Advertisement

Tag: Kannada Literature

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಛಾಯಾ ಭಟ್‌ ಕತೆ

ಮದುವೆಯಾಗಿ ಬಂದಮೇಲೆ ಮಾಕುಚಿಕ್ಕಿಯ ಮಾತು ಸೊಟ್ಟಗಾಗಲು ಬಹಳ ದಿನ ಹಿಡಿಸಲಿಲ್ಲ, ಕರಿಮಣಿ ಕಟ್ಟಿಕೊಂಡವರೆಲ್ಲ ಉರಿದು ಬೀಳುವುದು ಸಂಪ್ರದಾಯವಿರಬೇಕು ಅಂತ ಆಶ್ಚರ್ಯ ಪರಮುಗೆ. ತನ್ನ ಹಡೆದಬ್ಬೆಯ ಪ್ರೀತಿಯಲ್ಲಿಯೂ ಹೆಚ್ಚೇನೂ ಓಲಾಡಿದವನಲ್ಲ ಪರಮು. ಅಬ್ಬೆ ವರ್ಷಕ್ಕೊಮ್ಮೆ ಹೊಟ್ಟೆ ಡುಬ್ಬ ಮಾಡಿಕೊಂಡು ಹೆರಿಗೆ ನೋವು ಬಂದೊಡನೆ ಕೊಂಕಣಿ ಅಜ್ಜಿಗೆ ಬರ ಹೇಳುವುದು, ಒಂದಲ್ಲ ಒಂದು ಕಾರಣಕ್ಕೆ ಮಗು ಹುಟ್ಟುತ್ತಲೇ ಕೈಲಾಸ ವಾಸಿಯಾಗುವುದು ಇದ್ದಿದ್ದೇ. ಮಗುವಿಲ್ಲದ ಬಾಳಂತನದಲ್ಲಿ ಅಳುವ ಅಬ್ಬೆ, ಕಂಡವರ ಶಿಶುಗಳಿಗೆಲ್ಲ ಹಾಲೂಡಿಸಿ ಎದೆ ಭಾರ ಕಳೆದ ಮೇಲೆ ಮತ್ತೆ ಮೊದಲಿನಂತೆ…

Read More

‘ಕಾವ್ಯದ ಕನ್ನಡಿಯಲ್ಲಿ ಕಂಡ ಜೀವನಪಥ’

ಅನುಭವಕ್ಕೆ ಸ್ವತಃ ಯಾವುದೇ ರೀತಿಯ ಆಕೃತಿ ಇಲ್ಲ. ಆದರೆ ನಾವು ಮಾತ್ರ ಇದು ಸುಖದ ಅನುಭವ, ಇದು ದುಃಖದ ಅನುಭವ, ಇದು ವಿಹ್ವಲತೆ, ತಲ್ಲಣ, ಇದು ವಿಷಾದದ ಅನುಭವ ಎಂದೆಲ್ಲ ಹೆಸರಿಡುತ್ತೇವೆ ಎಂದು  ಹೇಳುವ ಆನಂದ ಝುಂಜರವಾಡ ಮೂಲತಃ ಕಾವ್ಯಶಕ್ತಿಯನ್ನು ಒಲಿಸಿಕೊಂಡ ಕವಿ. ಇತ್ತೀಚೆಗೆ ಅವರ ಹೊಸ ಕವನ ಸಂಕಲನ ಶಬ್ದ ಸುಪಾರಿ ಬಿಡುಗಡೆಯಾಯಿತು.

Read More

ಅಬ್ದುಲ್ ರಶೀದ್ ವಿರಚಿತ ‘ರಕ್ತಚಂದನ’ ಎಂಬ ನೀಳ್ಗತೆಯು

ಚಾರುದತ್ತರ ಮರಣದ ಸುದ್ದಿ ನನಗೆ ಗೊತ್ತಾಗಿದ್ದು ಅವರು ತೀರಿಹೋಗಿ ಮಾರನೇ ದಿನ ಮಧ್ಯಾಹ್ನ. ಕೊರೋನಾದ ಮೊದಲ ಅಲೆ ಅದಾಗ ತಾನೇ ಉಲ್ಬಣಿಸುತ್ತಿದ್ದ ಕಾರಣ ಫೇಸ್ ಬುಕ್ಕು ಲೈವಿನಲ್ಲೇ ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದರು. ಲೇಖಕಿ ವಿಲಾಸಿನಿ ಹಾಸಿಗೆಯಲ್ಲಿ ಮಲಗಿದ್ದಲ್ಲೇ ಗೋಡೆಗೆ ಒರಗಿ ಕುಳಿತು ಕಣ್ಣು ಮುಖ ಊದಿಸಿಕೊಂಡು ಲೈವಿನಲ್ಲಿ ಮುಳುಮುಳು ಅಳುತ್ತಾ ನಡುನಡುವೆ ಸ್ಪಷ್ಟವಾಗಿ ಮಾತಾಡುತ್ತಿದ್ದಳು. …”

Read More

ಹಲವು ಬಣ್ಣದ ಹಗ್ಗ: ಸುರೇಶ ನಾಗಲಮಡಿಕೆ ಪುಸ್ತಕದ ಕೆಲವು ಪುಟಗಳು

“ಬಹುದಿಕ್ಕುಗಳಿಂದ, ಬಹು ಅನುಭವಗಳಿಂದ ಬರುವ ಸತ್ಯಗಳೂ ಇಲ್ಲಿ ಮುಖ್ಯವೇ. ಒಂದು ಸಂಕಲನದಲ್ಲಿ ಒಂದು ಪದ್ಯ ಇಡೀ ಸಮಾಜಕ್ಕೆ ಕನ್ನಡಿ ಹಿಡಿದರೆ ಅಷ್ಟರ ಮಟ್ಟಿಗೆ ಅದು ಸಫಲ ಕವಿತೆಯೇ ಆಗಿರುತ್ತದೆ. ಇಂದಿನ ಜೀವನವೇ ಹಲ ಬಗೆಯ ಛಿದ್ರತೆ ಮತ್ತು ಕಣ್ಣೋಟಗಳಿಂದ ಕೂಡಿರುವಾಗ ಯಾವೊದೋ ಒಂದು ಬಗೆಯ ಬದುಕಿನ ದರ್ಶನವನ್ನು ಕಾಣುವುದಕ್ಕೇ ಹೇಗೆ ಸಾಧ್ಯ?”

Read More

ಧೋ ಮಳೆಯ ಜಾದೂವಿನಲ್ಲಿ ಮರಳಿ ದೊರೆತ ಅಪ್ಪ

ನಾನು ಅನಾಮತ್ತು ಮೂರು ದಿನ ಹೊರಗೇ ಕೂರಲು ತೊಡಗಿದಾಗ ಅಪ್ಪನೂ ಹಜಾರದ ಮೂಲೆಯ ಮೋಟುಕಟ್ಟೆಯ ಬಳಿ ಕುಳಿತು ನನ್ನೊಂದಿಗೆ ಮಾತಿಗೆ ಕೂರುತ್ತಿದ್ದನು.ಶುರುವಿನಲ್ಲಿ ಅದೇಕೋ ಮುಜುಗರವೆನಿಸಿದರೂ ನಂತರ ನಾನೂ ಅವನೊಡನೆ ನಗುತ್ತಾ ಮಾತಾಡಹತ್ತಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ