Advertisement

Tag: Kannada Literature

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ

ಆಹಹಹಾ, ಯಾಕಮ್ಮಣ್ಣಿ ಬಂದ್ಬಿಡು, ಅಯ್ಯೋ ಅಯ್ಯೋ ಅಯ್ಯೋ…., ಕೇಳಿಸ್ಕೊಂಡ್ಯೇನೋ ಕೆಪ್ರ, ಮನೆಹಾಳಿ, ಗೆಣಸು ಕೀಳು ಹೋಗು, ಚಿನಾಲಿ, ಚಂಗ್ಲು… ಹೀಗೆ ಅವಳ ಶಬ್ದಕೋಶದ ತುಂಬ ಆ ಪಾತ್ರದ ಮಾತುಗಳದ್ದೇ ಪಾರಮ್ಯ. ಕತ್ತೆ, ಕೋತಿ, ಗೂಬೆ ಎನ್ನುವ ಮೂರು ಪದದಿಂದಾಚೆ ಬೈಗುಳವೇ ಆಡಿ, ಕೇಳಿ ಗೊತ್ತಿಲ್ಲದ ಮನೆಯಲ್ಲಿ, ಇವಳ ಈ ಹೊಸ ವ್ಯಾಕರಣ, ಶಬ್ದಕೋಶ ಅಸಮಾಧಾನದ ಹೊಗೆ ಹಬ್ಬಿಸಿತ್ತು.
ಎಸ್ ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಹೆಜ್ಜೆ ಮೂಡದ ಹಾದಿ” ನಿಮ್ಮ ಓದಿಗೆ

Read More

ಕಲಿತ ಬುದ್ಧಿಗಳೇ ನಮ್ಮ ನೆರಳು: ಎಸ್ ನಾಗಶ್ರೀ ಅಜಯ್ ಅಂಕಣ

ಎಷ್ಟೋ ಜನ ಸರಳತೆ, ಸಹೃದಯತೆ, ಸಹನೆ, ಕರುಣೆಯನ್ನು ನಂಬದೆ ಡಂಭಾಚಾರ, ನಾಟಕ, ಕೃತಕತೆ ಎಂಬ ಹಣೆಪಟ್ಟಿ ಕಟ್ಟಿ ಸಂಶಯದಿಂದಲೇ ಎದುರುಗೊಳ್ಳುತ್ತಾರೆ. ಹಣದೊಂದಿಗೆ ಮದ, ಅಧಿಕಾರದೊಂದಿಗೆ ದರ್ಪ, ಶ್ರೀಮಂತಿಕೆಯೊಂದಿಗೆ ಖಾಯಿಲೆ, ಬಡತನದೊಂದಿಗೆ ನೆಮ್ಮದಿ ಇದ್ದಿರಲೇಬೇಕೆಂದು ಭಾವಿಸಿರುತ್ತಾರೆ. ಅತ್ಯಂತ ರಂಜನೀಯವಾಗಿ ಅದನ್ನು ಬಣ್ಣಿಸಿಯೂ ತೋರುತ್ತಾರೆ. ಪ್ರತಿಯೊಬ್ಬ ಮನುಷ್ಯನೂ ಭಿನ್ನ. ಪ್ರತಿಯೊಬ್ಬರ ಪರಿಸ್ಥಿತಿಯೂ ಭಿನ್ನ. ಒಂದೇ ಅಚ್ಚಿನಲ್ಲಿ ಅಳೆದು, ಸುರಿದು ತಯಾರಾದ ಬದುಕಲ್ಲ ಎಲ್ಲರದ್ದು.
ಎಸ್.‌ ನಾಗಶ್ರೀ ಅಜಯ್‌ ಬರೆಯುವ ‘ಲೋಕ ಏಕಾಂತ’ ಅಂಕಣ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ಕರುಣಾಳು ಬಾ ಬೆಳಕೆ…

ಅಂಗಳದಲ್ಲಿ ಯಾರೂ ಕಾಣಲಿಲ್ಲ. ಅಲ್ಲಿ ಯಾವ ಮರ್ಸಿಡಿಸ್, ಬೆನ್ಝ್ ಕಾರುಗಳೂ ನಿಂತಿರಲಿಲ್ಲ. ಭಕ್ತಾದಿಗಳ ಜನಜಂಗುಳಿ ಇರಲಿಲ್ಲ. ಝಗ ಝಗಿಸುವ ದೀಪಾಲಂಕೃತ ವೇದಿಕೆ, ಮೆತ್ತನೆಯ ಗಾದಿ ಯಾವುದೂ ಇರಲಿಲ್ಲ. ಇದ್ದುದೆಲ್ಲ ಕೇವಲ ನೀರವತೆ. ಒಳಗೆ ಯಾವುದೋ ಕೋಣೆಯೊಳಗಿಂದ ಬೆಳಕು ಕಾಣುತ್ತಿತ್ತು. ಆ ಕೋಣೆಯ ಕಿಟಕಿಯ ಬಳಿ ನಿಂತೆವು.
ಗಿರಿಜಾ ಶಾಸ್ತ್ರಿ ಬರೆಯುವ “ಆ ಕಾಲದ ರಾಜಲಕ್ಷ್ಮಿ” ಸರಣಿಯಲ್ಲಿ ಹೊಸ ಬರಹ

Read More

ಎಲ್ಲ ಆಯಾಮಗಳಲ್ಲೂ ಸಮೃದ್ಧವಾದ “ಎತ್ತರ”

ಇವರೆಲ್ಲರೂ ಹಳೆಕಾಲದ ಟ್ರಂಕಿನೊಳಗೆ ಘಾತುಕ ರಹಸ್ಯವನ್ನು ತಣ್ಣಗೆ ಮಡಚಿಡಬಲ್ಲರು. ಹಾಗೆಯೇ ಮಡಿಲಿನಲ್ಲಿ ಮಲಗಿರುವ ಬೆಕ್ಕಿನ ಮರಿಯನ್ನು ಅತಿ ಅನೌಪಚಾರಿಕವಾಗಿ ಕೆಳಗಿಳಿಸುವಂತೆ ಗುಟ್ಟು ಬಿಟ್ಟುಕೊಡಬಲ್ಲವರು. ರಾಜಕಿಶೋರ, ಸರಳ, ಸುಗುಣೇಶ, ಮಾಧವ ಎಂಬ ಚುಕ್ಕಿಪಾತ್ರಗಳೆಲ್ಲ ಇವನನ್ನು ಸುಳಿಯ ಇನ್ನಷ್ಟು ಒಳಗೆ ಸೆಳೆಯಬಲ್ಲವರು. ಇವರೆಲ್ಲರಿಂದ ಸುತ್ತುವರೆದಿರುವ ಕಥಾನಾಯಕನಿಗೆ ಸಾವಯವ ಸಂಬಂಧದ ತಾದ್ಯಾತ್ಮ ಸಾಧ್ಯವಾಗುವುದು ‘ಒಂದು ಸುತ್ತು ಕಡಿಮೆ’ ಇರುವ ವಿಮಲಾಳೊಂದಿಗೆ. ನಾಣ್ಯ ಅವರ ನಡುವಿನ ಸಂವಾದದ ಭಾಷೆ.
ಇಂದ್ರಕುಮಾರ್ ಎಚ್.ಬಿ. ಯವರ “ಎತ್ತರ” ಕಾದಂಬರಿಯ ಕುರಿತು ಮಮತಾ ಆರ್. ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ