Advertisement

Tag: Kannada Literature

ಅಣ್ಣನೆಂಬ ಅಕ್ಕರೆಯ ಅಪ್ಪ….

ಈಗಿನಂತೆ ಬೀದಿ ದೀಪಗಳು, ಕೈಯಲ್ಲೊಂದು, ಜೇಬಲ್ಲೊಂದು ಟಾರ್ಚು ಇಲ್ಲದ ದಿನಗಳವು. ಅಣ್ಣ ನನ್ನ ಕೈಯನ್ನು ಹಿಡಿದುಕೊಂಡೆ ಮೆಲ್ಲಗೆ ಸಾಗತೊಡಗಿದ. ನನಗೆ ಇದ್ದ ಅತಿ ಮುಖ್ಯ ಭಯವೆಂದರೆ ಹಾವಿನದ್ದು. ಒಂದೆರಡು ದಿನಗಳ ಹಿಂದೆ ಎಮ್ಮೆ ಕಾಯಲು ಹೋದಾಗ ಹನುಮಪ್ಪನ ನಾಲಿನಲ್ಲಿ ನನ್ನ ಕಾಲಿನ ನಡುವೆ ಸರ ಸರನೆ ಹಾದು ಹೋಗಿ ಹೆಡೆ ಎತ್ತಿ ಆಡಿದ್ದ “ನಾಗರಾಜ”ನನ್ನು ನೆನೆದು ನಾನು ಇನ್ನಷ್ಟು ಭಯಭೀತನಾಗಿದ್ದೆ, ಮತ್ತು ಈಗ ಹೆಚ್ಚೇ ಎನ್ನುವಷ್ಟು ಜೋರಾಗಿ ಅಳತೊಡಗಿದೆ. ನನ್ನನ್ನು ಸುಮ್ಮನಾಗಿಸಲು ಹರ ಸಾಹಸ ಪಟ್ಟ ಅಣ್ಣ, ನನ್ನ ಅಳುವಿಗೆ ನೈಜ ಕಾರಣ ತಿಳಿದುಕೊಂಡ.
ಸಾವನ್ ಕೆ ಸಿಂಧನೂರು ಬರಹ

Read More

ಬೆಂಕಿಯ ಮಳೆ

ಉಮಾ ಅವರಿದ್ದ ಓಣಿಯ ಬಳಿ ಹೋಗಿ ಒಬ್ಬ ಹೆಂಗಸನ್ನು ‘ಇಲ್ಲಿ ಉಮಾ ಅನ್ನೋರ ಮನೆ ಎಲ್ಲಿ ಬರತ್ತೆ?’ ಅಂತ ಕೇಳಿದೆ. ಅದಕ್ಕವರು ‘ಓಹ್, ಶಾಹೀನಾ ಬೇಗಂ ಮನೆನಾ? ಬನ್ನಿ ಬನ್ನಿ. ನಮ್ಮ ಮನೆ ಪಕ್ಕದ ಮನೆನೇ ಶಾಹೀನಕ್ಕನದು. ನನ್ನ ಹೆಸರು ನಾಗವೇಣಿ. ಅಕಿ ನನ್ನ ಗೆಣತಿ ಅದಾಳೆ.’ ಎನ್ನುತ್ತಾ ನನ್ನನ್ನ ಹಿಂಬಾಲಿಸಿ ಎಂಬುವಂತೆ ಮುಂದೆ ಮುಂದೆ ನಡೆದಳು. ಸ್ವಲ್ಪ ಹೊತ್ತು ನಡೆದ ಮೇಲೆ ಒಂದು ಪುಟ್ಟ ಜನತಾ ಮನೆಯಂತಿದ್ದ ಮನೆಯ ಮುಂದೆ ನಿಂತು ‘ಶಾಹೀನಕ್ಕ, ನಿನ್ನ ನೋಡೋಕೆ ಯಾರೋ ಬಂದಾರೆ…’ ಎಂದು ಕೂಗಿದಳು. ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

Read More

ಗುರುಪ್ರಸಾದ್‌ ಕಾಗಿನೆಲೆ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್‌” ಇಂದಿನಿಂದ ಶುರು

‘ಥ್ಯಾಂಕ್ಸ್ ಗಿವಿಂಗ್’ ಈ ನೀಳ್ಗತೆಯನ್ನು ಬರೆದು ಸುಮಾರು ಎಂಟುವರ್ಷಗಳೇ ಆಗಿವೆ. ‘ಹಿಜಾಬ್’ ಕಾದಂಬರಿಯ ಬರವಣಿಗೆ ನನ್ನನ್ನು ಬಸವಳಿಸಿತ್ತು. ಕೆಲವೊಮ್ಮೆ ಏನೂ ಬರೆಯಲಾರೆ ಅನ್ನಿಸಿತ್ತು. ತಿಂಗಳುಗಟ್ಟಲೆ ಬರವಣಿಗೆಯನ್ನು ನಿಲ್ಲಿಸಿದ್ದೆ. ಅದನ್ನು ಮರು ಉದ್ದೀಪನಗೊಳಿಸಿಕೊಳ್ಳಲು ಅದಕ್ಕೆ ವಸ್ತು, ವಿಷಯ ಮತ್ತು ನಿರೂಪಣೆಯಲ್ಲಿ ಸಂಪೂರ್ಣ ಬೇರೆಯಾಗಿರುವುದನ್ನು ಬರೆಯಬೇಕೆನ್ನಿಸಿತು.
ಗುರುಪ್ರಸಾದ್‌ ಕಾಗಿನೆಲೆ ಬರೆದ ಹೊಚ್ಚಹೊಸ ನೀಳ್ಗತೆ “ಥ್ಯಾಂಕ್ಸ್‌ಗಿವಿಂಗ್” ಕೆಂಡಸಂಪಿಗೆಯಲ್ಲಿ ಕೆಲವು ಕಂತುಗಳಲ್ಲಿ ಪ್ರತಿ ಶನಿವಾರ ಪ್ರಕಟವಾಗಲಿದೆ

Read More

‘ಮಗಳ ಮದುವೆ’: ಪೂರ್ಣ ಮತ್ತು ಅಪೂರ್ಣ ಬದುಕಿನ ಮಾದರಿಗಳು

ರತ್ನಾಕರನ ಗೆಳೆಯನೂ ಸರಳ ಸಜ್ಜನನೂ ಆಗಿರುವ ರಂಗಣ್ಣನ ತಮ್ಮ ವೆಂಕಣ್ಣನಲ್ಲಿ ಸ್ವಲ್ಪ ಒಳ್ಳೆಯ ಗುಣಗಳು ಇದ್ದರೂ ಚಳುವಳಿಗಾರರಾಗಿರುವ ಅವನ ಸಂಗಡಿಗರು ಪೋಲೀಸರೊಂದಿಗೆ ಕೈಜೋಡಿಸಿ ರತ್ನಾಕರನನ್ನು ಸೆರೆಮನೆಗೆ ತಳ್ಳುವಂತೆ ಮಾಡಲು ಹೇಸದಷ್ಟು ಧೂರ್ತರಾಗಿದ್ದಾರೆ. ಕುಮುದಳನ್ನು ಮದುವೆಯಾಗಲು ಯೋಗ್ಯನಾಗಿದ್ದ ರತ್ನಾಕರನು ತನ್ನ ಗೆಳೆಯರ ಕುಮ್ಮಕ್ಕಿನಿಂದಾಗಿ ಸೆರೆಮನೆಗೆ ತೆರಳಬೇಕಾಗುವ ಸಂದರ್ಭವು ಇದಕ್ಕೊಂದು ನಿದರ್ಶನ.
ಆನಂದಕಂದರ ‘ಮಗಳ ಮದುವೆ’ ಕಾದಂಬರಿಯ ಕುರಿತು ಡಾ. ಸುಭಾಷ್‌ ಪಟ್ಟಾಜೆ ಬರಹ

Read More

ಗಾಂಧಿ ಕಥನ ಕುರಿತು ನಾಗಭೂಷಣ ಕಥನ

ನಿನ್ನೆ ಇರುಳು ತೀರಿಹೋದ ನಿಷ್ಠುರ ಮನಸಿನ ಕನ್ನಡದ ವಿಮರ್ಶಕ ಡಿ.ಎಸ್.ನಾಗಭೂಷಣ ಕೈಗೆತ್ತಿಕೊಂಡ ಕೆಲಸವನ್ನು ತಪಸ್ಸಿನಂತೆ ಕುಳಿತು ಮುಗಿಸುತ್ತಿದ್ದ ಶ್ರಮಜೀವಿ ಬರಹಗಾರರಾಗಿದ್ದರು. ತುರ್ತು ಪರಿಸ್ಥಿತಿಯ ಕಾಲದಲ್ಲಿ ಆಕಾಶವಾಣಿ ದೆಹಲಿಯಿಂದ ಬರುತ್ತಿದ್ದ ಕನ್ನಡ ವಾರ್ತೆಗಳ ಪರಿಚಿತ ಮತ್ತು ಜನಪ್ರಿಯ ರೇಡಿಯೋ ಧ್ವನಿಯಾಗಿದ್ದರು.. ಮಹಾ ಜಗಳಗಂಟರೂ ಮತ್ತು ಅಷ್ಟೇ ಮುಗ್ಧರೂ ಆಗಿದ್ದ ನಾಗಭೂಷಣರು ತಮ್ಮ ರೇಡಿಯೋ ಕಾರ್ಯಕ್ರಮ, ಪತ್ರಿಕಾ ಸಂಪಾದಕೀಯ ಬರಹಗಳು ಮತ್ತು ಸಾರ್ವಜನಿಕ ಭಾಷಣಗಳಿಂದ ಬಹಳ ಕಾಲ ನೆನಪಿನಲ್ಲಿ ಉಳಿಯಬಲ್ಲವರು. ಈ ಸಲದ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ವಿಜೇತ ಪುಸ್ತಕದ ಕುರಿತು ಈ ಹಿಂದೆ ಅವರು ಬರೆದಿದ್ದ ಲೇಖನವೊಂದು ಅವರ ನೆನಪಿಗಾಗಿ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ