Advertisement

Tag: Kannada Literature

ಸುನಂದಾ ಕಡಮೆ ಬರೆದ ಈ ಭಾನುವಾರದ ಕತೆ “ನಿವೃತ್ತಿ”

ಕೈಯಲ್ಲಿದ್ದ ಲಾಠಿಯಿಂದ ರಬ್ಬನೆ ಅವಳ ಕಾಲಿನ ಮೇಲೆ ಒಂದೇಟು ಬಿತ್ತು, ಇದನ್ನು ಮಾತ್ರ ಶೀಲಕ್ಕ ನಿರೀಕ್ಷಿಸಿರಲಿಲ್ಲ, ‘ಅಯ್ಯ ನಮ್ಮವ್ವ.. ನನಗ ಹೊಡೀತೀರಿ? ಅಯ್ಯ ಅಯ್ಯ..’ ಅಂತ ಮುಳುಮುಳು ಮಾಡಿದಳು. ಆಗಲೇ ಪ್ರತಾಪಣ್ಣ ಬಾಗಿಲು ತೆರೆದು ಗೇಟುದಾಟಿಯಾಗಿತ್ತು. ಅವಮಾನದಿಂದ ದುಃಖ ಉಮ್ಮಳಿಸಿತು, ಯಾಕೋ ಅವನು ಮೊದಲಿನಂತಿಲ್ಲ ಅನ್ನಿಸಿತು. ಬಲಗಾಲ ಮೀನಖಂಡದಲ್ಲಿ ಎದ್ದ ನೋವನ್ನು ನೀವಿಕೊಳ್ಳುತ್ತಿರುವಾಗಲೇ ಮಗ ಕಾಲ್ ಮಾಡಿದ, ವಿಷಯ ತಿಳಿದು ‘ಮೂವತ್ತೈದ ವರ್ಷ ತೊಟ್ಕೊಂಡ ಯೂನಿಫಾರ್ಮ ಐತದ, ಅದ್ನ ನೋಡ್ಕೋತ ಇದ್ರ ಅಪ್ಪಗ ಒಂಥರಾ ಟೆಮ್ಟ್ ಆಗ್ತಿರಬೇಕ, ನಾಳಿಂದ ಅದ್ನ ತಗದ ಎಲ್ಲರ ಹುಗಸಿ ಇಟ್ಬಿಡು’ ಅಂದ.
ಸುನಂದಾ ಕಡಮೆ ಬರೆದ ಕತೆ “ನಿವೃತ್ತಿ” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ

ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”

Read More

‘ಸೀತೆ ಹೂ’ ಅರಳುವ ಸಮಯ…: ಶಾಂತಾ ಜಯಾನಂದ್ ಕವನ ಸಂಕಲನಕ್ಕೆ ಎಚ್.ಆರ್.‌ ಸುಜಾತಾ ಮುನ್ನುಡಿ

ನಿಸರ್ಗ ಪ್ರೇಮ, ಸಂಸಾರ ಹೊಂದಾಣಿಕೆ, ಸಾಮಾಜಿಕ ನಡವಳಿಕೆ, ಸಾಮಾಜಿಕ ನ್ಯಾಯ, ಹೆಣ್ಣಿನ ಶೋಷಣೆ, ಎಲ್ಲವನ್ನೂ ಒರೆಗೆ ಹಚ್ಚುವ ಸಾಮರ್ಥ್ಯ ಶಾಂತಾ ಜಯಾನಂದರ ಕವನಗಳಲ್ಲಿ ಕಾಣಸಿಗುತ್ತವೆ. ರೂಪದರ್ಶಿ, ಕುಂಬಳ ಬಳ್ಳಿಯ ಹೂವು, ಸೀತೆಹೂ, ಸೀರೆ ಮಾರುವ ಹುಡುಗ, ವಿಮಾನ ನಿಲ್ದಾಣ, ಬುದ್ಧ, ನೀಲಿ ಕುರಿಂಜಿ, ಪಯಣ, ಸಾಲು ಮರದ ತಿಮ್ಮಕ್ಕ, ಪಂಚ ಪತಿವ್ರತೆಯರು, ಮುಂತಾದ ಕವನಗಳು ಜಗತ್ತಿನ ಚಲನೆಯನ್ನೂ , ಅದರಲ್ಲಿ ಉಳಿಯುವ ನೆನಪನ್ನು, ತಾತ್ವಿಕ ಧೋರಣೆಯನ್ನು ತೆರೆದು ತೋರುತ್ತವೆ.
ಶಾಂತಾ ಜಯಾನಂದ್ ಕವನ ಸಂಕಲನ “ಸೀತೆ ಹೂ” ಕೃತಿಗೆ ಎಚ್.ಆರ್.‌ ಸುಜಾತಾ ಮುನ್ನುಡಿ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ

‘ಈ ಮಹಾರಾಯನ ಕೊರೆತದಿಂದ, ನಾನು ಬೇರೆಯವರಿಗೆ ಎಷ್ಟು ಕೊರೆಯುತ್ತಿದ್ದೆ ಎಂಬ ಅರಿವಾಗಿದೆ. ಪಾಪ! ನನ್ನ ಸೊಸೆ ಚಿನ್ನದಂಥಾ ಹುಡುಗಿ. ಎಲ್ಲವನ್ನೂ ಸಹಿಸಿದ್ದಾಳೆ. ಈತನ ಕೊರೆತ ತಪ್ಪಿಸಿಕೊಳ್ಳಲು ಸೊಸೆಯನ್ನೇ ಮೊರೆ ಹೋಗಬೇಕು’ ಎಂದು ಮನದಲ್ಲೇ ನಿರ್ಧರಿಸಿದರು. ಮರುದಿನ ಬೆಳಿಗ್ಗೆ ನಂದಿನಿ ನಿತಿನ್‌ನನ್ನು ಶಾಲೆಗೆ ಒಯ್ಯಲು ಸಿದ್ಧಳಾದಾಗ ರಾಯರು ಅವಳಲ್ಲಿಗೆ ಬಂದರು. ಶಾಸ್ತ್ರಿಗಳು ಎಲ್ಲೂ ಕಾಣಿಸಲಿಲ್ಲ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ “ಉಭಯ ಸಂಕಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ