Advertisement

Tag: Kannada Poetry

ವಿಫುಲ ರೂಪ ಧಾರಿಣಿ ಹುಡುಕಾಡುತಿದೆ ಮನುಷ್ಯ ಪ್ರೀತಿಗಾಗಿ….: ಡಾ. ರಾಜೇಂದ್ರಕುಮಾರ್  ಕೆ. ಮುದ್ನಾಳ್ ಬರಹ

ಇಂದಿನ ಆಧುನಿಕ ತಂತ್ರಜ್ಞಾನ ಕೃತಕ ಬುದ್ಧಿಮತ್ತೆಯಲ್ಲಿ ನಿಸರ್ಗದ ಚೈತನ್ಯವನ್ನು ನೋಡುವುದನ್ನು ಮರೆತುಬಿಟ್ಟಿದ್ದೇವೆ. ಗುಬ್ಬಿ ಗೂಡು ಕಟ್ಟುವುದನ್ನು,ಸೂರ್ಯೋದಯ ಚಂದ್ರೋದಯಗಳ ನಯನ ಮನೋಹರ ದೃಶ್ಯವನ್ನು, ಕರು ಆಕಳ ಕೆಚ್ಚಲನ್ನು ಹುಡುಕುವ ಹೊತ್ತನ್ನು ಮರೆತುಬಿಟ್ಟಿದ್ದೇವೆ. ಆಕಾಶದಿಂದ ಜಾರುವ ಮಳೆ, ಕಾಮನಬಿಲ್ಲು, ಇಬ್ಬನಿಯ ರೂಪ, ಪ್ರೀತಿ -ವಿರಹಗಳ ನಡುವಿನ ಬಾಂಧವ್ಯ, ಮೌನ ರಹಸ್ಯಗಳ ನಡುವಿನ ವಿಸ್ಮಯ. ಇವುಗಳ ನಡುವಿನ ಪ್ರೀತಿಯನ್ನು ಗಳಿಸುವ, ಬೆಳೆಸುವ, ಉಳಿಸುವ ದಾಹ ನಮ್ಮದಾಗಲಿ ಎಂಬ ಆಶಯ ವಿಫುಲ ರೂಪ ಧಾರಣಿಯದು. ಏಕೆಂದರೆ ‘ದಾರಿ ನೂರಾರಿವೆ ಬಿಡುಗಡೆಯ ಬೆಳಕಿನ ಅರಮನೆಗೆ’ ಎಂಬ ಸಾಲುಗಳು ನಮ್ಮಲ್ಲಿ ಪ್ರೀತಿಯ ಬುಗ್ಗೆ ಚಿಮ್ಮುವಂತಾಗಲಿ.
ಜಿ.ಎಸ್.‌ ಶಿವರುದ್ರಪ್ಪನವರ ಕವಿತೆಗಳನ್ನು ಆಧರಿಸಿದ ‘ವಿಫುಲ ರೂಪ ದಾರಿಣಿ’ ಕಾವ್ಯ ಅಭಿನಯದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ

Read More

ಐವತ್ತು ಪದ್ಯ, ಮೂವತ್ತಮೂರು ವರ್ಷ…: ದೀಪಾ ಗೋನಾಳ ಬರಹ

ಹೀಗೆ ತೇಲಿ ಹೋದ ಮತ್ತು ಕವಿತೆಯಾಗಿ ಉಳಿದು ಹೋದ ಜೀವ ಕೆತ್ತಿದ ಮೆತ್ತನೆ ಪದಗಳು ಬದುಕನ್ನ ಅವನು ಪಳಗಿಸ ಹೊರಟ ದಾರಿ ನಡುವೆ ನಿಂತು ನಕ್ಕ ದಾರಿಗಲ್ಲು. ಆ ಕಲ್ಲಿಗೂ ಕರುಳುಂಟು ಎನ್ನುವ ಅವನೊಳಗಿನ ಜೀವನಪ್ರೀತಿ. ಕವಿ ತಾನು ಇಲ್ಲದಾಗ ನಾವು ಅವನ ಮನೆಗೆ ಹೋದ್ರೆ ಏನು ಮಾಡಬೇಕು ಅಂತ ಹೇಳಿದ್ದಾನೆ, ಹೇಳಿ ಹೋಗಿದ್ದಾನೆ. ಅವನು ಇದನ್ನೆಲ್ಲ ಯಾಕೆ ಮೊದಲೇ ಇಷ್ಟು ನಿಖರವಾಗಿ ಹೇಳಿದ ಅನ್ನೊ ಪ್ರಶ್ನೆ ನನ್ನದು, ಆದರೆ ಅವನು ಹೇಳಿದ ಮಾತಿಗೆ ಬೆರಗೂ ಹಿಂಬಾಲಿಸೋದು ಕಂಡು ಆಶ್ಚರ್ಯವೂ..
ಎರಡು ವರ್ಷಗಳ ಹಿಂದೆ ತೀರಿಕೊಂಡ ಯುವಕವಿ ಅನಿಲ ಹುಲಮನಿ ಅವರ ಕವನ ಸಂಕಲನ “ಹೊಸ ಅಧ್ಯಾಯ”ವನ್ನು ಧಾರವಾಡದ ಕ್ರಾಂತಿ ಪ್ರಕಾಶನ ಪ್ರಕಟಿಸಿದ್ದು, ಈ ಸಂಕಲನದ ಕುರಿತು ದೀಪಾ ಗೋನಾಳ ಬರಹ

Read More

ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ

“ಅಮ್ಮನ ಹೊಟ್ಟೆಯಲ್ಲಿ
ಒಂಬತ್ತು ತಿಂಗಳು
ಬೆಚ್ಚಗೆ ಬೆಳೆದ
ಮಿದು ಮಿದು
ತನ್ನದೇ
ಹುಟ್ಟು ಬೆತ್ತಲೆ ದೇಹ
ಹೇಗಿದೆ ಈಗ…
ಬೆಳಕಿನಲ್ಲಿ ನೋಡಿಕೊಳ್ಳಲೂ;
ಅಸಡ್ಡೆಯಾಗಿ ರೂಪಾಂತರ ಹೊಂದಿರುವ
ಹಳೆಯ ಭಯ ಹಿಂಜರಿಕೆ ನಾಚಿಕೆ!”- ವಿಜಯಶ್ರೀ ಎಂ. ಹಾಲಾಡಿ ಬರೆದ ಈ ದಿನದ ಕವಿತೆ

Read More

ನೀಲಾಕಾಶದ ನಿಹಾರಿಕೆಗಳ ನೋವು ತಿಳಿದಿರಲಿ…

ಚಾಂದ್ ಪಾಷಾರಿಗೆ ಇರುವ ಸವಾಲೆಂದರೆ ಒಂದು mood ಅಥವಾ ಒಂದು ಹೊಳಹನ್ನು ಎಷ್ಟು ಸಶಕ್ತವಾಗಿ ಹೇಳಬಲ್ಲರೋ ಅದೇ ಸಾಮರ್ಥ್ಯವನ್ನು ಸಂಕೀರ್ಣ ವಸ್ತುವಿನ ನಿರ್ವಹಣೆಯಲ್ಲಿಯೂ ಸಾಧಿಸಬೇಕಾಗುತ್ತದೆ. ಹೇಳಿದ್ದನ್ನು ಚುರುಕಾಗಿ, ಪ್ರಭಾವಿಯಾಗಿ ಹೇಳುವುದು ಎಷ್ಟು ಮುಖ್ಯವೋ ಕಾವ್ಯದಲ್ಲಿ ಒಂದು ಅನುಭವವನ್ನು ಸಾಂದ್ರವಾಗಿ ಗಂಭೀರ ಚಿಂತನೆಯೊಂದಿಗೆ ಅಭಿವ್ಯಕ್ತಿಸುವುದು ಅಷ್ಟೇ ಮುಖ್ಯ. ಈ ಹಿಂದಿನ ಸಂಕಲನಗಳಲ್ಲಿ ಮತ್ತು ಪ್ರಸ್ತುತ ಕೃತಿಯಲ್ಲಿ ಈ ಸಾಮರ್ಥ್ಯದ ಝಲಕುಗಳನ್ನು ಚಾಂದ್‌ ಪಾಷಾ ತೋರಿದ್ದಾರೆ.
ಚಾಂದ್‌ ಪಾಷ ಎನ್.ಎಸ್. ಕವನ ಸಂಕಲನ “ಒದ್ದೆಗಣ್ಣಿನ ದೀಪ”ಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ಸಮಕಾಲೀನ ತಲ್ಲಣಗಳಿಗೆ ಹೆಗಲುಕೊಡುವ ಕವಿತೆಗಳು

ಮನುಷ್ಯ ಮಾಗಿದಷ್ಟೂ ಅವನ ಬರಹ ಪಕ್ವವಾಗುತ್ತದೆ ಎಂಬ ಮಾತು ಕೆಲವರಿಗೆ ಅಪವಾದವಾಗುತ್ತದೆ. ಸಮಾಜದ ತಲ್ಲಣಗಳಿಗೆ ಸ್ಪಂದಿಸುವ ಕವಿ ಮತ್ತು ಆತನ ಬರವಣಿಗೆಗಳು ಇಂಥ ದುರಿತ ಕಾಲಕ್ಕೆ ಖಂಡಿತ ಅವಶ್ಯಕತೆ ಇದೆ. ವಿಶಾಲ್ ಅವರ ಬರಹದ ನಡಿಗೆಯೂ ಸಮಸಮಾಜದ ನಿರ್ಮಿತಿಯ ಕಡೆಗೇ ಇದೆ. ಒಂದೊಂದು ಕವಿತೆಯಲ್ಲೂ ಅವರೇ ಕಂಡು, ಅನುಭವಿಸಿದ ನೋವುಗಳನ್ನು ಕಾವ್ಯದ ಮೂಲಕ ಹೊರಹಾಕಿದ್ದಾರೆ.
ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ವಿಶಾಲ್‌ ಮ್ಯಾಸರ್‌ ಕವನ ಸಂಕಲನ ‘ಬಟ್ಟೆಗಂಟಿದ ಬೆಂಕಿ’ಯ ಕುರಿತ ಬರಹ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ