Advertisement

Tag: K Sathyanarayana

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಮಹಾನ್‌ ಬುದ್ಧರು ತೀರಿಹೋದ ಮೇಲೂ ಭಿಕ್ಷುಗಳ ಸಂಖ್ಯೆ ಹೆಚ್ಚುತ್ತಲೇ ಇತ್ತು. ಸ್ತೂಪಗಳನ್ನು ವಿಸ್ತರಿಸುವುದಕ್ಕೆ, ಹೊಸದಾಗಿ ನಿರ್ಮಾಣ ಮಾಡುವುದಕ್ಕೆ, ಆಶ್ರಮ, ಉದ್ಯಾನವನಗಳನ್ನು ರೂಪಿಸುವುದಕ್ಕೆ, ವರ್ತಕರಲ್ಲಿ, ಸೇನಾಧಿಪತಿಗಳಲ್ಲಿ, ಚಕ್ರವರ್ತಿಗಳಲ್ಲಿ ಒಂದು ಸ್ಪರ್ಧೆಯೇ ಏರ್ಪಟ್ಟಂತಿತ್ತು. ಇದೆಲ್ಲವನ್ನೂ ನೋಡಿಕೊಳ್ಳುವುದಕ್ಕೆ ಆನಂದನೊಬ್ಬನಿಗೇ ಸಮಯವಿರುತ್ತಿರಲಿಲ್ಲ, ದಣಿವಾಗುತ್ತಿತ್ತು. ಜವಾಬ್ದಾರಿಯನ್ನು ಹಂಚಿಕೊಳ್ಳಲು ನಂಬುಗೆಯ ಜನರು ಸಮೀಪದಲ್ಲಿರಲಿಲ್ಲ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ ‘ಸಾರಿಪುತ್ರನ ಸಂಸಾರ ಸಾಮ್ರಾಜ್ಯ’

Read More

ಜೈಲಿನಲ್ಲಿ ಇಂದ್ರಲೋಕ: ಕೆ. ಸತ್ಯನಾರಾಯಣ ಸರಣಿ

ಎಲ್ಲವೂ ಭರ್ತಿಯಾಗಿದ್ದವು. ಖಾಲಿಯಾದ ತಕ್ಷಣ ಹೊಸಬರು ಯಾರಾದರೂ ತಕ್ಷಣ ಬಂದು ಹಿಡಿದುಕೊಂಡುಬಿಡುತ್ತಿದ್ದರು. ಸಚಿವರು, ನಾಯಕರು, ಪದಾಧಿಕಾರಿಗಳು, ಕುಲಾಧಿಪತಿಗಳು, ಗುತ್ತಿಗೆದಾರರು, ಅಭಿಯಂತರರು, ಒಬ್ಬರ ಮೇಲೆ ಒಬ್ಬರು, ಒಬ್ಬರ ಹಿಂದೆ ಒಬ್ಬರು. ಪಿಸುಮಾತುಗಳಲ್ಲಿ ಕೇಳಿಸಿದ ಪ್ರಕಾರ, ನ್ಯಾಯಾಲವು ಜಾಮೀನು ಆದೇಶವನ್ನು ನೀಡುವಾಗ, ರದ್ದುಪಡಿಸುವಾಗ, ಇಂದ್ರಭವನದಲ್ಲಿ ಯಾವ ರೀತಿಯ, ಯಾವ ಸ್ತರದ ಮನೆಗಳು, ವಿಲ್ಲಾಗಳು ಯಾವಾಗ ಖಾಲಿಯಾಗುತ್ತವೆ….
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More

ಜೈಲಿಗೆ ಹೋಗಲು ಸಕಲ ತಯಾರಿ!: ಕೆ.‌ ಸತ್ಯನಾರಾಯಣ ಸರಣಿ

ಇಂತಹ ಕೋರಿಕೆ ಇದುವರೆಗೆ ನಮಗೆ ಬಂದಿಲ್ಲ, ಎಲ್ಲೂ ಕೇಳಿಲ್ಲ, ಕಂಡಿಲ್ಲ ಎಂದು ವಾದಿಸಿದರು. ಕೊನೆಗೆ ನನ್ನ ವಯಸ್ಸು, ಹಿರಿತನ, ಕಳಕಳಿಪೂರ್ಣ ಮನವಿಗೆ ಕ್ಷೀಣವಾಗೆಂಬಂತೆ ಸ್ಪಂದಿಸುತ್ತಾ, ಸರಿ, ಎರಡು ನಿಮಿಷ ನೋಡಲು ಬಿಡ್ತೀವಿ, ಕೇಸ್‌ ವಿಷಯ ಮಾತನಾಡಕೂಡದು, ನೀವು ಅವರನ್ನು ಭೇಟಿ ಮಾಡುವಾಗ ನಾವು ಕೂಡ ಒಬ್ಬರು ಜೊತೆಗೇ ಇರ‍್ತೀವಿ ಎಂದರು.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿಯ ಎರಡನೇ ಬರಹ ನಿಮ್ಮ ಓದಿಗೆ

Read More

ಕೆ. ಸತ್ಯನಾರಾಯಣ ಬರೆಯುವ ಹೊಸ ಸರಣಿ “ಜೈಲು ಕತೆಗಳು” ಇಂದಿನಿಂದ

ನನಗೆ ಖೈದಿಗಳ ಬಗ್ಗೆ ತಿರಸ್ಕಾರವಾಗಲೀ, ಅವಮಾನವಾಗಲೀ, ಪೋಲೀಸರ ಬಗ್ಗೆ ಅನಗತ್ಯ ಭಯ-ಗೌರವಗಳಾಗಲೀ ಬೆಳೆಯಲಿಲ್ಲ. ಇವರೆಲ್ಲ ನಮ್ಮ ಕುಟುಂಬಗಳಿಂದ ಭಿನ್ನರಾದವರು ಎಂದೂ ಅನಿಸಲಿಲ್ಲ. ಆದರೆ ಕ್ರೀಡಾಪಟುಗಳು, ವಿಜ್ಞಾನಿಗಳು, ನಟರು, ಸಂಗೀತಗಾರರನ್ನು ಈ ಸಮಾಜ ರೂಪಿಸಿದೆ ಎಂಬುದು ಎಷ್ಟು ನಿಜವೋ, ಖೈದಿಗಳು, ಖೈದಿಗಳಾಗಬೇಕಾಗಿ ಬಂದವರು, ಅವರನ್ನು ಕೂಡ ಈ ಸಮಾಜವೇ ರೂಪಿಸಿದೆ ಎಂಬುದನ್ನೂ ಒಪ್ಪಬೇಕು.
ಖ್ಯಾತ ಕತೆಗಾರ ಕೆ. ಸತ್ಯನಾರಾಯಣ ಬರೆಯುವ ಸರಣಿ “ಜೈಲು ಕತೆಗಳು”

Read More

ಹೊಸ ಸ್ವರೂಪಕ್ಕೆ ಕಾಯುತ್ತಿರುವ ಪ್ರವಾಸ ಕಥನ

ಎರಡು ಮೂರು ದಶಕಗಳ ಹಿಂದೆ ವಿದೇಶಗಳ ಬಗ್ಗೆ ಇದ್ದಷ್ಟು ಕುತೂಹಲ ಈಗ ಭಾರತದಲ್ಲಾಗಲಿ, ಮೂರನೆ ಜಗತ್ತಿನ ದೇಶಗಳಲ್ಲಾಗಲಿ ಇಲ್ಲ. ಜಾಗತೀಕರಣವೂ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ, ಉದ್ಯೋಗ, ವ್ಯಾಪಾರ, ಪ್ರವಾಸಗಳಿಗೆ ಬೇರೆ ದೇಶಗಳಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚು ಅವಕಾಶಗಳು ಕೂಡ ತೆರೆದಿವೆ. ಉದಾಹರಣೆಗೆ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನಿಷ್ಠ ಹತ್ತು ಕುಟುಂಬಗಳ ಸದಸ್ಯರಾದರೂ, ಬಂಧುಗಳಾದರೂ ಈಗ ಹೊರದೇಶಗಳೊಡನೆ ಬೇರೆ ಬೇರೆ ರೀತಿಯಲ್ಲಿ ಸಂಪರ್ಕ, ಒಡನಾಟ ಇಟ್ಟುಕೊಂಡಿರುತ್ತಾರೆ.
ಕೆ. ಸತ್ಯನಾರಾಯಣ ಪ್ರವಾಸ ಕಥನ “ಅಮೆರಿಕದಲ್ಲಿ ಬಸವನಗುಡಿ”ಯ ಒಂದು ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ