Advertisement

Tag: Kannada short story

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ನರೇಂದ್ರ ಪೈ ಕತೆ

ಈಗಲೂ ರಾತ್ರಿ ಎರಡೂವರೆ, ನಾಲ್ಕುಗಂಟೆಗೆಲ್ಲ ಒಮ್ಮೊಮ್ಮೆ ಎಚ್ಚರವಾದಾಗ ನಾನು ಆವತ್ತು ಎದೆ ಕಲ್ಲು ಮಾಡಿಕೊಂಡು ನಡೆದು ಬಂದುಬಿಟ್ಟ ಕ್ಷಣ ನೆನಪಾಗಿ ಇನ್ನು ಮಲಗುವುದು ಸಾಧ್ಯವೇ ಇಲ್ಲ ಎಂದು ಎದ್ದು ಕೂರುತ್ತೇನೆ. ಆವತ್ತು ನಾನು ಆ ಭಟ್ಟನ ಮಾತು ಕೇಳಿ ತಿರುಗಿ ನೋಡದೇ ಬಂದು ಬಿಡಬಾರದಾಗಿತ್ತು. ಅಷ್ಟು ಹತ್ತಿರದಿಂದ ಅಮ್ಮ, ಸುಚೀ, ಅಮ್ಮಿ ಮೂವರೂ ಸ್ಪಷ್ಟವಾಗಿ ನನ್ನನ್ನು ಕರೆದಿದ್ದು ಖಂಡಿತಾ ಸುಳ್ಳಲ್ಲ, ಭ್ರಮೆಯಲ್ಲ. ಅವರು ನನಗೆ ಮರಳಿ ಸಿಗುತ್ತಿದ್ದರೋ ಇಲ್ಲವೋ ಆ ಪ್ರಶ್ನೆ ಬೇರೆ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನರೇಂದ್ರ ಪೈ ಕತೆ “ಭೇಟಿ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ.ನಾ.ಮೊಗಸಾಲೆ ಕತೆ

ದಾಸಣ್ಣಚಾರ್ಯರ ಮುಖ ಪೇಲವವಾಯ್ತು. ‘ಛೆ!’ ಎಂದರು. ಆಮೇಲೆ ಮೆತ್ತಗೆ ‘ಇವಳಿಗೆ ಏನಾದರೂ ಈ ವಿಷಯ ತಿಳಿದರೆ, ಬೆಂಕಿ ಇಟ್ಟಾಳು ನನ್ನ ತಲೆಗೆ. ಆಕೆಗೆ ದನಕರು ಅಂದರೆ ದೇವರು. ಗಬ್ಬ ನಿಲ್ಲದಿದ್ದರೆ ಬೇಡ, ಹಟ್ಟಿಯಲ್ಲೇ ಇರಲಿ ಎಂದು ಆಕೆ ಅಮೇರಿಕೆಯಲ್ಲಿರುವಾಗಲೇ ಹೇಳಿದ್ದಳು. ಆದರೆ, ನನಗೆ ಗಬ್ಬ ನಿಲ್ಲದ ಮೇಲೆ ಸಾಕುವುದು ವ್ಯರ್ಥ ಎಂಬ ಭಾವನೆ ಬಂತು.
“ನಾನು ಮೆಚ್ಚಿದ ನನ್ನ ಕತೆ”ಯ ಸರಣಿಯಲ್ಲಿ ಡಾ. ನಾ. ಮೊಗಸಾಲೆ ಬರೆದ ಕತೆ “ನುಗ್ಗೆಗಿಡ”

Read More

ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ದೊಡ್ಡ ಮನೆ, ಐದೆಕರೆ ಫಲವತ್ತಾದ ಕೃಷಿಭೂಮಿ, ಅಡಕೆ ತೋಟ ಮೇಲಾಗಿ ಅತ್ತೆ ನಾದಿನಿಯರ ಕಾಟವಿಲ್ಲದ ಎಲ್ಲರೂ ಬಯಸುವ ಕನಸಿನ ಸಂಸಾರ! ಏನು ಕೊರತೆ ಇತ್ತು ಸುಖಕ್ಕೆ? ಆದರೆ ಯಾಕೋ ಅಲ್ಲಿ ಸ್ವರ್ಗಕ್ಕೆ ಕಿಚ್ಚು ಹಚ್ಚುವ ಯಾವುದೇ ಸಂಭ್ರಮ ಕಾಣದೇ ನಿಧಾನವಾಗಿ ಸಂಸಾರದೊಳಗೇ ಅಸಮಾಧಾನದ ಕಿಚ್ಚು ಹೊತ್ತಿಕೊಂಡದ್ದು ಅಷ್ಟು ಬೇಗನೇ ಯಾರ ಅರಿವಿಗೂ ಬರಲಿಲ್ಲ. ಆದರೆ ಎಲ್ಲರ ಅರಿವಿಗೆ ಬರುವ ಹೊತ್ತಿಗೆ ಬಹಳ ತಡವಾಗಿ ಹೋಗಿತ್ತು.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಕತೆ “ಶಿಕ್ಷೆ” ನಿಮ್ಮ ಈ ಭಾನುವಾರದ ಓದಿಗೆ

Read More

ಎ. ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ಆ ರಾತ್ರಿ ಯಕ್ಷಗಾನ ಎಲ್ಲಾ ನೋಡಿ ಮುಗಿದು ಬೆಳಿಗ್ಗೆ ಮನೆಗೆ ತಲುಪಿದೆ. ಕಣ್ಣೀರಿನ ಹೊರತು ಆ ದಿನ ಸಮಜಾಯಿಷಿ ಕೊಡಲು ನನ್ನಲ್ಲಿ ಯಾವ ಮಾತುಗಳೂ ಇರಲಿಲ್ಲ. ನಿಜ ನಾನೇನು ತಪ್ಪು ಮಾಡಿರಲಿಲ್ಲ, ಆದರೆ ಯಾಕೋ ನನಗೆ ಅಮ್ಮನನ್ನು ಒಬ್ಬಳನ್ನೇ ಬಿಟ್ಟು ಹೋದ ಆ ತಪ್ಪಿತಸ್ಥ ಭಾವ ಆ ದಿನದಿಂದ ಬಹಳವಾಗಿ ಕಾಡಿತು ಮಹೇಶ. ಆ ನೋವಿನಿಂದಾಗಿ ಆ ದಿನದಿಂದ ನಾನು ಎಂದಿಗೂ ಯಕ್ಷಗಾನದತ್ತ ಕಣ್ಣು ಹಾಯಿಸಲೇ ಇಲ್ಲ.
ಎ.ಬಿ. ಪಚ್ಚು ಬರೆದ ಕತೆ “ಮೈಸಾಸುರ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾದಂಬಿನಿ ಬರೆದ ಕತೆ

ಅಲಾ.. ಒಂದ್ ಜಾಕೀಟ್ ಬಟ್ಟೆ ಅರ‍್ಸಕ್ಕೆ ವರ್ಸ ಪೂರ‍್ತಿ ದುಡ್ ವಟ್ಮಾಡಿ ಬಟ್ಟೆ ಅಂಗ್ಡಿಗ್ ವೋಗಿದೀನಿ. ಕದಿಯದಾಗಿದ್ರೆ ಇಷ್ಟು ಕಸ್ಟ ತಗೀಬೇಕಾ? ಆ ದೇವ್ರೂ ಈ ಅನ್ಯಾಯ ನೋಡ್ಕ್ಯಂತ ಸುಮ್ಕಿದಾನಾ ಅಂಗಾರೆ? ಅಲಾ ಈ ಸೀರೆ ವಯರ್ ಬುಟ್ಟಿಲಿ ಯಾವಾಗ್ ಬಂದ್ ಸರ‍್ಕಂತು ಅಂತ? ಬವುಶ್ಯ ನನ್ ಇಂದ್ಗಡೀಕೇ ನಿಂತ್ಕಂದಿದ್ನಲ್ಲ ಇವ್ನು.. ಇವ್ನೇ ಎಲ್ಲಾರೂ.. ಇವ್ನೇ ಇವ್ನೇ! ಇನ್ಯಾರ್ ಇಂತಾ ಕ್ಯಲ್ಸ ಮಾಡ್ತರೆ? ಅಲಾ.. ಅದ್ಯಾ ಮಾಯ್ಕದಲ್ಲಿ ವಯರ್ ಬುಟ್ಟಿಗೆ ಸೀರೆ ತಗ್ದು ಆಕಿಬುಟ್ಟಿದ್ನೋ ಅಂತ!
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾದಂಬಿನಿ ಬರೆದ ಕಥೆ “ತಲೆ ಮ್ಯಾಕೆ ವೂದ ನೀರು” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ