Advertisement

Tag: Kannada short story

ಸುನಂದಾ ಕಡಮೆ ಬರೆದ ಈ ಭಾನುವಾರದ ಕತೆ “ನಿವೃತ್ತಿ”

ಕೈಯಲ್ಲಿದ್ದ ಲಾಠಿಯಿಂದ ರಬ್ಬನೆ ಅವಳ ಕಾಲಿನ ಮೇಲೆ ಒಂದೇಟು ಬಿತ್ತು, ಇದನ್ನು ಮಾತ್ರ ಶೀಲಕ್ಕ ನಿರೀಕ್ಷಿಸಿರಲಿಲ್ಲ, ‘ಅಯ್ಯ ನಮ್ಮವ್ವ.. ನನಗ ಹೊಡೀತೀರಿ? ಅಯ್ಯ ಅಯ್ಯ..’ ಅಂತ ಮುಳುಮುಳು ಮಾಡಿದಳು. ಆಗಲೇ ಪ್ರತಾಪಣ್ಣ ಬಾಗಿಲು ತೆರೆದು ಗೇಟುದಾಟಿಯಾಗಿತ್ತು. ಅವಮಾನದಿಂದ ದುಃಖ ಉಮ್ಮಳಿಸಿತು, ಯಾಕೋ ಅವನು ಮೊದಲಿನಂತಿಲ್ಲ ಅನ್ನಿಸಿತು. ಬಲಗಾಲ ಮೀನಖಂಡದಲ್ಲಿ ಎದ್ದ ನೋವನ್ನು ನೀವಿಕೊಳ್ಳುತ್ತಿರುವಾಗಲೇ ಮಗ ಕಾಲ್ ಮಾಡಿದ, ವಿಷಯ ತಿಳಿದು ‘ಮೂವತ್ತೈದ ವರ್ಷ ತೊಟ್ಕೊಂಡ ಯೂನಿಫಾರ್ಮ ಐತದ, ಅದ್ನ ನೋಡ್ಕೋತ ಇದ್ರ ಅಪ್ಪಗ ಒಂಥರಾ ಟೆಮ್ಟ್ ಆಗ್ತಿರಬೇಕ, ನಾಳಿಂದ ಅದ್ನ ತಗದ ಎಲ್ಲರ ಹುಗಸಿ ಇಟ್ಬಿಡು’ ಅಂದ.
ಸುನಂದಾ ಕಡಮೆ ಬರೆದ ಕತೆ “ನಿವೃತ್ತಿ” ನಿಮ್ಮ ಈ ಭಾನುವಾರದ ಓದಿಗೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”

Read More

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

Read More

ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ”ಯಿಂದ ಒಂದು ಕತೆ

ವಾಪಸ್ಸು ಬರುವಾಗ ಎದುರು ಸಿಕ್ಕವರ ಮುಖ ನೋಡಿದ್ದಕ್ಕಿಂತ ಅವರ ಕಾಲುಗಳನ್ನು ನೋಡಿದ್ದೇ ಹೆಚ್ಚು. ನೂರಾರು ರಕ್ತದ ಜಾಡು ಬಿಟ್ಟರೆ ಕಪ್ಪು ಬಣ್ಣದ ಬಾಟಾ ಚಪ್ಪಲಿಯ ಸುಳಿವೇ ಸಿಗಲಿಲ್ಲ. ಮನೆಗೆ ಬಂದಾಗ ಅಪ್ಪ ಅದೇ ಜಾಗದಲ್ಲಿ ಕೂತು ಬೀಡಿ ಹಚ್ಚಿದ್ದನು. ‘ಹೋಗಿತ್ ಹೋಯ್ತು ಬಿಡಪ್ಪೋ, ಇನ್ನೊಂದ್ ಜೊತೆ ಹೊಸಾದ್ ತಂದ್ರೆ ಆಯ್ತು. ಅದ್ಕೆ ಹಿಂಗ್ ಕಟ್ಗಟ್ಲೆ ಬೀಡಿ ಸೇದ್ಕೊಂಡಿದ್ರೆ ಆ ಚಪ್ಲಿ ಬತ್ತದಾ ನಿನ್ನುಡ್ಕಂಡು’ ಎಂದೆ. ಉತ್ತರವೇನೂ ಬರಲಿಲ್ಲ.
ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ” ಕೃತಿಯ ಒಂದು ಕತೆ “ಅಪ್ಪನ ಚಪ್ಪಲಿ” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ನರೇಂದ್ರ ಪೈ ಕತೆ

ಈಗಲೂ ರಾತ್ರಿ ಎರಡೂವರೆ, ನಾಲ್ಕುಗಂಟೆಗೆಲ್ಲ ಒಮ್ಮೊಮ್ಮೆ ಎಚ್ಚರವಾದಾಗ ನಾನು ಆವತ್ತು ಎದೆ ಕಲ್ಲು ಮಾಡಿಕೊಂಡು ನಡೆದು ಬಂದುಬಿಟ್ಟ ಕ್ಷಣ ನೆನಪಾಗಿ ಇನ್ನು ಮಲಗುವುದು ಸಾಧ್ಯವೇ ಇಲ್ಲ ಎಂದು ಎದ್ದು ಕೂರುತ್ತೇನೆ. ಆವತ್ತು ನಾನು ಆ ಭಟ್ಟನ ಮಾತು ಕೇಳಿ ತಿರುಗಿ ನೋಡದೇ ಬಂದು ಬಿಡಬಾರದಾಗಿತ್ತು. ಅಷ್ಟು ಹತ್ತಿರದಿಂದ ಅಮ್ಮ, ಸುಚೀ, ಅಮ್ಮಿ ಮೂವರೂ ಸ್ಪಷ್ಟವಾಗಿ ನನ್ನನ್ನು ಕರೆದಿದ್ದು ಖಂಡಿತಾ ಸುಳ್ಳಲ್ಲ, ಭ್ರಮೆಯಲ್ಲ. ಅವರು ನನಗೆ ಮರಳಿ ಸಿಗುತ್ತಿದ್ದರೋ ಇಲ್ಲವೋ ಆ ಪ್ರಶ್ನೆ ಬೇರೆ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನರೇಂದ್ರ ಪೈ ಕತೆ “ಭೇಟಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ