾಗಿ ಬೇಸಾಯ ಆರಂಭಿಸಿ ಉತ್ತುಬಿತ್ತು ಫಸಲು ಕೈಗೆ ಬರುತ್ತದೆ ಅನಿಸಿದಾಗ ಅವರು ನಾಟಕದ ಪ್ರಾಕ್ಟೀಸ್ ಮಾಡಿ ಬಣ್ಣ ಹಚ್ಚಿ ಸಂಭ್ರಮಿಸುತ್ತಾರೆ.
ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

Read More

ಕಂಡೂ ಕಾಣದಂತೆ ಸರಿದು ಹೋಗುವ ಅನಿವಾರ್ಯತೆಗಳು

ರಂಗಭೂಮಿ ಮೇಲ್ನೋಟಕ್ಕೆ ಕಾಣುವ ಹಾಗೆ ಕೇವಲ ಬಣ್ಣದ ಲೋಕದ ಹೊರಮೈ ಅಲ್ಲ. ಇದು ತಿಳಿಯುವುದು ಆ ರಂಗ ಒಳಹೊಕ್ಕಾಗ ಮಾತ್ರ. ಕಲೆ ಮತ್ತು ಕಲಾವಿದರನ್ನು ತುಂಬು ಆದರ ಭಾವದಿಂದ ಕಾಣುವವರಿಗೆ ಆ ಎಲ್ಲವನ್ನು ಒಟ್ಟು ಮಾಡಿ ಚಿತ್ರ ಕಟ್ಟಿಕೊಡುವವನಿಗೆ ಅಸಲಿ ಚಿತ್ರ ತಿಳಿದಿರುತ್ತದೆ. ಅವನು ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಕುಹಕವನ್ನೂ ಸೈರಿಸಿಕೊಳ್ಳಬೇಕಿರುತ್ತದೆ. ಮತ್ತೆ ಎಲ್ಲವನ್ನೂ ಕೇವಲ ಶೋಕಿಗೆ ಮಾಡುತ್ತ ಮಾರ್ಕೆಟಿಂಗ್ ಸರಕಾಗಲು ಹವಣಿಸುವವರನ್ನೂ ಅನಿವಾರ್ಯವಾಗಿ ಸೈರಿಸಿಕೊಂಡು ಮುಂದೆ ಸಾಗಬೇಕಿರುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಕೋವಿಡ್‌ ಸಮಯದಲ್ಲಿ ರಂಗ…

Read More

ವಸ್ತುನಿಷ್ಠ ವಿಮರ್ಶೆ-ಟೀಕೆಗಳಿಗೆ ಜಾಗವಿಲ್ಲದ ಕಾಲ

ಸರಿಸುಮಾರು ಇಪ್ಪತ್ತು ದಿನಗಳಿಂದ ಈ ಕಥೆಯನ್ನು ರೂಪಕವಾಗಿಸಿಕೊಂಡು ಯೋಚಿಸುತ್ತಿದ್ದೇನೆ. ವಿಭೂತಿಪುರುಷರ ಉತ್ತುಂಗ ಸ್ಥಿತಿಯ ಬಗ್ಗೆ ನನಗೆ ಇಂದಿಗೂ ತಿಳಿದಿಲ್ಲ. ಅವರು ಎಲ್ಲದರಲ್ಲೂ ಸುಂದರತೆ ಕಾಣಲು ಬಯಸುವವರು. ಆದರೆ ನಾನು ಆ ಸುಂದರತೆಯ ಬಗೆಗೆ ನಿತ್ಯ ಅನುಮಾನಗಳನ್ನ ಇಟ್ಟುಕೊಂಡಿರುವವನು. ತಮಾಷೆ ಮಾಡುತ್ತ ಎಲ್ಲವನ್ನೂ ತೇಲಿಸುತ್ತ ಜಗತ್ತನ್ನು ಸುಂದರ ಗೋಳವನ್ನಾಗಿ ಪರಿವರ್ತಿಸಿಕೊಳ್ಳುವವರ ಬಗೆಗೆ ನನ್ನಲ್ಲಿ ಗೌರವವೇನೊ ಇದೆ. ಹಾಗೆಯೇ ದಾರಿಹೋಕನಿಗೆ ಜ್ಞಾನೋದಯದ ಬಗೆಗೂ ಚಕಾರಗಳಿವೆ.
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ