Advertisement

Tag: Kannada Story

ಆಕರ್ಷ ಕಮಲ ಬರೆದ ಈ ಭಾನುವಾರದ ಕತೆ

ಪಜಲ್ ಪೀಸ್‌ಗಳನ್ನು ಕೆಳಕ್ಕಿರಿಸಿ ಕೀಲಿಕೈಗಳ ಗೊಂಚಲನ್ನು ಚರಂಡಿಗೆ ಎಸೆಯಲು ನಿರ್ಧರಿಸಿದ್ದನೇನೋ ಎನ್ನುವಷ್ಟೇ ವೇಗವಾಗಿ ಎಲಿವೇಟರ್‌ಗಳ ಕಡೆಗೆ ಓಡಿದ. ಹದಿಮೂರನೇ ಮಹಡಿಯಿಂದ ಗ್ರೌಂಡ್ ಫ್ಲೋರ್ ಲಾಬಿಗೆ ಬರುವಷ್ಟರಲ್ಲಿ ಕಚೇರಿಯಿಂದ ಹೊರನಡೆಯುವಾಗ ತನ್ನ ಹೆಸರು ನೆನಪಿಲ್ಲದ ಕಾವಲುಗಾರನಿಗೆ ಏನು ಹೇಳಬಹುದು, ಮನಸ್ಸನ್ನು ನೋಯಿಸದೆ ಪೊಲಿಟಿಕಲಿ ಕರೆಕ್ಟ್ ಆಗಿ ಹೇಗೆ ಮಾತನಾಡಬಹುದು ಎಂದೆಲ್ಲ ಯೋಚಿಸಿದ. ಆಕ್ಸೆಸ್ ಕಾರ್ಡ್ ಇಲ್ಲದೆಯೇ ಮತ್ತೆ ಕಚೇರಿಗೆ ಬರಲೇಬೇಕು.
ಆಕರ್ಷ ಕಮಲ ಬರೆದ ಕತೆ “ಆಯತಾಕಾರದ ನೆರಳು” ನಿಮ್ಮ ಈ ಭಾನುವಾರದ ಓದಿಗೆ

Read More

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕಥೆ

ಕಾಣೆಯಾಗಿದ್ದ ಟಿಬೆಟನ್ ಕ್ಯಾಂಪಿನ ಮೂವರು ಹಸುಳೆಗಳು ಇದೇ ಬಿಡಾರದ ಬಾಗಿಲು ತಟ್ಟಿ ಆಹಾರ ಕೋರಿದ್ದರು. ಕುಡಿದು ಬಿದ್ದಿದ್ದ ಈ ಆಸಾಮಿ ಕಣ್ಣೇ ಬಿಟ್ಟಿರಲಿಲ್ಲ. ಆತ ಕಣ್ಣು ಬಿಟ್ಟಾಗ ಆತನ ಮಡದಿ ಅದಾಗಲೇ ಲಾಮಾ ಮಕ್ಕಳ ಬಟ್ಟೆ ಬದಲಾಯಿಸಿ, ಬಿಸಿ ನೀರಲ್ಲಿ ಸ್ನಾನ ಮಾಡಿಸಿ, ಹೊಟ್ಟೆಗೆ ತಿನ್ನಲು ಕೊಟ್ಟು, ಅವರ ಕಾಷಾಯ ವಸ್ತ್ರಗಳನ್ನು ಒಗೆದು ಬಿಸಿಲಿಗೆ ಒಣಗಲು ಹಾಕಿ, ಅವರಿಗೆ ಕಂಬಳಿ ಹೊದೆಸಿ ಬೆಚ್ಚಗೆ ಮಲಗಿಸಿ ಅವರನ್ನು ಕಾದು ಕುಳಿತಿದ್ದಳು.
ಅಬ್ದುಲ್‌ ರಶೀದ್‌ ಬರೆದ ಕಥೆ “ಅಂತಾರಾಷ್ಟ್ರೀಯ ಕುಂಬಳಕಾಯಿ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್ ಕಥೆ

ಈ ದೃಶ್ಯಕ್ಕೆ ಅನತಿ ದೂರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆಯುತ್ತಿದೆ. ಲಚ್ಚಣ್ಣನಿಗೆ ಎರಡು ದಶಕಗಳ ಕಾಲ ಈ ಊರಿನಲ್ಲಿ ಅನ್ನದ ವ್ಯಾಪ್ತಿ ತೋರಿಸಿದ್ದ ದೇವಿ ಪ್ರಸಾದ ಹೋಟೆಲಿನ ವಸ್ತ್ರಾಪಹರಣ ಮಾಡುತ್ತಿರುವಂತೆ ನಾಲ್ವರು ಕೆಲಸಗಾರರು ಅದರ ಮಾಡಿನ ಹಂಚುಗಳನ್ನು ಕಳಚಿ ಇಳಿಸುತ್ತಿದ್ದಾರೆ. ಆ ಹೋಟೆಲನ್ನು ಮೂರು ದಶಕಗಳ ಕಾಲ ನಡೆಸಿದ್ದ ಗೋಪಾಲಕೃಷ್ಣ ಮಂಜಿತ್ತಾಯರು ಕೊನೆಯುಸಿರೆಳೆದ ತಾಯಿಯ ಶವದೆದುರು ಶತಪಥ ಹಾಕುವ ಆಘಾತಗೊಂಡ ಮಗನಂತೆ ಅತ್ತಿಂದಿತ್ತ ಹೋಗುತ್ತಿದ್ದಾರೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಬಿ. ಜನಾರ್ದನ ಭಟ್‌ ಬರೆದ ಕತೆ “ವಿದಾಯ” ನಿಮ್ಮ ಓದಿಗೆ

Read More

ಮುದಿರಾಜ್‌ ಬಾಣದ್ ಬರೆದ ಈ ಭಾನುವಾರದ ಕತೆ

ಬಿದ್ದಿದ್ದ ಜಡೆಗುಂಡು ರಿಬ್ಬನ್‌ ತಗಂಡು ನೀಲೇಶ್‌ ಜೇಬಲ್ಲಿ ಇಟ್ಟಿಕೊಳ್ಳುವದಕ್ಕೂ ಅವನ ತಾಯಿ ಅಲ್ಲಿಗೆ ಬರುವುದಕ್ಕೂ ಸರಿ ಹೋಯಿತು. “ಏನ್‌ ನಿಮ್ಮ ಜಗಳ ಹಾವು ಮುಂಗಸಿ ಆಡಿದಂಗಾ, ಏನಾಯ್ತು? ಹೇ ಮುದುಕ ಅದೇನ್‌ ಚಡ್ಡಿ ಬಕಣದಾಗ ಇಟ್ಟಿಕಂಡಿದ್ದು?” ಅಂತ ಕೇಳಿದಳು. ಅಕ್ಕ ತಮ್ಮ ಇಬ್ಬರೂ ಒಮ್ಮೆ ಮುಖ ಮುಖ ನೋಡಿಕೊಂಡರು. “ಅಮ್ಮ ಅದು ಅದು…” ಅಂತ ರಾಗ ಎಳೆಯುವಷ್ಟರಲ್ಲಿ, “ಲೇ ತಾರ ಅವ ಸಿಕ್ಕನಾ ಬಾರೇ ಜಲ್ದಿ” ಅಂತ ನೀಲೇಶನ ತಂದೆ ಜೋರು ಜೋರಾಗಿ ಕೂಗಿದ.
ಮುದಿರಾಜ್‌ ಬಾಣದ್‌ ಬರೆದ ಈ ಭಾನುವಾರದ ಕಥೆ “ಗಂಡುಮಲಿ” ನಿಮ್ಮ ಓದಿಗೆ

Read More

ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ

ಏನಾಗುತ್ತಿದೆಯೆಂದು ಅವರಿಗೆ ಅರ್ಥವಾಗುವ ಮೊದಲೇ ಬೆಂಕಿ ಅರ್ಧದಷ್ಟು ತೋಟಕ್ಕೆ ವ್ಯಾಪಿಸಿತ್ತು. ಅನಿರೀಕ್ಷಿತವಾಗಿ ಘಟಿಸಿದ ಅನಾಹುತ ಕಂಡು ಮಾತುಹೊರಡದೇ ನಿಂತಿದ್ದ ಅಂಬಿಕಾ ಈಗ ಜೋರಾಗಿ ಕಿರುಚಲಾರಂಭಿಸಿದರು. “ಅಯ್ಯೋ, ಯಾರಾದರೂ ಓಡಿ ಬನ್ನಿ.. ನಮ್ಮನ್ನು ಕಾಪಾಡಿ… ಯಾರಾದರೂ ಬನ್ನಿ, ಬೆಂಕಿ ನಂದಿಸಿ….” ನೆರೆಮನೆಯಿಂದ ಕೇಳಿದ ಆರ್ತನಾದ, ಎತ್ತರದಲ್ಲಿ ಕಾಣುತ್ತಿರುವ ಬೆಂಕಿಯ ಕೆನ್ನಾಲಿಗೆ, ಆಗಿರಬಹುದಾದ ಅನಾಹುತದ ಚಿತ್ರಣವನ್ನು ಶಂಕರಣ್ಣನಿಗೆ ಕಟ್ಟಿಕೊಟ್ಟಿತು.
ಜೆಸ್ಸಿ ಪಿ.ವಿ. ಪುತ್ತೂರು ಬರೆದ ಈ ಭಾನುವಾರದ ಕಥೆ “ಹೊರಗಿನ ಬೆಂಕಿ ಮತ್ತು ಒಳಗಿನ ಕಳೆ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ