Advertisement

Tag: Kannada Story

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವೈದೇಹಿ ಬರೆದ ಕತೆ

ಯಾಕೋ ನನಗೆ ಕೋರ್ಟುಮನೆ ಅಲೆದೇ ಸೋತು ಕುಸಿದುಹೋಗಿದ್ದ ಅಪ್ಪನ ಹೋರಾಟದ ಬಗ್ಗೆ ಹೇಳಲೇಬೇಕೆನಿಸಿತು. ಆಸ್ತಿಗಾಗಿ ಕುಟುಂಬದಲ್ಲೇ ಒಂದು ಆತ್ಮಹತ್ಯೆ ಆಯಿತು, ಒಂದು ಕೊಲೆ ಆಯಿತು, ಇದೆಲ್ಲ ನಮ್ಮ ಮಟ್ಟಿಗೆ ಎಂಥ ದೊಡ್ಡದು ಯೋಚಿಸಿ. ಅಪ್ಪ ಕಡೆಕಡೆಗೆ ತಮ್ಮದೇ ಕುಟುಂಬದೊಂದಿಗೆ ಕೋರ್ಟುಕಚೇರಿ ವ್ಯಾಜ್ಯ ಯಾಕಾದರೂ ಬೇಕಿತ್ತು ಅಂತ ಕೊರಗುತಿದ್ದರು ಅಷ್ಟಿಷ್ಟಲ್ಲ. ಹಾಗೆಂದು ‘ಜಗಳ ಬೇಡ, ಎಲ್ಲ ನಿಮಗೇ, ತಕೊಳ್ಳಿ’ ಅಂತ ಬಿಟ್ಟುಕೊಟ್ಟರೇನು? ಇಲ್ಲವಲ್ಲ. ಅದು ಸಾಧ್ಯವೂ ಇಲ್ಲ. ‘ಒಂದು ರೀತಿ ಮಹಾಭಾರತದಲ್ಲಿ ಬರುವ ಧರ್ಮವ್ಯಾಧನ ಕತೆಯಂತೆ ನಾವೆಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯ ಕೊನೆಯ ಕಂತಿನಲ್ಲಿ ವೈದೇಹಿ ಬರೆದ ಕತೆ “ಅಮುದ ಹೇಳಿದ ಕತೆ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ

ಕಾಲ ಕೈಕೊಡುತ್ತದೆ ಎಂದು ಸದಾ ಯೋಚಿಸುತ್ತಿದ್ದ ಹರಿಶ್ಚಂದ್ರನಿಗೆ ತನ್ನ ಮಗಳ ಹೆಸರು ‘ಸಮಯ’ವೆಂದು ತಿಳಿದಾಗ ಆಶ್ಚರ್ಯವಾಯಿತು. ಅಮೃತಾ ನೆನಪಾದಳು. ಎಲ್ಲಿದ್ದಾಳೆ? ಸಮಯಳ ಜೊತೆ ಇದ್ದಾಳೆಯೆ? ಸಮಯಳಿಗೆ ಹೇಗೆ ಗೊತ್ತಾಯಿತು ತನ್ನ ವಿಳಾಸ ಫೋನ್ ನಂಬರ್? ಅಮೃತಾ ಹೇಳಿರಬಹುದೆ? ತನ್ನಿಂದ ವಂಚಿತಳಾದವಳು. ಅವಳು ಹೇಳಿರುವುದು ಅಸಾಧ್ಯ ಎಂಬುದು ಖಾತ್ರಿ. ಒಂದುಕ್ಷಣ ಹರಿಶ್ಚಂದ್ರನ ಮುಖ ಕಪ್ಪಿಟ್ಟಿತು. ಮುಸ್ಸಂಜೆಯ ಕೆಂಪು ಬೆಳಕು ಕಿಟಕಿ ಪ್ರವೇಶಿಸಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಎಂ.ಎನ್. ವ್ಯಾಸರಾವ್ ಬರೆದ ಕತೆ “ಟಿಕ್ ಟಿಕ್ ಟಿಕ್ ಟಿಕ್ ಕೈಕೊಟ್ಟ ಗಡಿಯಾರ”

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ

‘ಈ ಮಹಾರಾಯನ ಕೊರೆತದಿಂದ, ನಾನು ಬೇರೆಯವರಿಗೆ ಎಷ್ಟು ಕೊರೆಯುತ್ತಿದ್ದೆ ಎಂಬ ಅರಿವಾಗಿದೆ. ಪಾಪ! ನನ್ನ ಸೊಸೆ ಚಿನ್ನದಂಥಾ ಹುಡುಗಿ. ಎಲ್ಲವನ್ನೂ ಸಹಿಸಿದ್ದಾಳೆ. ಈತನ ಕೊರೆತ ತಪ್ಪಿಸಿಕೊಳ್ಳಲು ಸೊಸೆಯನ್ನೇ ಮೊರೆ ಹೋಗಬೇಕು’ ಎಂದು ಮನದಲ್ಲೇ ನಿರ್ಧರಿಸಿದರು. ಮರುದಿನ ಬೆಳಿಗ್ಗೆ ನಂದಿನಿ ನಿತಿನ್‌ನನ್ನು ಶಾಲೆಗೆ ಒಯ್ಯಲು ಸಿದ್ಧಳಾದಾಗ ರಾಯರು ಅವಳಲ್ಲಿಗೆ ಬಂದರು. ಶಾಸ್ತ್ರಿಗಳು ಎಲ್ಲೂ ಕಾಣಿಸಲಿಲ್ಲ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ “ಉಭಯ ಸಂಕಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್‌ ಕುಮಾರ್‌ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಒಮ್ಮೆ ಹೀಗೆ ಬಿಡುವಿದ್ದಾಗ, ಐತಾಳರು ನನ್ನ ಹಿನ್ನೆಲೆ ಬಗ್ಗೆ ವಿಚಾರಿಸಿದಾಗ ಸುಳ್ಳು ಹೇಳಲು ಮನಸ್ಸಾಗದೆ ಎಲ್ಲ ಹೇಳಿಬಿಟ್ಟೆ. ಮನಸ್ಸು ಹಗುರಾಯಿತು. ಈವರೆಗೂ ಸಂಪೂರ್ಣ ಸತ್ಯ ಯಾರಿಗೂ ಹೇಳಿರಲಿಲ್ಲ. ಐತಾಳರು ಸ್ವಲ್ಪ ಹೊತ್ತು ನನ್ನ ಮುಖವನ್ನೇ ನೋಡಿದರು. ಕೆಲಸದ ವಿಷಯದಲ್ಲಿ ಅವರು ತುಂಬಾ ಸ್ಟ್ರಿಕ್ಟ್; ಆದರೆ ಹೆಂಗರಳು. ಕೆಲಸಗಾರರನ್ನು ಮಕ್ಕಳ ಹಾಗೆ ನೋಡಿಕೊಳ್ಳುವ ಸ್ವಭಾವ. “ಆದ್ರೂ ನೀ ಊರು ಬಿಟ್ಟು ಬರಬಾರದಿತ್ತು ಮಾರಾಯ, ನೀ ಎಣಿಸಿದ ಹಾಗೆ ಅಲ್ಲೇನು ಆಗಿರಲಿಕ್ಕಿಲ್ಲ. ಈ ಕಾಲದ ಜನ ಕಥೆ ಸಿನಿಮಾ ಧಾರಾವಾಹಿ ನೋಡಿ ಎಂತೆಲ್ಲಾ ಗ್ರಹಿಸಿ ಹೀಗೆ ಮಾಡಿಬಿಡೋದು ಹೌದಲ್ಲವನ!”
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಅನಿಕೇತನ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ