Advertisement

Tag: Keerthi Baindur

ಕನಸು, ಕನವರಿಕೆ: ಜುಲೇಖಾ ಬೇಗಂ ಜೀವನ ವೃತ್ತಾಂತ

ನಾನು ಬಹುವಾಗಿ ಇಷ್ಟಪಡುತ್ತಿದ್ದ ಜುಬೇದಾಬಾಯಿ, ನನ್ನನ್ನು ಕಂಡೊಡನೆ ‘ಎಷ್ಟು ಕ್ಯೂಟ್ ಅಯ್ತಲ್ಲ ಈ ಹುಡ್ಗಿ!’ ಎಂದು ಕೆನ್ನೆಗಿಂಡಿ, ಮುತ್ತಿಟ್ಟರು. ಕಳೆದುಹೋದೆ; ಆಕಾಶಕ್ಕೇರಿಬಿಟ್ಟೆ. ಆವತ್ತಿಡೀ ಕೆಳಗಿಳಿದಿದ್ದರೆ ಕೇಳಿ. ಹೇಮರೆಡ್ಡಿ ಮಲ್ಲಮ್ಮ ನಾಟಕವೆಂದರೆ ನನಗೂ ಉತ್ಸಾಹ ಹೆಚ್ಚಿರುತ್ತಿತ್ತು. ಏಕೆಂದರೆ ಅದೊಂದೇ ನಾಟಕದಲ್ಲಿ ನನಗೆ ವೇದಿಕೆಯೇರುವ ಅವಕಾಶ ಸಿಗುತ್ತಿದ್ದದ್ದು. ಮದುವೆ, ಉಡಿ ತುಂಬುವ ಗುಂಪು ದೃಶ್ಯಗಳಲ್ಲಿ ನಾನೂ ಇರುತ್ತಿದ್ದೆ. ಗುಂಪೋ ಪ್ರತ್ಯೇಕವೋ, ಜನ ನನ್ನ ನೋಡಿ ಗುರುತಿಸುತ್ತಾರೋ ಇಲ್ಲವೋ, ನನಗೆ ಇವೆಲ್ಲವೂ ಗೌಣ.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹನ್ನೊಂದನೆಯ ಕಂತು

Read More

ಅಭಿಮಾನಿಗಳ ಆಯರಿಯೂ, ಅಮ್ಮ ಹಾಕುತ್ತಿದ್ದ ಬರೆಗಳೂ….: ಜುಲೇಖಾ ಬೇಗಂ ಜೀವನ ವೃತ್ತಾಂತ

ಒಂದೊಂದು ಪ್ರಯೋಗದಲ್ಲೂ ಲೋಹಿತಾಶ್ವನ ಪಾತ್ರವನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೆಚ್ಚುಮಾಡಿಕೊಳ್ಳುತ್ತಿದ್ದೆ. ಜನರೆಲ್ಲ ಮನೆಗೆ ಬರಲು ಶುರುವಿಟ್ಟರು. ಭಾಗಮ್ಮನವರು ಇಂತಹದಕ್ಕೆಲ್ಲ ಸೊಪ್ಪೇ ಹಾಕುತ್ತಿರಲಿಲ್ಲ. ಎಂಟು ವರ್ಷ ಮೀರಿದಂತೆ ದೇಹ ಬದಲಾವಣೆಯಾಗುತ್ತಿತ್ತು. ನನ್ನ ಮುಖ, ಗಲ್ಲ, ಎದೆ, ಕೈ ತೋಳುಗಳು, ಇಡೀ ದೇಹವೇ ಅಗಲಿಸುತ್ತಿದ್ದ ವಯಸ್ಸು. ಅದಕ್ಕಾಗೋ ಅಥವಾ ಅಸೂಯೆಯಿಂದಲೋ ನಾನ್ಯಾರ ಬಳಿಯಾದರೂ ಮಾತಿಗೆಂದು ನಿಂತರೂ ಬೈದು, ಹೊಡೆದು ರಾದ್ಧಾಂತ ಮಾಡುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಎಂಟನೆಯ ಕಂತು

Read More

ಛಡಿ ಚಂ ಚಂ….: ಜುಲೇಖಾ ಬೇಗಂ ಜೀವನ ವೃತ್ತಾಂತ

ಗಂಟಲಿನಿಂದ ಅದೆಷ್ಟೇ ಉಸಿರೆಳೆದರೂ, ನಾಲಗೆಯನ್ನು ಹೊರಳಿಸಿ ಉರುಳಿಸಿದರೂ ಊಹೂಂ, ಹಾಲು ಹಣ್ಣು ಬರಲೊಲ್ಲದು. ಅವರೂ ಹಿಡಿದ ಪಟ್ಟು ಬಿಡುವಂತೆ ಕಾಣಲಿಲ್ಲ. ಪಕ್ಕದಲ್ಲಿ ಪುಂಡಿ ಸೊಪ್ಪನ್ನು ಬಿಡಿಸಿಟ್ಟಿದ್ದರು. ಆ ಪುಂಡಿ ಕೋಲು ದಪ್ಪವಾಗಿರುತ್ತದೆ. ಮುಂದೇನು ಆಗಿರಬಹುದು ಹೇಳಿ? ಅನುಮಾನವೇ ಬೇಡ, ಬೆನ್ನಿಗೆ ಎರಡೇಟು ಬಾರಿಸಿದರು. ಚುರ್ ಎಂದು ಬಿದ್ದ ಏಟಿಗೆ ಕಣ್ಣಲ್ಲಿ ನೀರು ಜಿನುಗಿಸಿತು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಏಳನೆಯ ಕಂತು

Read More

ಹೊಸ ಬದುಕಿಗೆ ಬಿದ್ದ ಬುನಾದಿ: ಜುಲೇಖಾ ಬೇಗಂ ಜೀವನ ವೃತ್ತಾಂತ

ಬಿಡುವಿದ್ದಾಗೆಲ್ಲ ಅವರ ಮನೆಗೆ ಹೋಗುವುದು ಸಾಮಾನ್ಯವಾಯಿತು. ಸುಮ್ಮನಿರುವ ಗೆಜ್ಜೆ ನನ್ನ ಮನಸ್ಸಲ್ಲೇನೊ ಸದ್ದು ಮಾಡಿದರಂತೆ. ‘ನಾನೂ ಗೆಜ್ಜೆ ಕಟ್ಬೇಕು. ಕಟ್ರಿ’ ಎಂದು ಅಲವತ್ತುಕೊಂಡೆ. ‘ಹಾಗೆಲ್ಲ ಕಟ್ಬಾರ್ದವ್ವಾ, ದೇವ್ರಿಗೆ ಪೂಜೆ ಮಾಡಿ ಕಟ್ಟೋದು ಗೊತ್ತೇನು?’ ಎಂದು ಸುಮ್ಮನಿರಿಸಲು ನೋಡಿದರು. ಬಿಡುವವಳಲ್ಲ ನಾನು, ‘ಹಾಂ, ನಾನೂ ಪೂಜೆ ಮಾಡ್ತೇನಿ. ಕಟ್ರಲಾ’ ಎನ್ನುತ್ತಿದ್ದೆ. ನನ್ನ ಚಾಲಾಕಿತನ ಕಂಡು ನಕ್ಕು, ತಲೆ ಬಡಿದುಕೊಂಡು, ‘ನಿಮ್ಮವ್ವ ಬಿಟ್ಟಾಳ ನಮ್ಮನ್ನ, ಕಸಬರಿಕಿ ತಗೊಂಡು ಓಡ್ಸ್ಕೋತಾ ಬರ್ತಾರ’ ಎಂದು ತಮಾಷೆ ಮಾಡಿಬಿಡುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

Read More

ಹಿರಿಯ ರಂಗನಟಿ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಂದಿನಿಂದ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ