Advertisement

Tag: Kannada

ನಾನೂ ವಿದ್ಯುತ್ ತಯಾರಿಸಿದೆ!

ನನಗಿಂತ ದೊಡ್ಡದಾದ ರುಬ್ಬುವ ಕಲ್ಲಿನ ಮುಂದೆ ಕುಳಿತು ಬೆಳಗಿನ ಉಪಾಹಾರಕ್ಕೆ, ಮಧ್ಯಾಹ್ನದ ಭೋಜನಕ್ಕೆ ಮತ್ತೆ ರಾತ್ರಿಯ ಊಟಕ್ಕೆ ರುಬ್ಬುವ ಕೆಲಸ.  ಏಳು-ಎಂಟು ಕೂಲಿಯಾಳುಗಳು ದಿನಾ ಊಟಕ್ಕೆ. ಅಷ್ಟು ಮಾತ್ರವಲ್ಲ ನನ್ನ ತವರಿನ ಕಡೆಯಿಂದ ಬಂದ ಇಬ್ಬರು ಕೆಲಸಗಾರರು ಮನೆಯಲ್ಲೇ ಇರುತ್ತಿದ್ದರು. ಅವರಿಗೆ ರಾತ್ರಿಯೂ ಬೇಯಿಸಿ ಹಾಕುವ ಕೆಲಸ ನನ್ನದಾಗಿತ್ತು. ನೆಂಟರು ಬಂದರೆ ಕೇಳುವುದೇ ಬೇಡ. ಒಟ್ಟಿನಲ್ಲಿ ನನ್ನ ಬದುಕೇ ರುಬ್ಬುವುದರಲ್ಲಿ ಕಳೆದುಹೋಗುತ್ತಿತ್ತು. `ಇದರಿಂದ ನನಗೆ ಬಿಡುಗಡೆ ಯಾವಾಗ? ಎಂದು ಯೋಚಿಸುವಾಗ ವಿದ್ಯುತ್ ತಯಾರಿಸುವ ಯೋಚನೆ ಮನಸ್ಸಿಗೆ ಬಂತು. ಸಹನಾ ಕಾಂತಬೈಲು ಅವರ ‘ಆನೆ ಸಾಕಲು ಹೊರಟವಳು’ ಪುಸ್ತಕದ ಪ್ರಬಂಧ  ಇಲ್ಲಿದೆ. 

Read More

ಕಾವ್ಯಮಾಲೆಯ ಕುಸುಮ: ಯಾಂವ ನನ್ನೆ ಕೇಳಾಂವ?

“ತೊಟ್ಟಿಲ ಕೂಸು ಆಡತಿರಲಿ
ತಾಯಿ ಜೋಗುಳ ಹಾಡತಿರಲಿ
ಹಕ್ಕಿದನಿಗೆ ದನಿಗೂಡಿಸಿದರು
ನಾಯಾಕ ನನ್ಹಾಡ ಹಾಡಲಿ?
ಯಾಂವ ನನ್ನ ಕೇಳಾಂವ! ॥೨॥”- ಕಾವ್ಯಮಾಲೆಯ ಕುಸುಮಯಲ್ಲಿ ಅರ್ಚಿಕ ವೆಂಕಟೇಶರು ಬರೆದ ಕವಿತೆ “ಯಾಂವ ನನ್ನೆ ಕೇಳಾಂವ?”

Read More

ಸಂತೋಷ ಪಡುತ್ತಾ ಕಲಿಯುವುದೂ ಸಾಧ್ಯ

ಬೇಸಿಗೆ ರಜೆಯ  ಕುರಿತು ಅನೇಕ ಅಭಿಪ್ರಾಯಗಳಿವೆ.  ವರ್ಷ ಪೂರ್ತಿ ಬಿಡುವಿಲ್ಲದೇ ಪಾಠ ಪ್ರವಚನಗಳು ನಡೆದು, ಕೊನೆಗೆ ಪರೀಕ್ಷೆಗಳು ಬರುತ್ತವೆ, ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಲಿಸಿದರೆ ಮಾತ್ರ ಮಗು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತದೆ. ಅದೇನೇ ಇರಲಿ, ರಜೆಯ ಖುಷಿಯೇ ಶಾಲೆಯೊಳಗೇಕೆ ಬರಬಾರದು ಎಂದು ಅಚ್ಚರಿಪಡುತ್ತಾರೆ ಅರವಿಂದ ಕುಡ್ಲ. ಗಣಿತ ಮೇಷ್ಟರ ಶಾಲಾ ಡೈರಿಯಲ್ಲಿ ಹೊಸ ಬರಹ  ಇಲ್ಲಿದೆ. 

Read More

ಯುದ್ಧವು ರಸ್ತೆಬದಿಯಲ್ಲಿ ಮಲಗಿದೆ

ಲ್ಯಾಟ್ವಿಯಾ ದೇಶದ ಕವಿ ಅಮಾಂಡ ಐಜಪ್ಯುರಿಯೆತ್ರ, ಪತ್ರಿಕೆಗಳ ಸಾಹಿತ್ಯ ವಿಭಾಗದ ಸಂಪಾದಕರಾಗಿದ್ದರು. ಬಹಿಷ್ಕೃತರೆಂದು ಪರಿಗಣಿಸಲ್ಪಟ್ಟ ಅನೇಕ ಕವಿಗಳ ಕವನಗಳನ್ನು ಪ್ರಕಟಿಸಿದರು. ಅನಾಗರಿಕ ಜಗತ್ತಿನಲ್ಲಿ ಆವಾಗಾವಾಗ ಕಾಣುವ ಅಲ್ಪ ಸೌಂದರ್ಯವನ್ನು ಗುರುತಿಸಿ ತಾವೂ ಕವನಗಳನ್ನು ಬರೆದಿದ್ದಾರೆ. ಅವರ ಕವನಗಳಲ್ಲಿ ಕಾವ್ಯವಿಷಯದ ವಿಸ್ತಾರವಿದೆ. ಕಾವ್ಯಸೃಷ್ಟಿ, ಸ್ವ-ಮನನ, ಯುದ್ದದ ಭೀತಿ, ದಬ್ಬಾಳಿಕೆಯ ಆಡಳಿತದಡಿಯಲ್ಲಿನ ಬದುಕಿನ ಕುರಿತ ಪ್ರತಿಬಿಂಬಗಳಿವೆ. ಅವರ ಕವಿತೆಗಳು ಇಂ‍ಗ್ಲಿಷ್ ಗೆ ಅನುವಾದಗೊಂಡಿದ್ದು,  ಇಂಗ್ಲಿಷ್‍ ಮೂಲದಿಂದ ಎಸ್‍. ಜಯಶ್ರೀನಿವಾಸ ರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.  

Read More

“ಕಾನನ ಜನಾರ್ದನ” ಕಾದಂಬರಿಯ ಒಂದೆರಡು ಪುಟಗಳು

ಹತ್ತು ದಿನಗಳಿಂದ ಅವರು ಹೆಚ್ಚು ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಕಲೆಹಾಕಿ ನಮ್ಮದೇ ರೀತಿಯಲ್ಲಿ ಅವಲೋಕಿಸುತ್ತಿದ್ದೆವು. ನಮಗೆ ಇಬ್ಬರು ಮಾತ್ರವೆ ಕೆ. ನಾಗಯ್ಯ ಅವರ ಈಗಿನ ಸ್ಥಿತಿಗೆ ಸಂಬಂಧ ಹೊಂದಿರಲು ಸಾಧ್ಯ ಎಂಬ ಸಂಶಯ ಮೂಡಿತು. ಇಬ್ಬರೂ ಕೂಡ ಇತ್ತೀಚೆಗೆ ಅವರು ತೊಡಗಿಸಿಕೊಂಡಿದ್ದ ಚಟುವಟಿಕೆಗೆ ಸಂಬಂಧ ಪಟ್ಟವರು: ಒಬ್ಬರು ನಾಗಯ್ಯ ಇತ್ತೀಚೆಗೆ ಬರೆದ ಕಾದಂಬರಿಯ ಪ್ರಕಾಶಕರು.
ಡಾ. ಕೆ. ಎನ್. ಗಣೇಶಯ್ಯ ಬರೆದ “ಕಾನನ ಜನಾರ್ದನ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ