Advertisement

Tag: Kannada Stories

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಆವಾಗಾವಾಗ ರಾತ್ರಿಗಳಲ್ಲಿ ತಾವಿಬ್ಬರೂ ಮೈಗೆ ಮೈ ಬೆಸೆದುಕೊಂಡು ತಾನು ಎಡದಿಂದ ಅವಳು ಬಲದಿಂದ ಎಷ್ಟೊತ್ತಿನವರೆಗೆ ಚುಕ್ಕೆಗಳೆಣಿಸಿದರೂ ಇಬ್ಬರೂ ಬಂದು ಒಂದುಕಡೆ ಸೇರದ ಆಟಕ್ಕೆ ಈಗ ಬೇರೆಯದೇ ಅರ್ಥ ಕಾಣಿಸಿ ಇದೆಲ್ಲ ಎಲ್ಲಿಹೋಗಿ ಮುಟ್ಟುವುದೋ ಎಂದು ಅಯೋಮಯಗೊಳ್ಳುವನು. ಹೀಗೆ ಇಲ್ಲಸಲ್ಲದ ಯೋಚನೆಗೀಡಾದವನು ದಾರಿತಪ್ಪಿದವನಂತೆ ಎಡವುತ್ತ ಮತ್ತೊಂದು ರಾತ್ರಿಯನ್ನು ತುಳಿಯುತ್ತ ತಳ್ಳುವನು. ಬಗ್ಗಡದ ಬದುಕು ಟಿಸಿಲೊಡೆವ ಸೂಚನೆ ಕಂಡು ಮಲಗಿದಲ್ಲೇ ಬಿರುಕು ಬಿಡುವನು.
ಲಕ್ಷ್ಮಣ ಶರೆಗಾರ ಕಥಾ ಸಂಕಲನ “ತಿದಿಯ ತುದಿಗೆ ಬೆಂಕಿಯ ಉಗುಳು” ಕೃತಿಯ “ಉಧೋ ಉಧೋ” ಕತೆ

Read More

ಆಧುನಿಕ ವಿಕಾರಕ್ಕೊಂದು ಕನ್ನಡಿ: ಕಾವ್ಯಾ ಕಡಮೆ ಕಥಾ ಸಂಕಲನಕ್ಕೆ ಶ್ರೀಧರ ಬಳಗಾರ ಮುನ್ನುಡಿ

ತೊಟ್ಟು ಕ್ರಾಂತಿ ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನ ಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.
ಕಾವ್ಯಾ ಕಡಮೆ ಕಥಾ ಸಂಕಲನ “ತೊಟ್ಟು ಕ್ರಾಂತಿ”ಗೆ ಕತೆಗಾರ ಶ್ರೀಧರ ಬಳಗಾರ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ಜೈಲ್‌ನಿಂದ ಹೊರಬಂದ ಇಲಿ: ಕೆ.‌ ಸತ್ಯನಾರಾಯಣ ಸರಣಿ

ದಿನ ಕಳೆದಂತೆ, ಜಯಮ್ಮನಿಗೆ ಇಲಿಯದೇ ಕಂಪನಿ, ಸಾಂಗತ್ಯ. ಒಂದೆರಡು ದಿನ ಆದಮೇಲೆ, ಅದರ ನುಣುಪಾದ ಮೈಯನ್ನು ಸವರಲು ನೋಡಿದರು. ಕೊಸರಿಕೊಂಡಿತು. ಆದರೂ ಒಳಗಡೆ ಇಷ್ಟವಾಯಿತೆಂದು ಕಾಣುತ್ತದೆ, ಮತ್ತೆ ಮತ್ತೆ ಹತ್ತಿರ ಬರುತ್ತಿತ್ತು. ಒಂದೆರಡು ಸಲ ತೊಡೆ, ಮಂಡಿಯ ಹತ್ತಿರ ಬಂತು. ಮತ್ತೆ ಸವರಿದರು.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿಯ ನಾಲ್ಕನೆಯ ಬರಹ ನಿಮ್ಮ ಓದಿಗೆ

Read More

ನೀಲಿ ಮತ್ತು ಸೇಬು: ಸುಧಾ ಆಡುಕಳ ಕಥಾಸಂಕಲನಕ್ಕೆ ಎಚ್. ಎಸ್. ಸತ್ಯನಾರಾಯಣ ಮುನ್ನುಡಿ

‘ಹೆಣ್ಣು’ ಇವರ ಕಥೆಗಳ ಕೇಂದ್ರವಾದರೂ ಆಕೆಯ ಸುತ್ತಲಿರುವ ಗಂಡಿನ ಮನೋಧರ್ಮವನ್ನೂ ಇವರು ಅಲಕ್ಷಿಸಿಲ್ಲ. ಮನುಷ್ಯಪ್ರಜ್ಞೆ ಕಾಲದಿಂದ ಕಾಲಕ್ಕೆ ಜಿಗಿಯುವಲ್ಲಿ, ವಿಕಸಿಸುವಲ್ಲಿ, ಅರ್ಥಪೂರ್ಣತೆಯತ್ತ ತುಡಿಯುವಲ್ಲಿ ಎದುರಿಸಿ ನಿಲ್ಲಬೇಕಾದ ಬಿಕ್ಕಟ್ಟುಗಳನ್ನು ತಮ್ಮ ಕಥೆಗಳ ಮೂಲಕ ಶೋಧಿಸುವ ಸುಧಾ ಅವರ ಲೇಖನಿ ಬದುಕಿನ ಸಕಾರಾತ್ಮಕ ಗುಣಗಳತ್ತಲೇ ಹೆಚ್ಚಾಗಿ ವಾಲುವುದರಿಂದ ಇವರ ಪಾತ್ರಗಳು ಸಂಕಟಗಳ ನಡುವೆಯೂ ಜೀವನೋತ್ಸಾಹವನ್ನು ಉಳಿಸಿಕೊಂಡು ಪುಟಿಯುತ್ತವೆ.
ಸುಧಾ ಆಡುಕಳ ಅವರ “ನೀಲಿ ಮತ್ತು ಸೇಬು” ಕಥಾ ಸಂಕಲನಕ್ಕೆ ಡಾ. ಎಚ್. ಎಸ್. ಸತ್ಯನಾರಾಯಣ ಬರೆದ ಮುನ್ನುಡಿ

Read More

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ