Advertisement

Tag: Kannada Literature

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

Read More

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.

Read More

ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ”ಯಿಂದ ಒಂದು ಕತೆ

ವಾಪಸ್ಸು ಬರುವಾಗ ಎದುರು ಸಿಕ್ಕವರ ಮುಖ ನೋಡಿದ್ದಕ್ಕಿಂತ ಅವರ ಕಾಲುಗಳನ್ನು ನೋಡಿದ್ದೇ ಹೆಚ್ಚು. ನೂರಾರು ರಕ್ತದ ಜಾಡು ಬಿಟ್ಟರೆ ಕಪ್ಪು ಬಣ್ಣದ ಬಾಟಾ ಚಪ್ಪಲಿಯ ಸುಳಿವೇ ಸಿಗಲಿಲ್ಲ. ಮನೆಗೆ ಬಂದಾಗ ಅಪ್ಪ ಅದೇ ಜಾಗದಲ್ಲಿ ಕೂತು ಬೀಡಿ ಹಚ್ಚಿದ್ದನು. ‘ಹೋಗಿತ್ ಹೋಯ್ತು ಬಿಡಪ್ಪೋ, ಇನ್ನೊಂದ್ ಜೊತೆ ಹೊಸಾದ್ ತಂದ್ರೆ ಆಯ್ತು. ಅದ್ಕೆ ಹಿಂಗ್ ಕಟ್ಗಟ್ಲೆ ಬೀಡಿ ಸೇದ್ಕೊಂಡಿದ್ರೆ ಆ ಚಪ್ಲಿ ಬತ್ತದಾ ನಿನ್ನುಡ್ಕಂಡು’ ಎಂದೆ. ಉತ್ತರವೇನೂ ಬರಲಿಲ್ಲ.
ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ” ಕೃತಿಯ ಒಂದು ಕತೆ “ಅಪ್ಪನ ಚಪ್ಪಲಿ” ನಿಮ್ಮ ಈ ಭಾನುವಾರದ ಓದಿಗೆ

Read More

ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ

ರೀಲ್ಸ್‌ನಲ್ಲಿ ತೋರಿಸಿದ ಹಾಗೆ ಎರಡು ದಿನಗಳಲ್ಲಿ ಅದರಲ್ಲಿ ಸೃಷ್ಟಿಯ ಕುರುಹುಗಳು ಕಂಡುಬರಬೇಕಿತ್ತು. ದಿನ ಎರಡಾಯಿತು ಮೂರಾಯಿತು ಬೀಜ ಕದಲಲಿಲ್ಲ. ಬೀಜಗಳನ್ನು ಹೊರತೆಗೆದು ಕೈಯಲ್ಲಿಟ್ಟು ನೋಡಿದ. ತಿರುಗಿಸಿ ತಿರುಗಿಸಿ ನೋಡಿದರೂ ಬೀಜ ನಿಸ್ತೇಜವಾಗಿ ಬಿದ್ದುಕೊಂಡಿತ್ತು. ಅದು ಮೊಳಕೆಯೊಡೆಯುವ ಯಾವ ಮನಸ್ಸನ್ನೂ ಮಾಡಲಿಲ್ಲ. ಮೊದಮೊದಲು ಧ್ರುವನ ಈ ತಳಮಳವನ್ನು ನೋಡಿ ನಾನು ಜೋರಾಗಿ ನಗುತ್ತಿದ್ದೆ. ಮೊದಲೇ ಹೇಳಿದ್ದೆ ನಿಂಗೆ ಇದು ವರ್ಕ್ ಔಟ್ ಆಗಲ್ಲ ಅಂತ. ಸುಮ್ನೆ ಟೈಮ್ ವೇಸ್ಟ್. ರೀಲ್ಸ್‌ನಲ್ಲಿ ಸುಮ್ನೆ ತೋರಿಸಿ ನಮ್ಮನ್ನು ಮಂಗ ಮಾಡ್ತಾರೆ.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಗೌರಮ್ಮನ ಜತ್ಯಾಗೇ ಬರಾ ಗಣಪ್ಪ: ಸುಮಾ ಸತೀಶ್ ಸರಣಿ

ನಮ್ಮೂರಿನ್ ಗೌರೀಗೆ ಪೂಜೆ ಮಾಡ್ತಿದ್ದಿದ್ದು ವಸಿ ಜನ್ವೇಯಾ. ಆದ್ರೆ ಗಣೇಶುನ್ನ ಬಿಡಾಕೇಂತ್ಲೇ ಊರಿನ್ ಜನ್ವೆಲ್ಲಾ ಮೇಲ್ ಬಿದ್ದು ಕಾದ್ಕಂಡು ಕುಂತಿರ್ತಿದ್ವಿ. ಐದನೇ ದಿನ ಸಂಜೀ ಹೊತ್ನಾಗೆ, ಗೌರಮ್ಮುಂಗೆ ಮಡ್ಲು ತುಂಬಿ, ಮಗುನ್ನ ಮುಂದಿಟ್ಗಂಡು, ಅವ್ವನ್ನ ಹಿಂದ್ ಕುಂಡ್ರಿಸಿ ಮೆರೋಣಿಗೆ ಹೊಂಡುತಿತ್ತು. ರಾಮ ದ್ಯಾವ್ರ ಗುಡೀಗ್ಳಿಂದ ನಮ್ಮನೆ ಆಸಿ, ಕೆರೆ ಏರಿ ಕಡೆ ಊರ ಗಂಡಸರು, ಹೆಂಗಸರು, ಚಳ್ಳೆ ಪಿಳ್ಳೆಗ್ಳು ಜೈಕಾರ ಹಾಕ್ಕಂಡು ಗಣಪತಿ ಬಾಪ್ಪ ಮೋರ್ಯಾ ಅಂತ ಕಿರುಚ್ಕಂಡು ಅವುರ್ ಹಿಂದಿಂದ್ಲೇ ಸಾಗುಸ್ಕಂಡು ಹೋಗ್ತಿದ್ವಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಗಣೇಶ ಚತುರ್ಥಿಯ ಆಚರಣೆಯ ಕುರಿತು ಹೇಳುತ್ತಲೇ ಈ ಸರಣಿ ಇಲ್ಲಿಗೆ ಮುಕ್ತಾಯವಾಗುತ್ತದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ