Advertisement

Tag: Kannada short story

ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಸ್ಲಾ..ಟ್!”

ಹನ್ನೆರಡರ ಸುಮಾರಿಗೆ ಎಲ್ಲರೂ ಒಟ್ಟಾದರು. ಸೀನಪ್ಪ ಎಲ್ಲ ರೆಡಿ ಮಾಡಿಟ್ಟಿದ್ದ; ಇನ್ನೊಂದು ಅರ್ಧ ಗಂಟೆ ಒಳಗೆ ಎಲ್ಲಾ ಮುಗಿಸಿ ಬಿಡುವ ಸೂಚನೆ ಇತ್ತು. ಆಗ ಶುರುವಾಯಿತು ಏನೋ ಗಲಿಬಿಲಿ. ಸೀನಪ್ಪ ಬಂದ “ಸಾರ್ ನಾನು ಹೊರಗಿರುತ್ತೇನೆ ನಾನಾಗಲೇ ತೋರಿಸಿದ್ದೆನಲ್ಲ ಕೌಂಟರ್ ಎರಡರಲ್ಲಿ ದೇವರಾಜ ಅನ್ನುವವರನ್ನ, ಅವರೆಲ್ಲ ಮಾಡಿಕೊಡುತ್ತಾರೆ” ಎಂದ. ಬಾಯಿಗೆ ಕೈ ಅಡ್ಡ ಇಟ್ಟು “ಲೋಕಾಯುಕ್ತರು ಬಂದಿದ್ದಾರೆ ಹಾಗಾಗಿ ಸ್ವಲ್ಪ ತಡ ಆಗಬಹುದು, ಒಂದು ಮೂತ್ತರಿಂದ ಎರಡೂ ಮೂವತ್ತು ಊಟದ ಸಮಯ. ಅದು ಕೂಡ ಸ್ವಲ್ಪ ಹಿಂದೆ ಮುಂದೆ ಆಗಬಹುದು.”
ವಸಂತಕುಮಾರ್ ಕಲ್ಯಾಣಿ ಬರೆದ ಕತೆ “ಸ್ಲಾ..ಟ್!” ನಿಮ್ಮ ಈ ಭಾನುವಾರದ ಓದಿಗೆ

Read More

ಸುನಂದಾ ಕಡಮೆ ಬರೆದ ಈ ಭಾನುವಾರದ ಕತೆ “ನಿವೃತ್ತಿ”

ಕೈಯಲ್ಲಿದ್ದ ಲಾಠಿಯಿಂದ ರಬ್ಬನೆ ಅವಳ ಕಾಲಿನ ಮೇಲೆ ಒಂದೇಟು ಬಿತ್ತು, ಇದನ್ನು ಮಾತ್ರ ಶೀಲಕ್ಕ ನಿರೀಕ್ಷಿಸಿರಲಿಲ್ಲ, ‘ಅಯ್ಯ ನಮ್ಮವ್ವ.. ನನಗ ಹೊಡೀತೀರಿ? ಅಯ್ಯ ಅಯ್ಯ..’ ಅಂತ ಮುಳುಮುಳು ಮಾಡಿದಳು. ಆಗಲೇ ಪ್ರತಾಪಣ್ಣ ಬಾಗಿಲು ತೆರೆದು ಗೇಟುದಾಟಿಯಾಗಿತ್ತು. ಅವಮಾನದಿಂದ ದುಃಖ ಉಮ್ಮಳಿಸಿತು, ಯಾಕೋ ಅವನು ಮೊದಲಿನಂತಿಲ್ಲ ಅನ್ನಿಸಿತು. ಬಲಗಾಲ ಮೀನಖಂಡದಲ್ಲಿ ಎದ್ದ ನೋವನ್ನು ನೀವಿಕೊಳ್ಳುತ್ತಿರುವಾಗಲೇ ಮಗ ಕಾಲ್ ಮಾಡಿದ, ವಿಷಯ ತಿಳಿದು ‘ಮೂವತ್ತೈದ ವರ್ಷ ತೊಟ್ಕೊಂಡ ಯೂನಿಫಾರ್ಮ ಐತದ, ಅದ್ನ ನೋಡ್ಕೋತ ಇದ್ರ ಅಪ್ಪಗ ಒಂಥರಾ ಟೆಮ್ಟ್ ಆಗ್ತಿರಬೇಕ, ನಾಳಿಂದ ಅದ್ನ ತಗದ ಎಲ್ಲರ ಹುಗಸಿ ಇಟ್ಬಿಡು’ ಅಂದ.
ಸುನಂದಾ ಕಡಮೆ ಬರೆದ ಕತೆ “ನಿವೃತ್ತಿ” ನಿಮ್ಮ ಈ ಭಾನುವಾರದ ಓದಿಗೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅದರೊಳಗೇನಿದೆ ಎನ್ನುವುದು ಒಳಹೋದವರಿಗೆ ಬಿಟ್ಟರೆ ಬೇರೆ ಯಾರಿಗೂ ಗೊತ್ತಿಲ್ಲ. ಒಳಗೆ ಹೋದವರು ಎಬ್ಬಿಸುತ್ತಿದ್ದ ನಗು ಹೊರಗೆ ಕೂತ ಹೊಸಬರಲ್ಲಿ ಮೂಡಿಸುತ್ತಿದ್ದದ್ದು ವಿಸ್ಮಯವನ್ನು, ಕುತೂಹಲವನ್ನು. ನಟರಾಜ ಕೊಟ್ಟಿದ್ದ ಐಡಿಯಾ ಫಲ ಕೊಡುವುದಕ್ಕೆ ಹೆಚ್ಚು ಸಮಯವೇನೂ ಬೇಕಾಗಲಿಲ್ಲ. ಮಹಾನಗರದ ಮರಿಮೊಮ್ಮಗನಂತಿತ್ತು ಭರತಪುರ. ಅಂಥ ಪುಟ್ಟ ಪಟ್ಟಣದ ಜನರನ್ನಷ್ಟೇ ನಗಿಸಿ, ಇದ್ದ ಸಾಲವನ್ನು ಏಳೆಂಟು ತಿಂಗಳುಗಳಲ್ಲಿಯೇ ತೀರಿಸಿ, ಸ್ಮೈಲು ಬೀರಿದ್ದ ಇಸ್ಮಾಯಿಲ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಇಸ್ಮಾಯಿಲನ ಸ್ಮೈಲಿಂಗು ಮಹಲು”

Read More

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

Read More

ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ”ಯಿಂದ ಒಂದು ಕತೆ

ವಾಪಸ್ಸು ಬರುವಾಗ ಎದುರು ಸಿಕ್ಕವರ ಮುಖ ನೋಡಿದ್ದಕ್ಕಿಂತ ಅವರ ಕಾಲುಗಳನ್ನು ನೋಡಿದ್ದೇ ಹೆಚ್ಚು. ನೂರಾರು ರಕ್ತದ ಜಾಡು ಬಿಟ್ಟರೆ ಕಪ್ಪು ಬಣ್ಣದ ಬಾಟಾ ಚಪ್ಪಲಿಯ ಸುಳಿವೇ ಸಿಗಲಿಲ್ಲ. ಮನೆಗೆ ಬಂದಾಗ ಅಪ್ಪ ಅದೇ ಜಾಗದಲ್ಲಿ ಕೂತು ಬೀಡಿ ಹಚ್ಚಿದ್ದನು. ‘ಹೋಗಿತ್ ಹೋಯ್ತು ಬಿಡಪ್ಪೋ, ಇನ್ನೊಂದ್ ಜೊತೆ ಹೊಸಾದ್ ತಂದ್ರೆ ಆಯ್ತು. ಅದ್ಕೆ ಹಿಂಗ್ ಕಟ್ಗಟ್ಲೆ ಬೀಡಿ ಸೇದ್ಕೊಂಡಿದ್ರೆ ಆ ಚಪ್ಲಿ ಬತ್ತದಾ ನಿನ್ನುಡ್ಕಂಡು’ ಎಂದೆ. ಉತ್ತರವೇನೂ ಬರಲಿಲ್ಲ.
ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ” ಕೃತಿಯ ಒಂದು ಕತೆ “ಅಪ್ಪನ ಚಪ್ಪಲಿ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ