Advertisement

Tag: Jayanth Kaikini

ಕಾಸರವಳ್ಳಿ, ಕಾಯ್ಕಿಣಿ ಮತ್ತು ಟ್ರಾಫಿಕ್!: ಸುಕನ್ಯಾ ಕನಾರಳ್ಳಿ ಅಂಕಣ

ನಮ್ಮ ಅಪಾರ್ಟ್ಮೆಂಟಿನ ತನಕವೂ ಇದ್ದ ಪೊಲೀಸರನ್ನು ಕಂಡಾಗ ಮಾತ್ರ ಇದು ಜಯಂತ ಎಫೆಕ್ಟ್ ಅಲ್ಲ ಅಂತ ಅರಿವಾಗಿತ್ತು. ಸೆಕ್ಯೂರಿಟಿ ಹತ್ತಿರ ನಿಲ್ಲಿಸಿ ಏನ್ರೀ ಇದು ಅವಾಂತರ ಎಂದು ವಿಚಾರಿಸಿದೆ. ‘ಅಯ್ಯೋ, ಮೇಡಮ್. ಸಿಎಂ ಬರ್ತಾ ಇದಾರೆ. ಪಕ್ಕದ ಹೋಟೆಲ್ಲಿನಲ್ಲಿ ಪ್ರಜಾವಾಣಿ ವಾರ್ಷಿಕ ಸಾಧಕಿಯರಿಗೆ ಅಭಿನಂದನೆ ಸಮಾರಂಭ ಇದೆ. ನಿಮ್ಮ ಹೆಸರು ಸಹ ಒಂದಲ್ಲಾ ಒಂದು ದಿನ ಬರುತ್ತೆ ನೋಡ್ತಾ ಇರಿ,’ ಎಂದು ರೇಗಿಸಿದಾಗ, ‘ಆ ಹೊತ್ತಿಗೆ ನಾನು ಇರೊಲ್ಲ. ಇದ್ದರೂ ಹೋಗೊಲ್ಲ,’ ಎಂದು ಉಡಾಫೆಯಿಂದ ನಕ್ಕು ಗೇಟನ್ನು ದಾಟಿ ಒಳಹೊಕ್ಕು ಸಮಾಧಾನದ ನಿಟ್ಟುಸಿರು ಬಿಟ್ಟೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.

Read More

ದೈನಿಕತೆಯಲ್ಲೆ ದೈವಿಕತೆ..

ಕಾಯ್ಕಿಣಿಯವರ ಕಾವ್ಯಗಳಲ್ಲಿ ದಂತಗೋಪುರದ ವಾಸಿ, ವಿಲಾಸಿ, ಪ್ರವಾಸಿಗರು ಕಾಣಸಿಗಲಾರರು; ಏಕೆಂದರೆ, ನಮ್ಮ-ನಿಮ್ಮ ನಡುವೆ, ಆಚೆ-ಈಚೆ, ಕಣ್ಣಿಗೆ ಬಿದ್ದರೂ ಬೀಳದಂತಿರುವ, ಅಥವಾ ನಾವು ನೋಡಿದರೂ ನೋಡದಂತೆ ಮುಂದೆ ಸಾಗುವುದಕ್ಕೆ ಯಾವ ಆಕ್ಷೇಪಣೆಯನ್ನೂ ಮಾಡದ- ಕಷ್ಟವೋ-ಕಾರ‍್ಪಣ್ಯವೋ ಎಲ್ಲಕ್ಕೂ ಎದೆಗೊಡುತ್ತ ಕಾಲ್ಪನಿಕ ರೇಖೆಗಳನ್ನು ಧಿಕ್ಕರಿಸುತ್ತ, ಅಲ್ಲಗಳೆಯುತ್ತ, ತಮ್ಮದೇ ಜೀವನಚಿತ್ರವ ಮೂಡಿಸುವ ಜೀವಭಂಡಾರಿಗಳು- ಕಾಯ್ಕಿಣಿಯವರ ಕಾವ್ಯಪ್ರಪಂಚವನ್ನು ನಿರಾಯಾಸ, ನಿರಪೇಕ್ಷ್ಯವಾಗಿ ಧರಿಸುತ್ತಾರೆ; ಭರಿಸುತ್ತಾರೆ.
ಜಯಂತ ಕಾಯ್ಕಿಣಿಯವರ “ವಿಚಿತ್ರಸೇನನ ವೈಖರಿ” ಕವನ ಸಂಕಲನದ ಕುರಿತು ಗೀತಾ ಹೆಗಡೆ ಬರಹ

Read More

ಜಯಂತ ಕಾಯ್ಕಿಣಿ ಕಥಾಸಂಕಲನದ ಕುರಿತು ಸ್ಮಿತಾ ರಾಘವೇಂದ್ರ ಬರಹ

“ಅದೆಷ್ಟು ಮಾತಿನ ಮಲ್ಲ ! ಮಾತೇ ಮರೆತು ಮುಂಬೈ ಗಲ್ಲಿ ಗಲ್ಲಿ ಸುತ್ತುತ್ತಾನೆ. ಪಿಟ್ಸ್‌ ಬಂದ ವ್ಯಕ್ತಿಯ ಮುಷ್ಟಿಯೊಳಗಿನ ಮುದ್ದೆಯಾದ ಹಾಳೆಯಲ್ಲಿ ಪುಟ್ಟ ಮಗುವಿನ ಪಾದದ ಗುರುತನ್ನು ಪತ್ತೆ ಹಚ್ಚಿ ಆಗುವ ಅನಾಹುತ ತಪ್ಪಿಸುತ್ತಿದ್ದರೆ, ಸುಮ್ಮನೇ ಕಣ್ಣಾಲಿಗಳನ್ನು ತೇವವಾಗುತ್ತದೆ. ಹಾಗೆ ಮುಂಬೈ ಸುತ್ತಿಸಿ ಮತ್ತೆ ಸೀದಾ ನಮ್ಮ ಮಲೆನಾಡಿನ ಸೀಮೆಗೆ ಹಾಜರಾದ ಕಾಯ್ಕಿಣಿಯವರು ಇಡೀ ಕುಮಟಾ, ಅಂಕೋಲಾ, ಕಾರವಾರ, ಯಲ್ಲಾಪುರ, ಶಿರಸಿಗಳನ್ನು ಸುತ್ತಿಸುತ್ತ ಕಥೆ ಹೇಳುತ್ತ ಹೋಗುತ್ತಾರೆ.”
ಜಯಂತ ಕಾಯ್ಕಿಣಿ ಕಥಾ ಸಂಕನಲ “ಬಣ್ಣದ ಕಾಲು” ಕುರಿತು ಸ್ಮಿತಾ ರಾಘವೇಂದ್ರ ಬರಹ

Read More

ಜಯಂತ ಕಾಯ್ಕಿಣಿ ಹೊಸ ಪುಸ್ತಕದಿಂದ ಒಂದು ಕತೆ

“ಅವ್ವನ ಸಿಡಿಮಿಡಿ, ಪ್ರತಿರೋಧ, ಆಘಾತ ಇವ್ಯಾವುದೂ ಕಾಣಿಸುವ ಸ್ಥಿತಿಯಲ್ಲೇ ಚಿತ್ತಿ ಇರಲಿಲ್ಲ. ಆಕಾಶದಿಂದಲೇ ತೂಗುಬಿದ್ದಿದ್ದ ಜೋಕಾಲಿಯೊಂದರ ಮೇಲೆ ಅವಳಾಗಲೇ ಕೂತುಬಿಟ್ಟಿದ್ದಳು. ಅದು ದಾಂಡೇಲಿಯಿಂದ ಬೆಳಗಾಂವ ತನಕ ಜೀಕುತ್ತಿತ್ತು. ನಡುವೆ, ಧಾರವಾಡದ ಕಿಲ್ಲೆಯ ನೆತ್ತಿಯನ್ನು ಚೂರು ಸವರಿ ಹೋಗುತ್ತಿತ್ತು.”
ಇತ್ತೀಚೆಗಷ್ಟೇ ಬಿಡುಗಡೆಯಾದ…

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ