Advertisement

Tag: Indian Thugs

`ಕ್ರಿಮಿನಲ್ ಟ್ರೈಬ್’ ಹಣೆಪಟ್ಟಿ ಅಳಿಸಿಕೊಳ್ಳುವ ಯತ್ನ

ಬುಡಕಟ್ಟುಗಳ ಅಧ್ಯಯನಗಳು ಕರ್ನಾಟಕದಲ್ಲಿ ವಿವಿಧ ಸ್ತರಗಳಲ್ಲಿ ನಡೆದಿವೆ. ಭಾರತ ಸರಕಾರ ಕರ್ನಾಟಕದಲ್ಲಿ ಗುರುತಿಸಿರುವ ಅರವತ್ಮೂರು ಬುಡಕಟ್ಟುಗಳಲ್ಲಿ ಕೆಲವನ್ನು ಪರಿಶಿಷ್ಟ ಜಾತಿಗೆ, ಕೆಲವನ್ನು ಪರಿಶಿಷ್ಟ ಪಂಗಡಕ್ಕೆ ಮತ್ತು ಉಳಿದವುಗಳನ್ನು ಅಲೆಮಾರಿ, ಅರೆ ಅಲೆಮಾರಿ ಬುಡಕಟ್ಟುಗಳೆಂದು ಪರಿಗಣಿಸಿ ಹಿಂದುಳಿದ ವರ್ಗಗಳಿಗೆ ಸೇರಿಸಿದ್ದಾರೆ.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯಲ್ಲಿ ಹೊಸ ಬರಹ

Read More

ಗಿರಣಿವಡ್ಡರ್ ಮತ್ತು ಬಾವಿ ತೋಡುವ ಗಂಟಿಚೋರರು

‘ಈಗೀಗ ಗಿರಣಿ ಕೆಲಸದ ಬಗ್ಗೆ ಬೇಸರ ಬರುತ್ತಿತ್ತು. ಶ್ವಾಸಕೋಶದಲ್ಲಿ ಹತ್ತಿ ಸೇರಿ ಕಾರ್ಮಿಕರ ಆರೋಗ್ಯ ಹದಗೆಡುತ್ತಿತ್ತು. ಹಾಗಾಗಿ ಈ ಗಿರಣಿ ಕೆಲಸ ಬಿಡುವ ಮನಸ್ಸಾಗುತ್ತಿತ್ತು. ಸೂಪರ್ವೈಸರ್  ಹೆಂಡತಿಗೆ ಹೊಡೆದಂತೆ  ನಮಗೆ ಹೊಡೆಯುತ್ತಿದ್ದ. ಅಶ್ಲೀಲವಾಗಿ ಬೈಯುತ್ತಿದ್ದ. ಮಶೀನು ಹೊಲಸಾದರೆ ಬಡಿದು ಕೆಲಸದಿಂದ ಅರ್ಧಕ್ಕೆ ಕಳಿಸುತ್ತಿದ್ದ. ಊಟ ಮುಗಿಸಿಕೊಂಡು ಬರಲು ತಡವಾದರೆ ಹಸಿ ಬರಲಿನಿಂದ ಥಳಿಸುತ್ತಿದ್ದ. ಇಂಥಹ ಎಷ್ಟೋ ಅನ್ಯಾಯಗಳು ನೂಲಿನ ಗಿರಣಿಯಲ್ಲಿ ನಡೆಯುತ್ತಿದ್ದವು. ಒಂದು ಸಂಘಟನೆ ಕಟ್ಟಿ ಈ ಅನ್ಯಾಯ ತಡೆಗಟ್ಟಬೇಕೆಂದು ಅನ್ನಿಸುತ್ತಿತ್ತು.

Read More

ಗಂಟಿಚೋರರೇ ನೆನಪಿಟ್ಟುಕೊಂಡ ಕಥನಗಳಲ್ಲಿದೆ ಚರಿತ್ರೆ

ಸೇಟ್‌ಜೀ ಒಬ್ಬರು ಬೆಂಗಳೂರಿನಿಂದ ಮುಂಬೈಗೆ ಹೆಚ್ಚುವರಿ ಗೋಲ್ಡ್ ಬಿಸ್ಕೆಟ್ ಸಾಗಿಸುವ ಮಾಹಿತಿ ಸಂಗ್ರಹಿಸಿ ಪ್ಲಾನ್ ಮಾಡಿದಂತೆ ಅವರೆಲ್ಲ ಸೇರಿ ‘ರಾಬರಿ’ ಮಾಡಿದರು. ಎಲ್ಲವೂ ಪ್ಲಾನ್ ಪ್ರಕಾರವೇ ನಡೆಯಿತು, ಆದರೆ ತಪ್ಪಿಸಿಕೊಳ್ಳುವಾಗ ಈ ಟೀಮಿನ ಇಬ್ಬರು ಸಿಕ್ಕಿಹಾಕಿಕೊಂಡರು.  ಮರುದಿನ ದೊಡ್ಡ ಸುದ್ದಿಯಾಯಿತು. ಸಿಕ್ಕಿಹಾಕಿಕೊಂಡ ಸದಸ್ಯರು ಕಳ್ಳತನದ ಕುರಿತು ಬಾಯಿಬಿಡಲಿಲ್ಲ. ಆಗ ಪೊಲೀಸರೊಂದು ಉಪಾಯ ಮಾಡಿ, ಬಂಧಿತರನ್ನು ಬಿಡುಗಡೆ ಮಾಡಲು ನಿರ್ಧರಿಸಿದರು. ಮುಂದೇನಾಯಿತು ?
‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಡಾ.ಅರುಣ್ ಜೋಳದ ಕೂಡ್ಲಿಗಿ ಬರಹ. 

Read More

ಭಾರತ್ ಬ್ಲೇಡಿನ ಲಕ್ಷೆ ಮತ್ತು ಮನೆಕನ್ನದ ಕತೆಗಳು

ಮಹಿಳೆಯರು ಗಂಟಿಚೋರ್ ಸಮುದಾಯದ ಎಲ್ಲಾ ಸಂಗತಿಗಳಲ್ಲಿಯೂ ಪಾಲುದಾರರಾಗಿದ್ದರು. ತುಡುಗುತನದಲ್ಲಿಯೂ ಮಹಿಳೆಯರ ಪಾಲ್ಗೊಳ್ಳುವಿಕೆ ಕುತೂಹಲಕಾರಿಯಾಗಿದೆ. ಗುಂಪಾಗಿ ತುಡುಗು ಮಾಡುವುದಕ್ಕಿಂತ ಒಂಟಿಯಾಗಿ ತುಡುಗು ಮಾಡುವ ಪ್ರಮಾಣ ಹೆಚ್ಚಾಗಿತ್ತು. ಹಾಗಾಗಿ ಗಂಟಿಚೋರರ ತುಡುಗುತನದ ಪ್ರವೃತ್ತಿಯಲ್ಲಿ ಮಹಿಳೆಯರ ಪಾಲುದಾರಿಕೆ ವಿಶೇಷವಾಗಿದೆ. ಇವರಲ್ಲಿಯೂ ಪ್ರಾದೇಶಿಕವಾಗಿ ತುಂಬಾ ಪ್ರಸಿದ್ಧಿಯನ್ನು ಪಡೆದ ಮಹಿಳೆಯರೂ ಇದ್ದಾರೆ. ‘ಗಂಟಿಚೋರರ ಕಥನಗಳು’ ಸರಣಿಯಲ್ಲಿ ಅರುಣ್ ಜೋಳದ ಕೂಡ್ಲಿಗಿ ಬರೆದ ಬರಹ ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ