Advertisement

Tag: Kannada Literature

‘ಸೀತೆ ಹೂ’ ಅರಳುವ ಸಮಯ…: ಶಾಂತಾ ಜಯಾನಂದ್ ಕವನ ಸಂಕಲನಕ್ಕೆ ಎಚ್.ಆರ್.‌ ಸುಜಾತಾ ಮುನ್ನುಡಿ

ನಿಸರ್ಗ ಪ್ರೇಮ, ಸಂಸಾರ ಹೊಂದಾಣಿಕೆ, ಸಾಮಾಜಿಕ ನಡವಳಿಕೆ, ಸಾಮಾಜಿಕ ನ್ಯಾಯ, ಹೆಣ್ಣಿನ ಶೋಷಣೆ, ಎಲ್ಲವನ್ನೂ ಒರೆಗೆ ಹಚ್ಚುವ ಸಾಮರ್ಥ್ಯ ಶಾಂತಾ ಜಯಾನಂದರ ಕವನಗಳಲ್ಲಿ ಕಾಣಸಿಗುತ್ತವೆ. ರೂಪದರ್ಶಿ, ಕುಂಬಳ ಬಳ್ಳಿಯ ಹೂವು, ಸೀತೆಹೂ, ಸೀರೆ ಮಾರುವ ಹುಡುಗ, ವಿಮಾನ ನಿಲ್ದಾಣ, ಬುದ್ಧ, ನೀಲಿ ಕುರಿಂಜಿ, ಪಯಣ, ಸಾಲು ಮರದ ತಿಮ್ಮಕ್ಕ, ಪಂಚ ಪತಿವ್ರತೆಯರು, ಮುಂತಾದ ಕವನಗಳು ಜಗತ್ತಿನ ಚಲನೆಯನ್ನೂ , ಅದರಲ್ಲಿ ಉಳಿಯುವ ನೆನಪನ್ನು, ತಾತ್ವಿಕ ಧೋರಣೆಯನ್ನು ತೆರೆದು ತೋರುತ್ತವೆ.
ಶಾಂತಾ ಜಯಾನಂದ್ ಕವನ ಸಂಕಲನ “ಸೀತೆ ಹೂ” ಕೃತಿಗೆ ಎಚ್.ಆರ್.‌ ಸುಜಾತಾ ಮುನ್ನುಡಿ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ

‘ಈ ಮಹಾರಾಯನ ಕೊರೆತದಿಂದ, ನಾನು ಬೇರೆಯವರಿಗೆ ಎಷ್ಟು ಕೊರೆಯುತ್ತಿದ್ದೆ ಎಂಬ ಅರಿವಾಗಿದೆ. ಪಾಪ! ನನ್ನ ಸೊಸೆ ಚಿನ್ನದಂಥಾ ಹುಡುಗಿ. ಎಲ್ಲವನ್ನೂ ಸಹಿಸಿದ್ದಾಳೆ. ಈತನ ಕೊರೆತ ತಪ್ಪಿಸಿಕೊಳ್ಳಲು ಸೊಸೆಯನ್ನೇ ಮೊರೆ ಹೋಗಬೇಕು’ ಎಂದು ಮನದಲ್ಲೇ ನಿರ್ಧರಿಸಿದರು. ಮರುದಿನ ಬೆಳಿಗ್ಗೆ ನಂದಿನಿ ನಿತಿನ್‌ನನ್ನು ಶಾಲೆಗೆ ಒಯ್ಯಲು ಸಿದ್ಧಳಾದಾಗ ರಾಯರು ಅವಳಲ್ಲಿಗೆ ಬಂದರು. ಶಾಸ್ತ್ರಿಗಳು ಎಲ್ಲೂ ಕಾಣಿಸಲಿಲ್ಲ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ “ಉಭಯ ಸಂಕಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”

Read More

ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಕೆಲವು ಪುಟಗಳು

ಆ ಪದ ಕಿವಿಗೆ ಬೀಳುತ್ತಿದ್ದಂತೆ ಸೈಫೈ ಸಿನಿಮಾಗಳಲ್ಲಿ ರೋಬೋಗಳು ಬ್ಯಾಟರಿ ಡೌನಾಗಿ ತಾನಾಗೆ ಕುಸಿದಂತೆ ಶರತ್ ಕುಸಿದ. ಅವಳು ಹಂಗೇ, ಹಿಂದೆ ಮುಂದೆ ನೋಡದೇ ಅಂದುಬಿಡ್ತಿದ್ದಳು. ಜ್ಯಾಮಿಟ್ರಿ ಬಾಕ್ಸ್‌ ಮುಚ್ಚಳವನ್ನು ಹಲ್ಲುಗಳನ್ನೆಟ್ಟಿ ತೆಗೆಯುತ್ತಿದ್ದಳು. ಅಸೆಂಬ್ಲಿನಲ್ಲಿ ಆಕಳಿಸುವಾಗ ತುಟಿ ಹರಿಯುವಷ್ಟು ಅಗಲ ಬಾಯಿ ತೆರೆಯುತ್ತಿದ್ದಳು. ಕಿರುನಾಲಗೆಯಿಂದ ಎಂಜಲನ್ನು ಮೋಟಾರಿನಂತೆ ಹಾರಿಸುತ್ತಿದ್ದಳು. ಇಡೀ ಕ್ಲಾಸಿಗೆ ರಾಣಿ, ರೌಡಿ ಎರಡೂ ಆಗಿದ್ದಳು. ಶರತ್‌ಗೆ ಆಳದಲ್ಲಿ ಅವಳೆಂದರೆ ಭಯ. ತಾನು ಸುಮ್ಮನಿದ್ದರೂ ಆಗಿತ್ತು; ಇಂಥಾ ಬಜಾರ್‌ಗಿತ್ತಿಯನ್ನು ಕೆಣಕಿ ʼಕಳ್ಳʼ ಅನ್ನಿಸ್ಕೊಳಂಗಾಯ್ತಲ್ಲ ಎಂದು ಕೈಹಿಸುಕಿಕೊಂಡ.
ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಬಾನು ಮುಷ್ತಾಕ್ ಕತೆಗಳ ಅನುವಾದದ ಬಗ್ಗೆ ಕೆಲವು ಟಿಪ್ಪಣಿಗಳು: ಬಿ.ವಿ.ರಾಮಪ್ರಸಾದ್ ಬರಹ

ದೀಪಾ ಅವರ ರೀತಿಯಲ್ಲೇ ಬಾನುರವರು ಕೆಲವು ಉರ್ದು ಪದಗಳನ್ನು ಯಾವುದೇ ವಿವರಣೆ ಇಲ್ಲದೇ ಅನುವಾದ ಮಾಡದೇ ಬಳಸುತ್ತಾರೆ. ಉದಾಹರಣೆಗೆ ಸಂಬಂಧ ಸೂಚಕ ಪದಗಳಾದ ಭಾಬಿ, ಅಮ್ಮಿ, ಆಪ, ಬೇಟಾ, ಅಮ್ಮಿಜಾನ್, ದಾದಿಮಾ. ಆದರೆ ಸಾಕಷ್ಟು ಬಾರಿ ಇವುಗಳ ಬದಲು ಅತ್ತಿಗೆ, ಅಮ್ಮ, ತಂದೆ, ಅನ್ನುವ ಕನ್ನಡ ಪದಗಳನ್ನೇ ಬಳಸಿದ್ದಾರೆ. ಇಸ್ಲಾಮ್‌ಗೆ ಸಂಬಂಧಿಸಿದ ಆಜಾನ್, ಮುತವಲ್ಲಿ, ಕಫನ್, ಗುಸುರ್, ದಫನ್, ಖಬರ್‌ಸ್ತಾನ್, ಇವುಗಳೂ ಕೂಡ ವಿವರಣೆಯಿಲ್ಲದೆ ಕೆಲವೊಮ್ಮೆ ಉರ್ದು ಮೂಲ ರೂಪದಲ್ಲಿ, ಕೆಲವೊಮ್ಮೆ ಉರ್ದು ಮೂಲರೂಪದ ಜೊತೆಗೆ ಕನ್ನಡದ ವಿವರಣೆಯೊಂದಿಗೆ ಬರುತ್ತವೆ.
ಬಾನು ಮುಷ್ತಾಕ್ ಕತೆಗಳ ಅನುವಾದದ ಕುರಿತು ಬಿ.ವಿ.ರಾಮಪ್ರಸಾದ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ