Advertisement

Tag: Ismail Talakal

ಅವರಿಬ್ಬರೂ ಆ ಸ್ಥಿತಿ ತಲುಪಿ ಬಂದಿದ್ದರು…

ಅಲ್ಲಾಸಾಬರು ಹಾಗೂ ಶಿವಣ್ಣನವರು ಇಬ್ಬರೂ ವಿಭಿನ್ನ ನೆಲೆ, ಪರಿಸರದಿಂದ ಬಂದವರು. ಇಬ್ಬರ ಜಾತಿ ಧರ್ಮಗಳು ಬೇರೆ. ಶಿಕ್ಷಣ, ಆರ್ಥಿಕ ಸ್ಥಿತಿ ವಿಭಿನ್ನ. ಒಬ್ಬರು ದೇವರ ಜಪತಪ ಮಾಡುತ್ತಾ ಸ್ವರ್ಗ ನರಕಗಳ ಬಗ್ಗೆ ಹೇಳುತ್ತಾ ಸತ್ತ ನಂತರದ ಜೀವನ ವಿವರಿಸುತ್ತಾ ಸಂಪೂರ್ಣವಾಗಿ ಧಾರ್ಮಿಕ ವಿಚಾರಗಳನ್ನು ನಂಬುತ್ತಾ ಜಗತ್ತಿನ ಪ್ರತಿಯೊಂದರ ಸೃಷ್ಟಿಯೂ ಆ ದೇವನಿಂದಾದ್ದು ಎಂದು ನಂಬಿ ಸಂಪ್ರದಾಯಬದ್ಧವಾಗಿ ಬದುಕುತ್ತಿರುವ ವ್ಯಕ್ತಿ.
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”

Read More

ಸಿಹಿ ಕೊಟ್ಟರೆ ಅಳುತ್ತಿದ್ದ ಮಂದಿ…

ಸುತ್ತ ಎತ್ತ ನೋಡಿದರೂ ರಾಕ್ಷಸಾಕಾರದ ಗುಡ್ಡಗಳು, ತುಂಬಿ ಹರಿಯುತ್ತಿದ್ದ ನದಿಗಳು. ಅಲ್ಲಿ ನಮ್ಮಂತೆ ಗುಂಪು ಗುಂಪು ಮನೆಗಳಾಗಲಿ ಹಳ್ಳಿಗಳಾಗಲಿ ಇಲ್ಲ. ಗುಡ್ಡಗಳಲ್ಲಿಯೇ ಹಳ್ಳಿಗಳು. ಅರ್ಧ ಕಿಲೋಮೀಟರ್ ಒಂದು, ಕಿಲೋಮೀಟರ್ ಅಂತರದಲ್ಲಿ ಒಂದೊಂದು ಮನೆಗಳು. ವಾಹನಗಳಿಗಿಂತ ಕುದುರೆಗಳೆ ಸಂಚಾರಕ್ಕೆ ಆಸರೆಗಳು. ನಮ್ಮ ತಂಡ ಮೊದಲೆ ತಯಾರಿಸಿ ಇಟ್ಟ ಅಡುಗೆ ಸಾಮಗ್ರಿಗಳ, ಬಟ್ಟೆ, ಹಾಸಿಗೆ ಹೊದಿಕೆಗಳ ಕಿಟ್ಟನ್ನು ಪ್ರತಿ ಮನೆಗೂ ತಲುಪಿಸಿ ಅವರಿಗೊಂದಿಷ್ಟು ಸಾಂತ್ವಾನ ಹೇಳಿ ಬರುತ್ತಿತ್ತು. ಶಾಲೆಗೆ, ದುಡಿಯಲು, ಕೊಂಡಕೊಳ್ಳಲು ಹೊರಗೆ ಹೋದವರು ಮರಳಿ ಹೆಣವಾಗಿ ಸಿಗುತ್ತಿದ್ದರು.
ಇಸ್ಮಾಯಿಲ್‌ ತಳಕಲ್‌ ಬರೆಯುವ ‘ತಳಕಲ್‌ ಡೈರಿ’ಯಲ್ಲಿ ಹೊಸ ಬರಹ ನಿಮ್ಮ ಓದಿಗೆ

Read More

ನಿರ್ಜೀವವೊಂದು ಉಸಿರು ಪಡೆದುಕೊಳ್ಳುವ ಪರಿ…..

ಭೂಮಿಯ ಗರ್ಭಕ್ಕಿಳಿದ ಬೀಜಗಳು ಮೊಳಕೆಯೊಡೆದು ಸಸಿಯಾಗಿ, ಹೂಬಿಟ್ಟು ನೂರಾರು ಕಾಯಿಗಳಾಗಿ, ಹಣ್ಣಾಗಿ, ತೆನೆಗಳಾಗಿ ಹಸಿದ ಹೊಟ್ಟೆಗಳನ್ನು ತಣಿಸುವುದು ಇದೆಯಲ್ಲ, ಇದಕ್ಕಿಂತ ಸೃಜನಾತ್ಮಕವಾದದ್ದು ಪ್ರಪಂಚದಲ್ಲಿ ಬೇರೆ ಯಾವುದೂ ನನ್ನ ಕಣ್ಣಿಗೆ ಕಾಣುವುದಿಲ್ಲ. ಈ ಮಣ್ಣಿನ ಅಂತಃಕರಣವಾದರೂ ಎಂತಹದ್ದು?
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”ಯಲ್ಲಿ ಹೊಸ ಬರಹ

Read More

ನನ್ನ ನಾನಿಯೂ… ಸಕ್ಕರೆ ಪುಟಾಣಿಯೂ….

ಮಸೀದಿಯಲ್ಲಿ ಶುಕ್ರವಾರಕ್ಕೊಮ್ಮೆ ಸಿಗುತ್ತಿದ್ದ ಪುಟಾಣಿ ಸಕ್ಕರೆಯ ರುಚಿ ನನ್ನ ಬೆಂಬಿಡದೆ ಕಾಡತೊಡಗಿ ದಿನವೂ ತಿನ್ನಬೇಕೆನಿಸುತ್ತಿತ್ತು. ಆದರೆ ನನಗೆ ತಿನ್ನಬೇಕೆನಿಸಿದಾಗ ಎಲ್ಲಿಂದ ಪಡೆಯುವುದು? ಶುಕ್ರವಾರ ಬರುವವರೆಗೂ ಕಾದು ಅವರು ಕೊಡುವ ಒಂದು ತುತ್ತಿನಷ್ಟು ಪುಟಾಣಿ ಸಕ್ಕರೆ ನನ್ನ ಹೊಟ್ಟೆಗೆ ಸಾಕಾಗುತ್ತಿರಲಿಲ್ಲ. ತಿಂದರೆ ಹೊಟ್ಟೆ ತುಂಬುವಷ್ಟು ಅದನ್ನೇ ತಿನ್ನಬೇಕೆನ್ನುವ ಆಸೆ. ಅಪ್ಪನ ಹತ್ತಿರನೋ ಅವ್ವನ ಬಳಿಯೋ ರೊಕ್ಕ ಕೇಳಿದರೆ ಆಗ ಎಂಟಾಣೆಯೋ ಒಂದು ರೂಪಾಯಿಯೋ ಸಿಗುತ್ತಿತ್ತಷ್ಟೆ.
ಇಸ್ಮಾಯಿಲ್ ತಳಕಲ್‌ ಬರೆಯುವ “ತಳಕಲ್‌ ಡೈರಿ”ಯಲ್ಲಿ ಹೊಸ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ