Advertisement

Tag: Kannada Literature

ಶಾಂತಿ ಕೆ. ಅಪ್ಪಣ್ಣ ಈ ಭಾನುವಾರದ ಕಥೆ

ಅದು ವಿಷಯ! ಅಲ್ಲಿಗೆ ವಯಸ್ಸಾಗಿರುವುದು ಯಾವುದಕ್ಕೆ? ದೇಹಕ್ಕೆ ಮಾತ್ರವೇ? ಮನಸು ಪಕ್ವವಾಗುವುದು ಅನ್ನುತ್ತಾರಲ್ಲ ಅದೇನದು? ಆಯ್ಕೆಗಳನ್ನೆಲ್ಲ ಬದಿಗೊತ್ತಿ, ಹೆಚ್ಚು ತಕರಾರು ಮಾಡದೆ, ಇರುವುದನ್ನು ಒಪ್ಪಿಕೊಂಡು, ಒಪ್ಪಲಾಗದಿದ್ದರೂ ಒಪ್ಪಿಸಿಕೊಂಡು, ಅಪ್ಪಿಕೊಂಡು, ದಬ್ಬಿಸಿಕೊಂಡು ಹೇಗಾದರೊಂದು ಬದುಕುವುದೆ? ಅಥವಾ ಪರಿಸ್ಥಿತಿಗೆ ತಲೆಬಾಗಿ ಸ್ಥಿತಪ್ರಜ್ಞೆಯನ್ನು ಆರೋಪಿಸಿಕೊಂಡು ಒಳಗೊಳಗೇ ಬೇಯುತ್ತ, ಬೇಯುವಿಕೆಯ ಕಮಟು ವಾಸನೆ ಹೊರಗೆ ತೋರದಂತೆ ಕಾಯುತ್ತ, ಹೀಗೆ ಬೇಯುವುದೇ ಜೀವನದ ಸಾರ್ಥಕತೆಯೆಂದುಕೊಂಡು ಸುಳ್ಳೇ ನಂಬಿಸಿಕೊಳ್ಳುವುದೆ?
ಶಾಂತಿ ಕೆ. ಅಪ್ಪಣ್ಣ ಬರೆದ ಈ ಭಾನುವಾರದ ಕಥೆ “ಚಿತ್ರಕಾರನ ಬೆರಳು”

Read More

ಓದುಗರೊಟ್ಟಿಗೆ ಮಾತನಾಡುವ ಕಥೆಗಳು…

ಮುಗ್ಧ ಮಗು ಸಚ್ಚಿದಾನಂದನನ್ನು ಭವಿಷ್ಯದ ಪೀಠಾಧಿಪತಿಯನ್ನಾಗಿ ಮಾಡಬೇಕೆನ್ನುವ ತಂದೆ- ತಾಯಿಗಳ ಆಸೆ, ಅಧಿಕಾರ ಲಾಲಸೆ, ಆಶ್ರಮದಲ್ಲಿನ ಅನೈತಿಕ ಚಟುವಟಿಕೆಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವ ಪರಿ, ದೇವರ ಸನ್ನಿಧಾನ, ದೇವರ ಸೇವೆ ಮುಗ್ಧ ಮಗುವಿನ ಕಣ್ಣಲ್ಲಿ ಕಾಣುತ್ತವೆ. ಸಮಾಜವನ್ನು ತಿದ್ದುವ, ಆದರ್ಶ ವಟುಗಳನ್ನು ಬೆಳೆಸುವ ಸನ್ನಿಧಾನಗಳೇ ದುರ್ಮಾರ್ಗ ಹಿಡಿದಿರುವುದು ‘ದೇವರ ಮಗು’ ಕತೆಯಲ್ಲಿ ವ್ಯಕ್ತವಾಗಿದೆ. ‘ಮುಳ್ಳು’ ಕಥೆಯಲ್ಲಿ ಬಶೀರನ ಮನಸ್ಸಿನ ತೊಳಲಾಟವನ್ನು ಅತ್ಯಂತ ಮಾರ್ಮಿಕವಾಗಿ ಕಟ್ಟಿಕೊಟ್ಟಿದ್ದಾರೆ.
ದಯಾನಂದ ಅವರ ಕಥಾ ಸಂಕಲನ “ಬುದ್ಧನ ಕಿವಿ”ಯ ಕುರಿತು ಮಂಜಯ್ಯ ದೇವರಮನಿ ಬರಹ

Read More

ಕಂದಹಾರ್ ಏರ್‌ಬೇಸಿನ ಅಪಾಯಕಾರಿ ಉಪಕ್ಯಾಂಪುಗಳು

ಕಚೇರಿಗೆ ಬಂದಾಗ ಡಾಕ್ಟರ್ ಕಿರ್ಕಿಗೆ ಕರೆ ಬಂದು ಅಗತ್ಯ ವೈದ್ಯಕೀಯ ನೆರವಿಗಾಗಿ ಅವಘಡ ನಡೆದ ಜಾಗಕ್ಕೆ ಹೋದನೆಂದು ಗೊತ್ತಾಯ್ತು. ಇಂತಹ ಪ್ರಮುಖ ಅವಘಡಗಳಾದಾಗ ಕ್ಯಾಂಪಿನಲ್ಲಿನ ಇಂತಹ ಖಾಸಗಿ ವೈದ್ಯರನ್ನು ಘಟನೆಯ ಜಾಗಕ್ಕೆ ನೆರವಿಗಾಗಿ ಕರೆಸಲಾಗುತ್ತದೆ. ನಾನು ನೋಡಿದ ವಿವರಗಳನ್ನು ಆಂಟೋನಿಯೋ ಮತ್ತು ಅಲ್ಲಿದ್ದ ಇತರೆ ಆಲ್ಬೇನಿಯನ್ ಜನರಿಗೆ ವಿವರಿಸಿದೆ. ಎಲ್ಲರೂ ಆಘಾತಕ್ಕೊಳಗಾದಂತೆ ದೊಡ್ಡ ನಿಟ್ಟುಸಿರುಬಿಟ್ಟರು. ಆಂಟೋನಿಯೋ ಮಾತ್ರ ತುಂಬಾ ಕಂಗಾಲಾದವನಂತೆ ತಲೆಮೇಲೆ ಕೈಹೊತ್ತು ಏನೇನೋ ಮನಸ್ಸಿಗೆ ಬಂದಂತೆ ಅವನ ಭಾಷೆಯಲ್ಲಿ ಗೊಣಗಲು ಶುರುಮಾಡಿದ.
ಮಂಜುನಾಥ್‌ ಕುಣಿಗಲ್‌ ಬರೆದ “ಕುಣಿಗಲ್‌ ಟು ಕಂದಹಾರ್” ಕೃತಿಯಿಂದ ಆಯ್ದ ಲೇಖನ ನಿಮ್ಮ ಓದಿಗೆ

Read More

ಇಳಿ ವಯಸ್ಸಿನ ಕಾಠಿಣ್ಯ ಸ್ವಾರ್ಥ ಇತ್ಯಾದಿ

ಜಗತ್ತಿನಲ್ಲಿ ಮನುಷ್ಯ ಬಂದಿರುವುದು, ಇರುವುದು, ಮಾಗಬೇಕಾದದ್ದು ಕೇವಲ ನಾಲ್ಕು ದಿನದ ಅತಿಥಿಯಾಗಿ ಮಾತ್ರ. ಸದಾ ಕಾಲದ ಜಹಗೀರ್‌ದಾರಿ ಅವನಿಗಿಲ್ಲ. ಇದು ಎಲ್ಲರಿಗೂ ಗೊತ್ತಾಗಲೆಂದೇ ಸಾವಿನ ಸಮಯದಲ್ಲಿ ಸೃಷ್ಟಿ ಒಂದು ಉಪಾಯ ಮಾಡಿದೆ. ಮನುಷ್ಯನಿಗೆ ಪ್ರಾಣ ಹೋಗಿದೆ ಎಂದು ಗೊತ್ತಾದ ಮೇಲೂ ಯಾರಿಗೂ ಗೊತ್ತಾಗದಂತೆ ಕೆಲಕಾಲ ಕ್ಷೀಣವಾಗಿ ಪ್ರಾಣ ಇರುತ್ತದೆ. ದೇಹದಲ್ಲಿ ಶಾಖ ಕೂಡ ಇರುತ್ತದೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಆರನೆಯ ಪ್ರಬಂಧ ನಿಮ್ಮ ಓದಿಗೆ

Read More

ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕಥೆ

ಇಲ್ಲ! ಅಪ್ಪ ಪೇಟೆಗೆ ಹೋದ ಸಮಯ ನೋಡಿ ಇಲ್ಲಿಗೆ ಓಡಿ ಬಂದು ಪುಟ್ಟ ಮಗುವಾಗಿದ್ದ ನನ್ನನ್ನು ಎತ್ತಿ ಮುದ್ದಾಡಿದ ವ್ಯಕ್ತಿ ಇವನಲ್ಲ. ಬಿಡುವಿಲ್ಲದ ಮನೆಗೆಲಸದ ವೇಳೆಯಲ್ಲೂ ‘ಎತ್ತಿಕೋ’ ಎಂದು ಅಮ್ಮನನ್ನು ಪೀಡಿಸುತ್ತಿದ್ದಾಗ “ಇತ್ತ ಕೊಡಿ. ನಾನು ನೋಡಿಕೊಳ್ತೇನೆ” ಎಂದು ನನ್ನನ್ನು ಎತ್ತಿಕೊಂಡು, ತೋಟದಲ್ಲೆಲ್ಲ ತಿರುಗಾಡಿ ಬಾಳೆಹೂವಿನ ಜೇನು ನೆಕ್ಕಿಸಿದವನೂ ಇವನಲ್ಲ ಎಂದುಕೊಳ್ಳುತ್ತಿದ್ದಂತೆ ಕತ್ತಲಲ್ಲಿ ಭೂಮಿಯನ್ನು ಥರಗುಟ್ಟಿಸುವ ಸದ್ದು ನಮ್ಮೆಲ್ಲರನ್ನೂ ಇಡಿಯಾಗಿ ಅಲುಗಾಡಿಸಿತು.
ಸುಭಾಷ್ ಪಟ್ಟಾಜೆ ಬರೆದ ಈ ಕಥೆ “ಗೋಡೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ