Advertisement

Tag: Kannada short story

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಹನಮಂತ ಹಾಲಿಗೇರಿ ಬರೆದ ಕತೆ

ಅವತ್ತೆ ಹುಚ್ಚರಾಮ ನಿಶ್ಚಯಿಸಿಬಿಟ್ಟ. ಅವ್ವಗೆ ಹೇಳಿ ತಾನು ಹ್ಯಾಂಗಾದರೂ ಮಾಡಿ ಯಾವ ಹೆಂಗ್ಸನ್ನಾದರೂ ಲಗ್ನ ಆಗಿ ಬಿಡಬೇಕು. ನಾಳೆಯೇ ಅವ್ವಳನ್ನು ಕೇಳಿಬಿಡಬೇಕು. ಅವ್ವ ಯಾರನ್ನಾದರೂ ತಂದು ನನಗೆ ಗಂಟು ಹಾಕಿಯೇ ಹಾಕುತ್ತಾಳೆ ಎಂಬ ಭರವಸೆಯೊಂದಿಗೆ ಆತ ಅವತ್ತು ಮಲಗಲು ಪ್ರಯತ್ನಿಸಿದ. ಆದರೆ ಮಲಗಲು ಪ್ರಯತ್ನಿಸಿದ್ದೆ ಬಂತು. ನಿದ್ದೆ ಹತ್ತಿರ ಸುಳಿಯಲಿಲ್ಲ. 
 ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಹನಮಂತ ಹಾಲಿಗೇರಿ ಬರೆದ “ಸಕಲರೋಳು ಲಿಂಗಾತ್ಮಾ ಕಾಣಾ” ಕಥೆ ನಿಮ್ಮ ಈ ಭಾನುವಾರದ ಓದಿಗೆ

Read More

ಎ.ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ನಾನು ಯಾವತ್ತೂ ಅವಳು ಈ ರೀತಿಯಾಗಿ ಕನಸಿನಲ್ಲಿ ಮಾತಾಡಿದ್ದು ನೋಡಿದ್ದೇ ಇಲ್ಲ. ಹೆಚ್ಚು ಕಡಿಮೆ ನನಗೆ ಎಪ್ಪತ್ತರ ವಯಸ್ಸು. ಮದುವೆಯಾಗಿ ಐವತ್ತು ಸಂವತ್ಸರಗಳೇ ನಮ್ಮ ನಡುವೆ ಹಾಗೇ ಕಳೆದು ಹೋಗಿತ್ತು. ಅಷ್ಟೂ ವರ್ಷಗಳಲ್ಲಿ ಜಾನಕಿ ಕನಸಿನಲ್ಲಿ ಮಾತಾಡಿದ್ದು, ಉಹೂಂ.. ನಾನಂತು ಒಮ್ಮೆಯೂ ಕೇಳಿಯೂ ಇಲ್ಲ, ನೋಡಿಯೂ ಇಲ್ಲ. ಆದರೂ ಆ ರಾತ್ರಿ ಮೊದಲ ಬಾರಿಗೆ ಜಾನಕಿ ಕನಸಲ್ಲಿ ಮಾತಾಡಿದ್ದಳು!!
ಎ.ಬಿ. ಪಚ್ಚು ಬರೆದ ಕಥೆ “ಪೌರ್ಣಮಿ” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಟಿ.ಕೆ. ದಯಾನಂದ ಕತೆ

ಕಷ್ಟಪಟ್ಟು ಎದ್ದು ಗೋಡೆಗೆ ಒರಗಿಕೊಂಡ ಆಕೆ ಕೈ ಸನ್ನೆ ಮಾಡಿ ನೀರು ಕೇಳಿದಳು. ಹತ್ತಿರದಲ್ಲೇ ನಿಂತಿದ್ದ ಹುಡುಗಿಯೊಬ್ಬಳು ನೀರು ತಂದುಕೊಟ್ಟಳು. ನೀರು ಕುಡಿದು ಸುಧಾರಿಸಿಕೊಂಡ ಮೇಲೆ ಆಕೆ ದೊಡ್ಡ ಉಸಿರು ಬಿಟ್ಟು, ‘ಮಗ ಸತ್ತರೆ ತಾಯಿ ಏನು ಹೇಳ್ತಾಳಪ್ಪ. ಮಗ ಸತ್ತ, ಸಾಯಿಸಿದ್ರು’ ಎಂದು ಅಳಲು ಶುರುಮಾಡಿದಳು. ಕಣ್ಣೀರು ಒರೆಸಿಕೊಳ್ಳುತ್ತಾ, ‘ಇನ್ನೊಬ್ಬ ಮಗ ಇದ್ದಿದ್ರೆ ಆ ಪಾಪಿಗಳನ್ನ ಹೊಡೆದುಕೊಂದು ಈ ಸಾವಿಗೆ ಸೇಡು ತೀರಿಸ್ಕೊ ಅಂತ ಹೇಳಬೋದಿತ್ತು. ಆದ್ರೆ ಇದ್ದವ್ನು ಒಬ್ಬನೇ ಮಗ. ಅವನು ವಾಪಸ್ ಬರ್ತಾನಾ’ ಎಂದು ಬರಿಗಣ್ಣುಗಳಿಂದ ಅವನನ್ನು ನೋಡಿದಳು.

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ ಕತೆ

ನನ್ನೊಳಗೆ ಉಷಾ ಜೀವಂತವಾಗಿಯೇ ಇದ್ದಳು. ಕೆಲವೊಮ್ಮೆ ಕನಸುಗಳಲ್ಲಿ ಬಂದು ತನ್ನ ದುಃಖದ ಕಥೆಗಳನ್ನು ಹೇಳಿಕೊಂಡಳು. ಇನ್ನು ಕೆಲವೊಮ್ಮೆ ಅವಳೊಬ್ಬ ಸದ್ಗೃಹಿಣಿಯಾಗಿ ತಲೆಗೆ ಮಿಂದು, ಕೂದಲು ಕಟ್ಟಿಕೊಂಡು, ಬಟ್ಟೆ ತುರುಬು ಹಾಕಿ, ಮಂಗಲ ಕುಂಕುಮವನ್ನಿಟ್ಟುಕೊಂಡು ನಂದಿನಿ ಹಾಲಿನ ಪ್ಯಾಕೆಟ್ ಮನೆಯೊಳಗೆ ತರುತ್ತಿರುವಂತೆ ಕನಸಾಗುತ್ತಿತ್ತು. ‘ಸದಾಶಿವಯ್ಯನವರ ಮಾತನ್ನು ಎಂದಿಗೂ ನಂಬಬೇಡ’ ಎಂದು ಒಂದು ಸಲ ಹೇಳಿ ಹೋದಳು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ

Read More

ವಿಜಯಾ ಮೋಹನ್‌ ಬರೆದ ಈ ಭಾನುವಾರದ ಕತೆ

ಅವಳು ಜೀವ್‌ಮಾನದಾಗೆ, ಅಷ್ಟೊಂದು ಬಳೆ ತೊಟ್ಟುಕೊಂಡಿರ್‍ಲಿಲ್ಲ. ಅವ್ವನ ತವರಲ್ಲಿ, ಅವಳ ಬೆನ್ನಿಂದಲ, ತಮ್ಮನೊಬ್ಬನು ಮೇಷ್ಟ್ರಾಗಿದ್ದವನು. ಊರ ಮಾರಮ್ಮನ ಜಾತ್ರೆಯೊಂದಕ್ಕೆ ಕರಿಸಿಕೊಂಡು. ಏಷ್ಟೊ ವರುಷಕ್ಕೆ ಬಂದಿದ್ದೀಯಕ್ಕ, ಮುಂದುಕ್ಕೆ ಇರೋವರ್ಯಾರೊ? ಸಾಯೋವರ್ಯಾರೊ? ನೀನು ತೊಟ್ಟೇ ತೊಟ್ಟುಕೊಬೇಕೆನುತ, ಬಳೆ ಮಲಾರದವನನ್ನ ಕರೆಸಿ. ಒಂದೊಂದು ಕ್ಯೆಗೆ ಎರೆಡೆರೆಡು ಡಸನ್ನಿನಷ್ಟು, ನೂರು ರೂಪಾಯಿನ ಬಳೆ ತೊಡಿಸಿ, ನೆಟ್ಟಗಿನ್ನ ಹದಿನೈದು ದಿನವಾಗಿರಲಿಲ್ಲ. ಏನು ತಗದ್ರು ತಗೀತೀನಿ, ಕ್ಯೆಯ್ಯಾಗಳ ಬಳೆ ಮಾತ್ರ ಬಿಚ್ಚಲ್ಲ ಸಾ, ನೋಡಿಸಾ ಮುತ್ಯೆದೆ ಬಳೆ ಬಿಚ್ಚುಸಬ್ಯಾಡಿ ಸಾ, ಒಡಿಬ್ಯಾಡ್ರಿ ಸಾ, ಅನುತ ಇನ್ನಿಲ್ಲದಂಗೆ ಬೇಡಿಕೊಂಡ್ಲು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ