Advertisement

Tag: Kavya Kadame

“ಮಿಥ್ಯಸುಖ”: ಕಾವ್ಯಾ ಕಡಮೆ ಹೊಸ ಕಾದಂಬರಿಯ ಆಯ್ದ ಭಾಗ

ಖಾಲಿ ಡಬರಿಯಲ್ಲಿ ಕಲ್ಲು ಗಲಗಲಿಸಿದಂತೆ ವಟವಟ ಎನ್ನುವ, ಹೊಕ್ಕಿದ ಕೋಣೆಯಲ್ಲೆಲ್ಲ ಹೀರೋ ಆಗುವ ಶತಪ್ರಯತ್ನ ನಡೆಸುತ್ತಲೇ ಒದ್ದಾಡುವ ಗಂಡಸರಿಂದ ನಾನು ಎಂದಿಗೂ ದೂರವೇ ಸರಿದಿದ್ದೇನೆ. ನಿಮಗೆ ನನ್ನ ಮೇಲೆ ಪ್ರಭಾವ ಬೀರುವುದಿದೆಯೇ? ಹಾಗಿದ್ದರೆ ದಯವಿಟ್ಟು ಮಾತು ನಿಲ್ಲಿಸಿ. ಪ್ರಪಂಚದಲ್ಲಿ ಹೇಳಲೇ ಬೇಕಿರೋದನ್ನೆಲ್ಲ ಶಬ್ದಗಳಿಲ್ಲದೇ ಸಂವಹಿಸಬಹುದು ಎಂಬುದನ್ನು ಮನಸಾ ಪಾಲಿಸಿದ್ದೇನೆ. ಸುಹಾಸನ ಬಳಿ ಮೊದಲ ಸಲ ಫೋನಿನಲ್ಲಿ ಮಾತನಾಡಿದಾಗ ಅವನು ಇಂಟರ್‌ವ್ಯೂಗೆ ತಯಾರಿ ಮಾಡಿಕೊಂಡು ಬಂದವನ ಹಾಗೆ ಒಂದು ಕ್ಷಣವನ್ನೂ ಬಿಡದೇ ತನ್ನ ಬದುಕಿನ ಎಲ್ಲ ಮೈಲುಗಲ್ಲುಗಳ ಪ್ರವರ ಒಪ್ಪಿಸಿದ್ದ.
ಕಾವ್ಯಾ ಕಡಮೆ ಹೊಸ ಕಾದಂಬರಿ “ಮಿಥ್ಯಸುಖ” ಇದೇ ಶನಿವಾರ ಬಿಡುಗಡೆಯಾಗಲಿದ್ದು, ಈ ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಆಧುನಿಕ ವಿಕಾರಕ್ಕೊಂದು ಕನ್ನಡಿ: ಕಾವ್ಯಾ ಕಡಮೆ ಕಥಾ ಸಂಕಲನಕ್ಕೆ ಶ್ರೀಧರ ಬಳಗಾರ ಮುನ್ನುಡಿ

ತೊಟ್ಟು ಕ್ರಾಂತಿ ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನ ಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.
ಕಾವ್ಯಾ ಕಡಮೆ ಕಥಾ ಸಂಕಲನ “ತೊಟ್ಟು ಕ್ರಾಂತಿ”ಗೆ ಕತೆಗಾರ ಶ್ರೀಧರ ಬಳಗಾರ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ಬರವಣಿಗೆ ಎಂಬ ಅಫೀಮು

ಎಲ್ಲರಿಗೂ ಸಮನಾಗಿ ಸಿಗುವ ಇಪ್ಪತ್ನಾಲ್ಕೇ ಘಂಟೆಗಳನ್ನು ಇವರೆಲ್ಲ ತಡೆದು ನಿಲ್ಲಿಸಿದರು ಹೇಗೆ? ಜೀವನಕ್ಕೆ ಬೇಕಾದ ಹಣ ಸಂಪಾದಿಸಿದರು ಹೇಗೆ? ಮನೆಯನ್ನು ತೂಗಿಸಿದರು ಹೇಗೆ? ಅರೆ ಹೊಟ್ಟೆ ಉಂಡೇ ಎಷ್ಟು ರಾತ್ರಿ ಕಳೆದರು? ಅಷ್ಟಾಗಿಯೂ ಒಂದೊಳ್ಳೆಯ ಪುಟ ಬರೆದ ಮೇಲೆ ಅವರ ತುಟಿಯ ಮೇಲೆ ಮೂಡಿದ ಮುಗುಳೆಂಥದು? ಅಪಹಾಸ್ಯಕ್ಕೊಳಗಾದರೇ? ಪ್ರೀತಿಸುವವರಿಂದ ದೂರವಾದರೇ? ಅವರು ತಮ್ಮ ಬರವಣಿಗೆಗಾಗಿ ತೆತ್ತ ಬೆಲೆಯೆಂಥದು? ಕಲೆಯಿಂದ ಸಿಗುವ ಸುಖ ಈ ಎಲ್ಲವನ್ನೂ ಮೀರಿದ್ದೇ?

Read More

ಜಿಂಕೆಗಳು ಕೊಲೆ ಮಾಡಬಲ್ಲವೇ?

ಪೊಲೀಸರು ಊರಿನ ಎಲ್ಲರ ಜೊತೆಗೆ ಯನೀನಾಳನ್ನೂ ವಿಚಾರಣೆಗೆ ಒಳಪಡಿಸುತ್ತಾರೆ. ಯಾರ ಬಳಿಯೂ ಇರದ ಉತ್ತರಗಳು ಯನೀನಾಳ ಬಳಿ ದೊರೆಯುತ್ತವೆ. ಬಿಗ್ ಫೂಟ್ ಅಲ್ಲದೇ ಇತರರ ಕೊಲೆಯಾದ ಸ್ಥಳಗಳಲ್ಲಿಯೂ ಬೇರೆ ಬೇರೆ ತರಹದ ಪ್ರಾಣಿಗಳ ಹೆಜ್ಜೆ ಗುರುತುಗಳು ಕಂಡಿರುತ್ತವೆ. ನಾವೇ ಸಾಧು ಪ್ರಾಣಿಗಳ ಒಳಗಿನ ಕ್ರೌರ್ಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲವೇನೋ, ಈ ಎಲ್ಲ ಸಾಧು ಪ್ರಾಣಿಗಳೇ ಒಂದಾಗಿ ಊರಿನ ಜನರನ್ನು ಸಾಯಿಸುತ್ತಿರಬಹುದು ಎಂಬ ವಾದವನ್ನು ಒಪ್ಪಿಸುವ ಯನೀನಾ ಪೊಲೀಸರ ಕುಹಕಕ್ಕೆ ಗುರಿಯಾಗುತ್ತಾಳೆ.
‘ಕಾವ್ಯಾ ಓದಿದ ಹೊತ್ತಿಗೆ’ ಅಂಕಣದಲ್ಲಿ…

Read More

ಅಪರಾಧಕ್ಕೆ ತಕ್ಕ ಶಿಕ್ಷೆ ಅಂದರೇನರ್ಥ?

ಬಿಸಿಲು, ಉಪವಾಸ, ಸುತ್ತಲಿನ ಕೊಳಕು, ದೊಡ್ಡವರ ಸಣ್ಣತನ… ಮುಂತಾದವುಗಳಿಂದ ಅವನು ಬೇಸತ್ತಿದ್ದಾನೆ. ಇವನ ಒಳಿತು ಮತ್ತು ಭವಿಷ್ಯಕ್ಕಾಗಿ ತಂಗಿ ದುನ್ಯಾ ಸಿರಿವಂತನಾದ ಲೂಷನ್‍ನನ್ನು ಇಷ್ಟವಿಲ್ಲದಿದ್ದರೂ ವರಿಸಲು ಸಿದ್ಧವಾಗಿರುವ ವಿಷಯ ಈಗಷ್ಟೇ ಅವನಿಗೆ ತಾಯಿಯ ಪತ್ರದಿಂದ ತಿಳಿದಿದೆ. ಏನನ್ನಾದರೂ ಗಂಭೀರವಾಗಿ ಯೋಚಿಸುವಾಗ ಕೈಕಟ್ಟಿ ಅತ್ತಿಂದಿತ್ತ ಸರಸರನೆ ಓಡಾಡುವ ತಂಗಿಯ ಚಿತ್ರ ಅವನ ಕಣ್ಣ ಮುಂದಿದೆ.
ಕಾವ್ಯಾ ಓದಿದ ಹೊತ್ತಿಗೆ ಅಂಕಣದಲ್ಲಿ ಫ್ಯದೊರ್ ದಾಸ್ತಯೇವ್ಸ್ಕಿಯ ಪ್ರಸಿದ್ಧ ಕಾದಂಬರಿ “ಕ್ರೈಂ ಅಂಡ್‌ ಪನಿಷ್ಮೆಂಟ್‌” ಕುರಿತು ಬರೆದಿದ್ದಾರೆ ಕಾವ್ಯಾ ಕಡಮೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ