Advertisement

Tag: Kannada Poetry

ಅನ್ವೇಷಣೆ ನಿರತ ಅನವರತ ಚಿತ್ತಪಥದ ಕವಿತೆಗಳತ್ತ…

ನಿಜಾರ್ಥದ ಕವಿ ಗೊತ್ತಿರುವುದನ್ನು ವಿವರಿಸುವುದಿಲ್ಲ, ಅರ್ಥಮಾಡಿಕೊಂಡಿದ್ದನ್ನು ಅರ್ಥಮಾಡಿಸುತ್ತಾನೆ. ಅಸ್ತಿತ್ವದ ಹುಡುಕಾಟ ವ್ಯಸನವಾಗುತ್ತ ಪ್ರೇಮ ಕಾಮ ಕೊನೆಗೆ ಸ್ವಾರ್ಥದೊಂದಿಗೂ ತಾದ್ಯಾತ್ಮ ಸ್ಥಾಪಿತವಾಗದ ಸ್ಥಿತಿಯಲ್ಲಿ ಪದರು ಪದರಾಗಿ ವಿಕಸನಗೊಂಡ ಪ್ರಜ್ಞೆ ಕಣ್ಣಾಮುಚ್ಚಾಲೆಯ ದೈನಿಕಗಳಲ್ಲಿ ಲೀನವಾಗುವ ಕ್ರಮವನ್ನು ಕಾಣಿಸುವ ವಿಶಿಷ್ಟ ಕವನಗಳಿವು. ನಾವೇ ಸೃಷ್ಟಿಸಿಕೊಂಡ ನರಕದಲ್ಲಿ ದೂರುಗಳು ತಪ್ಪೊಪ್ಪಿಗೆಯನ್ನು ಧ್ವನಿಸುತ್ತವೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಇಂದ್ರಕುಮಾರ್ ಎಚ್.ಬಿ. ಅವರ “ಬಾವಿಗ್ಯಾನವ ಮರೆತು” ಕವನ ಸಂಕಲನಕ್ಕೆ ಮಮತಾ ಆರ್. ಬರೆದ ಮುನ್ನುಡಿ

Read More

ಆಕರ್ಷ ರಮೇಶ್ ಕಮಲ ಪುಸ್ತಕಕ್ಕೆ ಕೇಶವ ಮಳಗಿ ಮುನ್ನುಡಿ

“ನಗರಗಳ ಅನೂಹ್ಯತೆ, ಅವು ಸೃಷ್ಟಿಸುವ ತಲ್ಲಣ ಮತ್ತು ಉಂಟುಮಾಡುವ ಪಲ್ಲಟ, ಅದರೊಳಗೆ ಹೂತಿರುವ ಆದರೆ ಚದುರಿ ಚೆಲ್ಲಾಪಿಲ್ಲಿಯಾಗಿರುವ ಲೋಕ, ನಗರದ ಅಸ್ತವ್ಯಸ್ತತೆಗಳು, ಇವುಗಳ ನಡುವೆಯೇ ಇರಬಹುದಾದ ಅರ್ಥವನ್ನು ಹೊರ ತೆಗೆಯುವ ಸೃಜನಶೀಲ ಹುಡುಕಾಟ ಈ ಕವಿತೆಗಳ ಮೂಲದ್ರವ್ಯವಾಗಿದೆ. ಆ ನಿಟ್ಟಿನಲ್ಲಿ ಆಕರ್ಷ ತನ್ನ ಅವಕಾಶ, ವ್ಯಾಪ್ತಿ ಮತ್ತು ಇಳಿದಾಣಗಳನ್ನು ಈಗಾಗಲೇ ಗುರುತಿಸಿಕೊಂಡಂತೆ ಕಾಣುತ್ತಿದ್ದಾನೆ. ತನ್ನ ಅಭಿವ್ಯಕ್ತಿಗೆ ಬೇಕಾದ ನುಡಿಗಟ್ಟು, ರೂಪಕ, ಪ್ರತಿಮಾಲೋಕಗಳನ್ನು ಅನುಭವ ಮತ್ತು ಭಾಷೆಗಳ ಟಂಕಸಾಲೆಯಲ್ಲಿ ನಿರ್ಮಿಸಿಕೊಳ್ಳುತ್ತಿದ್ದಾನೆ”

Read More

ಆರ್.ದಿಲೀಪ್ ಕುಮಾರ್ ಬರೆದ ಈ ದಿನದ ಕವಿತೆ

“ಮಾತು ಪಾತಾಳ ಲೋಕದ ಬಿಲಕ್ಕೆ ಹಾದಿಮಾಡಿ
ಗುಡಿಗೋಪುರದ ಶಿಖರಗಳನು ತಳದಲ್ಲಿ ಉಳಿಸಿ
ಎಳೆಯಲಾದರೆ ಚಿಲುಮೆ ಮೇಲೆ
ಅದನರಿಯಲಾರದೆ ಕುಳಿತ ತವಕದಲಿ
ಕಣ್ಣು ಬಿಡದೆ ಬಾಯ ದಾರಿಯಲಿ ಅರಸುವಂತೆ ಮಾಡಿದವನು”- ಆರ್ . ದಿಲೀಪ್ ಕುಮಾರ್ ಬರೆದ ಈ ದಿನದ ಕವಿತೆ

Read More

ಪದಗಳಲಿ ಅವಿತ ಕವಿತೆಗಳ ವ್ಯಾಮೋಹದ ಕುರಿತು:ಆಶಾ ಜಗದೀಶ್ ಅಂಕಣ

“ಇಂದು ನಮ್ಮ ಮುಂದಿರುವ ಕಾವ್ಯದ ರೂಪ ಹಲವಾರು ಸ್ಥಿತ್ಯಂತರಗಳಿಗೆ ಒಳಪಟ್ಟು ನಮ್ಮ ಮುಂದೆ ನಿಂತಿದೆ. ಹಳೆಯದನ್ನು ತಿರಸ್ಕರಿಸಿ, ಮುರಿದು ಕಟ್ಟುವ ಪ್ರಕ್ರಿಯೆಗೆ ಹೆಚ್ಚಾನು ಹೆಚ್ಚು ಒಳಪಟ್ಟಿರುವುದು ಕಾವ್ಯ ಪ್ರಕಾರವೇ. ಮಾತ್ರೆಗಳಂತೆ ಲೆಕ್ಕಹಾಕಿ ಬರೆಯುತ್ತಿದ್ದಲ್ಲಿಂದ…”

Read More

ಹೆಣ್ತನದ ದೇಸಿ ನೆಲೆಗಳಲ್ಲಿ ಸಂಚರಿಸಿರುವ ಕಾವ್ಯದ ತಾಜಾ ಕಸುವು

“ಹೆಣ್ತನದ ವಿಕಾಸವನ್ನು ವಿಶ್ವದ ವಿಕಾಸದ ಭಾಗವಾಗಿ ಗುರುತಿಸುವ ನೋಟವೊಂದು ಇಲ್ಲಿನ ಕವಿತೆಗಳಿಗೆ ಸಿದ್ಧಿಸಿದೆ. ಈ ನೋಟದ ಮುಂದೆ ಇತಿಹಾಸ, ಪುರಾಣ ಕಾವ್ಯಗಳಲ್ಲಿ ಗಂಡು ಹೆಣ್ಣಿನ ಕುರಿತು ಕಟ್ಟಿದ ಪರಿಕಲ್ಪನೆಗಳೆಲ್ಲಾ ಬಿದ್ದುಹೋಗುತ್ತವೆ. ಅಂಥ ಬಯಲೊಂದನ್ನುಇಲ್ಲಿನ ಕವಿತೆಗಳು ಕಾಣಿಸುತ್ತಿವೆ. ಶಾಕ್ತ ಸ್ತ್ರೀ ಪರಂಪರೆಯ ಆದಿಮ ಸಂವೇದನೆಯನ್ನು ಸಾಂದ್ರವಾಗಿ ಚಿತ್ರಿಸುವ ಬಗೆಯಿಂದಾಗಿ ಊರ ಹಬ್ಬ, ಉರಿಮಾರಿ ಕವಿತೆಗಳು ಗಮನಾರ್ಹವಾಗಿ ಕಾಣುತ್ತವೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ