Advertisement

Tag: Kannada Story

ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕಥೆ

ಇಲ್ಲ! ಅಪ್ಪ ಪೇಟೆಗೆ ಹೋದ ಸಮಯ ನೋಡಿ ಇಲ್ಲಿಗೆ ಓಡಿ ಬಂದು ಪುಟ್ಟ ಮಗುವಾಗಿದ್ದ ನನ್ನನ್ನು ಎತ್ತಿ ಮುದ್ದಾಡಿದ ವ್ಯಕ್ತಿ ಇವನಲ್ಲ. ಬಿಡುವಿಲ್ಲದ ಮನೆಗೆಲಸದ ವೇಳೆಯಲ್ಲೂ ‘ಎತ್ತಿಕೋ’ ಎಂದು ಅಮ್ಮನನ್ನು ಪೀಡಿಸುತ್ತಿದ್ದಾಗ “ಇತ್ತ ಕೊಡಿ. ನಾನು ನೋಡಿಕೊಳ್ತೇನೆ” ಎಂದು ನನ್ನನ್ನು ಎತ್ತಿಕೊಂಡು, ತೋಟದಲ್ಲೆಲ್ಲ ತಿರುಗಾಡಿ ಬಾಳೆಹೂವಿನ ಜೇನು ನೆಕ್ಕಿಸಿದವನೂ ಇವನಲ್ಲ ಎಂದುಕೊಳ್ಳುತ್ತಿದ್ದಂತೆ ಕತ್ತಲಲ್ಲಿ ಭೂಮಿಯನ್ನು ಥರಗುಟ್ಟಿಸುವ ಸದ್ದು ನಮ್ಮೆಲ್ಲರನ್ನೂ ಇಡಿಯಾಗಿ ಅಲುಗಾಡಿಸಿತು.
ಸುಭಾಷ್ ಪಟ್ಟಾಜೆ ಬರೆದ ಈ ಕಥೆ “ಗೋಡೆ”

Read More

ಶ್ರೀ ಡಿ.ಎನ್. ಬರೆದ ಈ ಭಾನುವಾರದ ಕತೆ

ಹೋಗಿ ನೋಡಿ ಅಪ್ಪನೆಂದು ಗುರುತು ಹಿಡಿದ. ಆತನ ಮೇಲಿದ್ದ ಕೋಪ ಆರಿರಲಿಲ್ಲ. ಜೀವನವಿಡೀ ಬೇರೆಯವರ ಪಾಪ ಕಳೆಯಲು ದಾನಗಳು ತೆಗೆದುಕೊಂಡು ಜಪತಪಗಳಲ್ಲಿ ಕಾಲ ಕಳೆಯುತ್ತಿದ್ದ ಅಪ್ಪ, ತನ್ನ ಅಪರಕರ್ಮವೂ ಸರಿಯಾಗಿ ಆಗದೆ ಯಾವುದೋ ತಿಳಿಯದ ನಗರದಲ್ಲಿ ಅನಾಥ ಹೆಣದಂತೆ ಬೂದಿಯಾಗಿದ್ದ. ಯಾರದೋ ಸಾವಿಗೆ ಗರುಡ ಪುರಾಣ ಓದುತ್ತಿದ್ದ ಅಪ್ಪ ಸತ್ತಾಗ ಅವನಿಗಾಗಿ ಯಾರೂ ಅದನ್ನು ಓದದಂತೆ ರಮೇಶ ನೋಡಿಕೊಂಡ.
ಶ್ರೀ ಡಿ.ಎನ್. ಬರೆದ ಕತೆ “ಪಾಪ”

Read More

‘ವಾಟ್ ದ ಹೆಕ್’ ಅಮ್ಮಾ…

‘ನೀವೇ ಸರಿ, ಅರವಿಂದರಾಯರೇ. ಮಕ್ಕಳನ್ನು ಬಹಳ ಚೆನ್ನಾಗಿ ಬೆಳೆಸಿದ್ದೀರಿ’ ಇನ್ನೂ ಅವರ ಮಾತು ಮುಗಿದಿಲ್ಲ. ಎಲ್ಲಿಂದ ಬಂತೋ ಒಂದು ದೊಡ್ಡ ಅಲೆ, ಅಲ್ಲಿ ಕೂತಿದ್ದವರನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿಬಿಟ್ಟಿತು. ಕಣ್ಣು ಮುಚ್ಚಿ ಬಿಡುವುದರಲ್ಲಿ ಎಲ್ಲ ಮರಳು, ಎಲ್ಲೆಲ್ಲೂ ನೀರು. ಜನರ ಕೂಗು, ಹಾಹಾಕಾರ. ಸುಕನ್ಯ ಕಣ್ಣು ಬಿಟ್ಟಾಗ ಹತ್ತಿರ ಯಾರೂ ಕಾಣುತ್ತಿಲ್ಲ. ‘ವಿನೂ, ವಿಶೂ’ ಜೋರಾಗಿ ಕೂಗುತ್ತಾ ಇಡೀ ಸಮುದ್ರದ ದಡದಲ್ಲಿ ಹುಚ್ಚು ಹಿಡಿದಂತೆ ಓಡುತ್ತಿದ್ದಾಳೆ.
ಗುರುಪ್ರಸಾದ್‌ ಕಾಗಿನೆಲೆ ಬರೆದ ನೀಳ್ಗತೆಯ ಕಂತು

Read More

ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕತೆ

ಒಳಭಾಗಕ್ಕೆ ತೆರೆದುಕೊಂಡಿದ್ದ ಬಾಗಿಲಿಗೊರಗಿ ನಿಂತುಕೊಂಡ ಪ್ರಿಯಾ ಆಗಸದ ಶೂನ್ಯದಲ್ಲಿ ಮಿನುಗುತ್ತಿರುವ ನಕ್ಷತ್ರಗಳನ್ನು ಅರೆಮುಚ್ಚಿದ ಕಣ್ಣುಗಳಿಂದ ನೋಡುತ್ತಾ ಅಂದಳು “ನಾನು ಕೆಟ್ಟ ಅದೃಷ್ಟದ ಸಂಕೇತ ದಿನೂ. ನೀವು ಹೆಣ್ಣು ನೋಡಲು ಬಂದಾಗ ನಾನು ಏನೇನೋ ಕನಸು ಕಟ್ಟಿದೆ. ಆದ್ರೆ ಅಂದುಕೊಂಡದ್ದೇನೂ ನಿಜವಾಗ್ಲಿಲ್ಲ. ಈಗ ನೋಡು, ಇದೇ ನನ್ನ ಬದುಕು. ಇದೇ ನನ್ನ ಭಾಗ್ಯ” ಎನ್ನುತ್ತಾ ಮುಖವನ್ನು ಅತ್ತ ಹೊರಳಿಸಿ ಗಂಟಲಲ್ಲಿ ಕಟ್ಟಿ ನಿಂತ ಬಿಕ್ಕಳಿಕೆಯನ್ನು ಕಷ್ಟಪಟ್ಟು ತಹಬದಿಗೆ ತಂದುಕೊಂಡಳು.
ಡಾ. ಸುಭಾಷ್‌ ಪಟ್ಟಾಜೆ ಬರೆದ ಈ ಭಾನುವಾರದ ಕತೆ “ಹುಟ್ಟು” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನವೀನ ಗಣಪತಿ ಬರೆದ ಈ ಭಾನುವಾರದ ಕತೆ

ಮಧ್ಯಾಹ್ನ ಒಂದು ಘಂಟೆಗೇ ತಾನು ಮನೆಯಲ್ಲಿ ಮಾಡಬಹುದಾದ ಎಲ್ಲ ಕೆಲಸಗಳೂ ಮುಗಿದು ಮತ್ತೆಲ್ಲ ಮನಸ್ಸಿಗೆ ಕಿರಿಕಿರಿಯಾಗ ಹತ್ತಿತ್ತು. ನಾಲ್ಕು ದಿನ ದಾವಣಗೆರೆಗೆ ಹೋಗಿ ಮಗಳೊಟ್ಟಿಗೆ ಇದ್ದು ಬರೋಣವೆನಿಸುತ್ತಿತ್ತು. ಆದರೆ ಶಂಭಣ್ಣನನ್ನು ಬಿಟ್ಟು ಎಲ್ಲಿಯೂ ಹೋಗುವಂತಿರಲಿಲ್ಲ. ಮಗಳೂ ವಾರ ವಾರ ಬರುವವಳಲ್ಲ. ಅವಳಿಗೆ ಭಾನುವಾರ ರಜಾದಿನಗಳು ಇದ್ದಾಗಲೇ ಜೋರು ವ್ಯಾಪಾರ. ಇನ್ನು ಆಚೀಚೆ ಎರಡು ಹೆಂಗಸರೊಟ್ಟಿಗೆ ಹರಟೆ – ಮಾತು – ಒಡನಾಟ ಮಾಡೋಣವೆಂದರೆ, ಒಬ್ಬರ ವ್ಯವಹಾರವಾದರೂ ಚೊಕ್ಕಟವಾಗಿದೆಯೇ?
ನವೀನ ಗಣಪತಿ ಬರೆದ ಈ ಭಾನುವಾರದ ಕತೆ “ಧನಲಕ್ಷ್ಮಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ