Advertisement

Tag: Kannada Stories

ಆಧುನಿಕ ವಿಕಾರಕ್ಕೊಂದು ಕನ್ನಡಿ: ಕಾವ್ಯಾ ಕಡಮೆ ಕಥಾ ಸಂಕಲನಕ್ಕೆ ಶ್ರೀಧರ ಬಳಗಾರ ಮುನ್ನುಡಿ

ತೊಟ್ಟು ಕ್ರಾಂತಿ ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನ ಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.
ಕಾವ್ಯಾ ಕಡಮೆ ಕಥಾ ಸಂಕಲನ “ತೊಟ್ಟು ಕ್ರಾಂತಿ”ಗೆ ಕತೆಗಾರ ಶ್ರೀಧರ ಬಳಗಾರ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ಜೈಲ್‌ನಿಂದ ಹೊರಬಂದ ಇಲಿ: ಕೆ.‌ ಸತ್ಯನಾರಾಯಣ ಸರಣಿ

ದಿನ ಕಳೆದಂತೆ, ಜಯಮ್ಮನಿಗೆ ಇಲಿಯದೇ ಕಂಪನಿ, ಸಾಂಗತ್ಯ. ಒಂದೆರಡು ದಿನ ಆದಮೇಲೆ, ಅದರ ನುಣುಪಾದ ಮೈಯನ್ನು ಸವರಲು ನೋಡಿದರು. ಕೊಸರಿಕೊಂಡಿತು. ಆದರೂ ಒಳಗಡೆ ಇಷ್ಟವಾಯಿತೆಂದು ಕಾಣುತ್ತದೆ, ಮತ್ತೆ ಮತ್ತೆ ಹತ್ತಿರ ಬರುತ್ತಿತ್ತು. ಒಂದೆರಡು ಸಲ ತೊಡೆ, ಮಂಡಿಯ ಹತ್ತಿರ ಬಂತು. ಮತ್ತೆ ಸವರಿದರು.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿಯ ನಾಲ್ಕನೆಯ ಬರಹ ನಿಮ್ಮ ಓದಿಗೆ

Read More

ನೀಲಿ ಮತ್ತು ಸೇಬು: ಸುಧಾ ಆಡುಕಳ ಕಥಾಸಂಕಲನಕ್ಕೆ ಎಚ್. ಎಸ್. ಸತ್ಯನಾರಾಯಣ ಮುನ್ನುಡಿ

‘ಹೆಣ್ಣು’ ಇವರ ಕಥೆಗಳ ಕೇಂದ್ರವಾದರೂ ಆಕೆಯ ಸುತ್ತಲಿರುವ ಗಂಡಿನ ಮನೋಧರ್ಮವನ್ನೂ ಇವರು ಅಲಕ್ಷಿಸಿಲ್ಲ. ಮನುಷ್ಯಪ್ರಜ್ಞೆ ಕಾಲದಿಂದ ಕಾಲಕ್ಕೆ ಜಿಗಿಯುವಲ್ಲಿ, ವಿಕಸಿಸುವಲ್ಲಿ, ಅರ್ಥಪೂರ್ಣತೆಯತ್ತ ತುಡಿಯುವಲ್ಲಿ ಎದುರಿಸಿ ನಿಲ್ಲಬೇಕಾದ ಬಿಕ್ಕಟ್ಟುಗಳನ್ನು ತಮ್ಮ ಕಥೆಗಳ ಮೂಲಕ ಶೋಧಿಸುವ ಸುಧಾ ಅವರ ಲೇಖನಿ ಬದುಕಿನ ಸಕಾರಾತ್ಮಕ ಗುಣಗಳತ್ತಲೇ ಹೆಚ್ಚಾಗಿ ವಾಲುವುದರಿಂದ ಇವರ ಪಾತ್ರಗಳು ಸಂಕಟಗಳ ನಡುವೆಯೂ ಜೀವನೋತ್ಸಾಹವನ್ನು ಉಳಿಸಿಕೊಂಡು ಪುಟಿಯುತ್ತವೆ.
ಸುಧಾ ಆಡುಕಳ ಅವರ “ನೀಲಿ ಮತ್ತು ಸೇಬು” ಕಥಾ ಸಂಕಲನಕ್ಕೆ ಡಾ. ಎಚ್. ಎಸ್. ಸತ್ಯನಾರಾಯಣ ಬರೆದ ಮುನ್ನುಡಿ

Read More

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಕ್ಕೇಟಿ ಮಾಧವ ಗೌಡ ಬರೆದ ಕಥೆ

“ಅಜ್ಜ ಅಡ್ಕಾರಿಗೆ ಹೋದದ್ದು ಯಾಕೆ ಎಂದು ಅಮೇಲೆ ತಿಳಿಯಿತು. ಅವರು ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದರು. ಮರುದಿನ ಅಮ್ಮ ಅಜ್ಜನ ಸ್ವಚ್ಛ ಬಟ್ಟೆಗಳನ್ನು ಮಡಚಿ ತಂದು ಅಜ್ಜನಿಗೆ ಕೊಟ್ಟರು. ನಾನು ಕಿಸ್ತು ಕಟ್ಟಲು ಹೋಗುವ ನಮ್ಮ ಅಜ್ಜನ ಸಡಗರವನ್ನು ಗಮನಿಸುತ್ತಿದ್ದೆ. ಯಾವುದೋ ರಾಜಕಾರ್ಯಕ್ಕೆ ಹೋಗುವವರಂತೆ ಅಜ್ಜ ಸಂಭ್ರಮಿಸುತ್ತಿದ್ದರು. ಒಗೆದು ಶುಚಿಯಾಗಿದ್ದ ಮೊಣಕಾಲಿನ ಕೆಳಗೆ ಬರುವಂಥ ಮುಂಡು ಉಟ್ಟು”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ