Advertisement

Tag: Kannada Story

ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ

ಯಾಕೋ ಅವರ ಮನೆಯ ಕೆಲವು ಆಗುಹೋಗುಗಳಿಗೆ ನಾನು ಸಾಕ್ಷಿಯಾಗಿರುವಂತೆ ನನಗೆ ಅನಿಸಿದ್ದು ಸುಳ್ಳಲ್ಲ. ಮೊನ್ನೆಯ ಭೇಟಿಯ ನಂತರದಲ್ಲಿ ಯಾಕೋ ಗಂಗತ್ತೆ ಬಹಳವಾಗಿ ನೆನಪಾಗುತ್ತಿದ್ದಾರೆ. ಅಷ್ಟು ವರ್ಷ ಮನೆಯಿಂದ ದೂರವಿದ್ದ ಅವರಿಗೆ ಕೊನೆಗಾಲಕ್ಕೆ ಮತ್ತೆ ಆ ಮನೆಗೆ ಬರಬೇಕು ಅನಿಸಿದ್ದು ಯಾಕೆ? ಮನೆಯವರು ಒಪ್ಪದಿರುವುದರಿಂದ ಅವರಿಗೆ ಆ ಮನೆಗೆ ಬರುವ ಅವಕಾಶ ದೊರಕಿರಲಿಲ್ಲ. ಆದರೆ ಅವರ ಸಾವು ರಾಮಣ್ಣನನ್ನು ವಿಚಲಿತಗೊಳಿಸಿತೇ? ಸಾವಿನ ಸುದ್ದಿ ತಿಳಿದಿದ್ದೆ ರಾಮಣ್ಣ ಜಾನಕ್ಕ ಅಲ್ಲಿಗೆ ಧಾವಿಸಿದ್ದರಂತೆ.
ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಕಣ್ಣಾಚೆಯ ನೋಟ” ನಿಮ್ಮ ಓದಿಗೆ

Read More

ಮಂಜುನಾಥ್ ಕುಣಿಗಲ್ ಬರೆದ ಈ ಭಾನುವಾರದ ಕತೆ

ಅಮ್ಮನಿಗೆ ವಿಷಯ ತಿಳಿದರೆ ಎದೆಹೊಡೆದು ಕುಸಿದುಬಿದ್ದಾಳು! ಆಕೆ ತನ್ನ ಜೀವನ ಒತ್ತೆಯಿಟ್ಟು ಅದೂ-ಇದೂ ಚಾಕರಿ ಮಾಡುತ್ತಾ ನಮ್ಮನ್ನು ಸಾಕಿದ್ದು. ಆಕೆಗೆ ಏನು ಸುಖ ಕೊಟ್ಟಿದ್ದೆ? ಅದ್ಯಾವುದೋ ನನ್ನ ಕಂಪ್ಯೂಟರ್ ಕೋರ್ಸಿಗೆ ಹನ್ನೆರೆಡು ಸಾವಿರವನ್ನು ಹೊಂಚಲು ಎಲ್ಲೆಲ್ಲೋ ಹೊಟ್ಟೆಬಟ್ಟೆ ಕಟ್ಟಿ ಅದೆಷ್ಟು ಕಷ್ಟಪಟ್ಟಳು? ಆ ದುಡ್ಡನ್ನು ನಾನಿನ್ನೂ ವಾಪಸ್ ಕೊಟ್ಟಿಲ್ಲ! ಹೊಟ್ಟೆಯಲ್ಲಿ ಏನೋ ಕಟ್ಟಿಕೊಂಡ ಸಂಕಟ!
ಮಂಜುನಾಥ್ ಕುಣಿಗಲ್ ಹೊಸ ಕಥಾ ಸಂಕಲನ “ದೂರ ದೇಶದ ದೇವರು” ಕೃತಿಯ ಶೀರ್ಷಿಕೆ ಕತೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ

ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”‌

Read More

ಮಾರುತಿ ಗೋಪಿಕುಂಟೆ ಬರೆದ ಈ ಭಾನುವಾರದ ಕತೆ

ಒಮ್ಮೊಮ್ಮೆ ಕನಸ್ಸಿನಲ್ಲಿ ಬೆಚ್ಚಿಬೀಳ್ತಾ ಇದ್ದ. ನಾರಾಣಿ ಅತ್ತಂತೆ ಕನಸ್ಸು ಬೀಳ್ತಾಇತ್ತು ತಾನು ಅತ್ತಂತಾಗುತ್ತಿತ್ತು. ಲಕ್ಷ್ಮಕ್ಕ ಬಂದು ಕತ್ತಿಸಿಕಿದಂತೆ ಕೆನ್ನೆಗೆ ಹೊಡೆದಂತೆ ಭಾಸವಾಗ್ತಾ ಇತ್ತು. ಅವಾಗೆಲ್ಲಾ ವಿಪರೀತ ಖಿನ್ನನಾಗ್ತಾ ಇದ್ದ. ಮಾದನನ್ನು ನೆನೆದಾಗಲೆಲ್ಲಾ ಚಿಕ್ಕಮಕ್ಕಳಂತೆ ಅತ್ತುಬಿಡುತ್ತಿದ್ದ. ಕರ್ಮಗಳೆಲ್ಲಾ ಹೀಗೆ ಕನಸುಗಳಲ್ಲಿ ಬಂದು ಕಾಡ್ತಾ ಇರ್ತವೆ ನಮ್ಮ ಪಾಪಕರ್ಮಗಳು ಕನಸುಗಳಲ್ಲಿ ಜೀವಂತವಾಗಿರುತ್ತವೆ ಅದಕ್ಕಾಗಿಯೇ. ಅವು ನಮ್ಮನ್ನು ಕಾಡುತ್ತವೆ ಕಾಡಿಸುತ್ತವೆ ನಮ್ಮನ್ನು ಶುಭ್ರಗೊಳಿಸುತ್ತವೆ. ಅದಕ್ಕಾಗಿ ನಾವೇಕೆ ಬೆಚ್ಚಬೇಕು. ಅಚ್ಚಹಸಿರಾಗಬೇಕು ಮನಸು ತಿಳಿಯಾಗಬೇಕು.
ಮಾರುತಿ ಗೋಪಿಕುಂಟೆ ಬರೆದ ಈ ಭಾನುವಾರದ ಕತೆ “ಭಾವ ಬಿತ್ತಿದ ಬೀಜ” ನಿಮ್ಮ ಓದಿಗೆ

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ

‘ಟಿ ಎಸ್ ಎಲಿಯಟ್ ಹೇಳುವ ಪ್ರತಿಭೆ ಮತ್ತು ಪರಂಪರೆ ಅಥವಾ ಪರಂಪರೆ ಮತ್ತು ಪ್ರತಿಬೆ ಒಂದನ್ನೊಂದು ನುಂಗಲು ಹೊರಟಿರುವ ಎರಡು ಹಲ್ಲಿಗಳ ಹಾಗೆ. ಯಾವುದು ತಿನ್ನುತ್ತಿರುವುದು, ಯಾವುದು ಸಾಯುತ್ತಿರುವುದು ಎಂದು ಗೊತ್ತಾಗುವುದಿಲ್ಲ. ಕನ್ನಡದ ದೊಡ್ಡ ಕಥೆಗಾರ್ತಿಯೊಬ್ಬಳು ಸುಳಿಯಲ್ಲಿ ಸಿಲುಕಿ ಮೃತಳಾದ ನದಿಯ ಪಕ್ಕದಲ್ಲೇ ಕುಳಿತು ಕನ್ನಡದ ಎಳೆಯ ಕಥೆಗಾರ ನಚಿಕೇತ ತನ್ನ ಹೊಸ ಕಥೆಗಳನ್ನು ಬರೆಯುತ್ತಿದ್ದಾನೆ.
ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಸುಳಿಹೊಳೆ ಕಥಾಧಾಮ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ