Advertisement

Tag: Kannada Literature

“ಮಿಥ್ಯಸುಖ”: ಕಾವ್ಯಾ ಕಡಮೆ ಹೊಸ ಕಾದಂಬರಿಯ ಆಯ್ದ ಭಾಗ

ಖಾಲಿ ಡಬರಿಯಲ್ಲಿ ಕಲ್ಲು ಗಲಗಲಿಸಿದಂತೆ ವಟವಟ ಎನ್ನುವ, ಹೊಕ್ಕಿದ ಕೋಣೆಯಲ್ಲೆಲ್ಲ ಹೀರೋ ಆಗುವ ಶತಪ್ರಯತ್ನ ನಡೆಸುತ್ತಲೇ ಒದ್ದಾಡುವ ಗಂಡಸರಿಂದ ನಾನು ಎಂದಿಗೂ ದೂರವೇ ಸರಿದಿದ್ದೇನೆ. ನಿಮಗೆ ನನ್ನ ಮೇಲೆ ಪ್ರಭಾವ ಬೀರುವುದಿದೆಯೇ? ಹಾಗಿದ್ದರೆ ದಯವಿಟ್ಟು ಮಾತು ನಿಲ್ಲಿಸಿ. ಪ್ರಪಂಚದಲ್ಲಿ ಹೇಳಲೇ ಬೇಕಿರೋದನ್ನೆಲ್ಲ ಶಬ್ದಗಳಿಲ್ಲದೇ ಸಂವಹಿಸಬಹುದು ಎಂಬುದನ್ನು ಮನಸಾ ಪಾಲಿಸಿದ್ದೇನೆ. ಸುಹಾಸನ ಬಳಿ ಮೊದಲ ಸಲ ಫೋನಿನಲ್ಲಿ ಮಾತನಾಡಿದಾಗ ಅವನು ಇಂಟರ್‌ವ್ಯೂಗೆ ತಯಾರಿ ಮಾಡಿಕೊಂಡು ಬಂದವನ ಹಾಗೆ ಒಂದು ಕ್ಷಣವನ್ನೂ ಬಿಡದೇ ತನ್ನ ಬದುಕಿನ ಎಲ್ಲ ಮೈಲುಗಲ್ಲುಗಳ ಪ್ರವರ ಒಪ್ಪಿಸಿದ್ದ.
ಕಾವ್ಯಾ ಕಡಮೆ ಹೊಸ ಕಾದಂಬರಿ “ಮಿಥ್ಯಸುಖ” ಇದೇ ಶನಿವಾರ ಬಿಡುಗಡೆಯಾಗಲಿದ್ದು, ಈ ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಅಮ್ಮನ ದ್ಯಾವ್ರು: ಸುಮಾ ಸತೀಶ್ ಸರಣಿ

ಅವು ಈಗಿನ್ ಕಾಲುದ್ ಗುಲಾಬಿ ಅಲ್ಲ್ ಕಣೇಳಿ. ರೋಜಾ ಬಣ್ದವು. ತೆಳ್ಳುಗಿರಾ ರೆಕ್ಕೆಗ್ಳು. ಬಲ್ ನಾಜೂಕು. ಗಟ್ಟಿಯಾಗಿ ಒತ್ತಿದ್ರೆ ಬಾಡೋಗೋಂತವು. ಚಿಕ್ಕದಾದ್ರೆ ಐದು ಪೈಸಾ. ದೊಡ್ಡವು ಹತ್ತು ಪೈಸಾ. ಸ್ಯಾನೇ ದೊಡ್ಡವು ನಾಕಾಣೆ. ಮನ್ಯಾಗೆ ಇರಾ ಚಿಲ್ರೆ ಹುಡುಕೀ ಹುಡುಕೀ ಅಮ್ಮ‌ ರಾತ್ರೀನೇ ರೆಡಿ ಇಕ್ಕಿರ್ತಿತ್ತು. ಮದ್ಲೇ ಗೊತ್ತಿರ್ತಿತ್ತಲ್ಲ. ಆದ್ರೂ ಸತ ಗುಲಾಬಿ ಸ್ಯಾನೆ ಇದ್ರೆ ಆಸೆ. ಅವುನ್ ತಾವ ಕೊಸರಾಡೋದು. ಇನ್ನೊಂದು ಹಾಕು, ಇದು ಚಿಕ್ದು, ಇದು ರೆಕ್ಕೆ ಕಿತ್ತೋಗದೆ, ಬಾಡೋಗದೆ, ಸಿಕ್ಕಾಪಟ್ಟೆ ಕಾಸು ಯೋಳ್ತೀಯಾ. ನಾಳಿಂದ ಬ್ಯಾಡಾಕ್ಕೆ ಬ್ಯಾಡ ಇಂಗೆ ನಮ್ಮಮ್ಮುನ್ ಕೂಗಾಟ. ಅವ್ನೂ ಕಮ್ಮಿ ಇರ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ಬರಹ ನಿಮ್ಮ ಓದಿಗೆ

Read More

ಮನುಷ್ಯ ಬದುಕಿನೊಂದಿಗೆ ಮುಖಾಮುಖಿಯಾಗುವ ಪದ್ಯಗಳು: ಕಲ್ಲೇಶ್ ಕುಂಬಾರ್ ಬರಹ

ಕವಿಯಾಗಿ ಮಾಲತಿಯವರಿಗೆ ಕತ್ತಲು ಮತ್ತು ಬೆಳಕಿನ ಕುರಿತಾಗಿ ವಿಶಿಷ್ಟವಾದ ಆಕರ್ಷಣೆಯಿದೆ ಎನ್ನಬಹುದು. ಈ ಮಾತಿಗೆ ಸಾಕ್ಷಿಯಾಗಿ ಈ ಕವನಸಂಕಲನದಲ್ಲಿ ‘ಅಜ್ಜಿ ಮತ್ತು..’ ಎಂಬ ಪದ್ಯವೊಂದಿದೆ. ಇಲ್ಲಿ, ಕತ್ತಲು–ಬೆಳಕಿನ ಆಟವನ್ನು ಕೇಂದ್ರವಾಗಿರಿಸಿಕೊಂಡು ಮನುಷ್ಯ ಬದುಕಿನ ಕ್ರಿಯೆಗಳನ್ನು ಅವರು ಶೋಧಿ‌ಸಲು ಪ್ರಯತ್ನಿಸಿದ್ದಾರೆ.‌ ಈ ಪದ್ಯದ ಶೀರ್ಷಿಕೆಯಲ್ಲಿರುವ ‘ಅಜ್ಜಿ’ ಬೇರಾರೂ ಆಗಿರದೇ ನಮ್ಮೊಳಗಿನ ಅರಿವಿನ ಕೇಡು ಕಳೆಯಲೆಂದು ನಮ್ಮ ಎದೆಯಂಗಳದಲ್ಲಿ ಮುಡಿಸಿಟ್ಟ ಅರಿವಿನ ದೀವಿಗೆಯೇ ಆಗಿದ್ದಾಳೆ!
ಮಾಲತಿ ಗೋರೆಬೈಲ್ ಬರೆದ “ಗುಬ್ಬಿ ಲಾಟೀನು” ಕವನ ಸಂಕಲನದ ಕುರಿತು ಕಲ್ಲೇಶ್‌ ಕುಂಬಾರ್‌ ಬರಹ

Read More

ಅವ್ವಕ್ಕನೆಂಬ ಅಚ್ಚರಿ…: ಜ.ನಾ. ತೇಜಶ್ರೀ ಹೊಸ ಕಾದಂಬರಿಯ ಪುಟಗಳು

ಈಗ ಅವಳ ದೇಹ ಮೊದಲಿಗಿಂತ ಗಟ್ಟಿಯಾಗಿತ್ತು, ಸಲಾಕೆಯಂತೆ. ಮೇಲಿನ ಕೆಲಸಕ್ಕೆ ಕೆಲಸದವರಿದ್ದರೂ ಅವಳು ಮಾಮೂಲಿನಂತೆ ಎಲ್ಲ ಕೆಲಸ ಮಾಡುತ್ತಿದ್ದಳು. ಕೆಲಸ ಮಾಡಿದಷ್ಟೂ ಅವಳಲ್ಲಿ ಕಸುವು, ತಾಳಿಕೊಂಡಷ್ಟೂ ಸುಂದರವಾಗಿ ಕಾಣುವುದನ್ನು ದೊಡ್ಡಯ್ಯ ವಿಸ್ಮಯದಲ್ಲಿ ನೋಡುತ್ತಿದ್ದ. ಮಂಜುನಾಥ ಮೂರು ತಿಂಗಳಿಗೆ ಮಗುಚಿದ, ಆಮೇಲೆ ಅಂಬೆಗಾಲಿಟ್ಟ. ಷಣ್ಮುಖ ಬೆಳೆದಿದ್ದನ್ನು ಹತ್ತಿರದಿಂದ ಗಮನಿಸದ ದೊಡ್ಡಯ್ಯನಿಗೆ ಮಂಜುನಾಥನನ್ನು ನೋಡುವಾಗ ಎಲ್ಲ ಹೊಸದೆನಿಸುತ್ತಿತ್ತು. ತಾನೂ ಮಗುವಾಗಿದ್ದಾಗ ಹೀಗೇ ಮಾಡಿದೆನ ಅಂತ ಯೋಚಿಸುತ್ತಿದ್ದ.
ಜ.ನಾ. ತೇಜಶ್ರೀ ಹೊಸ ಕಾದಂಬರಿ “ಜೀವರತಿ” ಕೃತಿಯ ಪುಟಗಳು ನಿಮ್ಮ ಓದಿಗೆ

Read More

ಹೊಳೆಯೊಂದು ಹರಿದ್ಹಾಂಗೆ…..: ಸುಧಾ ಆಡುಕಳ ಅಂಕಣ

ತಮ್ಮೂರಿನ ಹೊಳೆಗೂ ಒಂದು ಪುರಾಣವಿರುವುದು ತಿಳಿದು ನೀಲಿಗೆ ಬಹಳ ಖುಶಿಯಾಯಿತು. ಮರುಕ್ಷಣವೇ ಇನ್ನಿಲ್ಲವಾಗುತ್ತಿರುವ ಹೊಳೆಯ ನೆನಪಾಗಿ ವಿಷಾದ ಆವರಿಸಿತು. ಅವಳ ಇತಿಹಾಸದ ಶಿಕ್ಷಕರು ಕಾಣೆಯಾಗಿರುವ ನದಿಗಳ ಬಗೆಗೆ ಎಷ್ಟೊಂದು ವಿಷಯಗಳನ್ನು ಹೇಳಿದ್ದರು. ತಮ್ಮೂರಿನ ಹೊಳೆ ಹೋಗಿ ಸೇರುವ ನದಿಯೆಲ್ಲಿಯಾದರೂ ಕಾಣೆಯಾದರೆ ಅದೊಂದು ವಿದ್ಯಮಾನವಾಗಿ ಉಳಿಯುತ್ತದೆ. ಹೊಳೆ ಕಾಣೆಯಾದರೆ ಹೇಳಹೆಸರಿಲ್ಲದೇ ಮರೆಯಾಗಿಬಿಡುತ್ತದೆ. ಹೀಗೆಲ್ಲ ಯೋಚನೆಗಳು ರಾತ್ರಿಯಿಡೀ ಅವಳನ್ನು ಕಾಡತೊಡಗಿದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ತೈದನೆಯ ಹಾಗೂ ಕೊನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ