Advertisement

Tag: Kendasamapige

ಸುಂದರ ಕಾಡಿನ ರೋ‌ಚಕ ಕಥೆಗಳು-೨: ರೂಪಾ ರವೀಂದ್ರ ಜೋಷಿ ಸರಣಿ

ಶಾಲೆಗೆ ಹೋಗುವಾಗ, ಹಲವೆಡೆ ನಾವು ಇಂಥ ನಯನ ಮನೋಹರ “ಹೂ ರಥ” ನೋಡುತ್ತ ಹೋಗುತ್ತಿದ್ದೆವು. ಈಗಲೂ ಆ ಸುಂದರ ದೃಶ್ಯ ನನ್ನ ಕಣ್ಣಿಗೆ ಕಟ್ಟಿದಂತಿದೆ. ಹಾಗೇ ಇನ್ನೊಂದು ಚಂದದ ಹೂ ಅಂದರೆ, ಚದುರಂಗಿ. ಇದು ತೀರಾ ಪುಟಾಣಿ ಹೂಗಳ ಗೊಂಚಲು. ನಕ್ಷತ್ರದ ಆಕಾರದ ಗಾಢ ಕೇಸರಿ, ಕೆಂಪು ಹೂಗಳ ಚದುರಂಗಿ ಪೊದೆಯಾಗಿ ಬೆಳೆಯುವ ಸಸ್ಯ. ಇದರ ಸಪೂರ ಕಾಂಡಕ್ಕೆ ಸೂಕ್ಷ್ಮ ಮುಳ್ಳುಗಳಿರುತ್ತವೆ. ಇದರ ಹೂ ನೋಡಲು ಬಹಳ ಚಂದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೊಂದನೆಯ ಕಂತು

Read More

ಚಿತ್ರಹಿಂಸೆ ಮತ್ತು ಹೆಡ್ ಕುಕ್: ಸುಮಾವೀಣಾ ಸರಣಿ

ಸೀನರಿ ಅಂದರೆ ನಮ್ಮ ಚಿತ್ರವನ್ನು ಇನ್ನೊಮ್ಮೆ ನೋಡುವ ಸೀನ್ ಇರುತ್ತಲೇ ಇರಲಿಲ್ಲ. ಅದೇ ಸೊರಗಿದ ಮರಗಿಡಬಳ್ಳಿ, ಕೊರಕಲು ನದಿ, ಒಂಟಿ ಕಿಟಕಿಯ ಮನೆ, ರೆಕ್ಕೆ ಸುಟ್ಟಂಥ ಹಕ್ಕಿ, ಸೊಟ್ಟ ರಸ್ತೆ ಹೀಗೆ ಒಂದೇ ಎರಡೇ…. ಸ್ಪುರದ್ರೂಪಿ ಮನುಷ್ಯ ಎಂದೂ ನಮ್ಮಿಂದ ರೂಪುಗೊಳ್ಳಲೇ ಇಲ್ಲ ಬಿಡಿ…. ಅಂತೂ ಚಿತ್ರ -ವಿಚಿತ್ರ ಚಿತ್ರಗಳನ್ನು ಬಿಡಿಸುತ್ತಲೇ ಇದ್ದ ನಮಗೆ ಅನಿವಾರ್ಯವಾಗುತ್ತಿದ್ದುದು ಸೈನ್ಸಿನ ಗಿಡದ ಚಿತ್ರಬಿಡಿಸಿ ಭಾಗಗಳನ್ನು ಗುರುತಿಸಿ ಮತ್ತು ಸೋಷಿಯಲ್ ಸೈನ್ಸಿನ ಭಾರತ ಭೂಪಟ ಬಿಡಿಸಿ ಸ್ಥಳ ಗುರುತಿಸಿ ಎನ್ನುವ ಪ್ರಶ್ನೆ. ಸೈನ್ಸಿನ ಪ್ರಶ್ನೆಯನ್ನು ಎದುರಿಸಿ ಮಾರ್ಕ್ಸ್ ತೆಗೆಯುತ್ತಿದ್ದೆವಾದರೂ ಬೇರು, ಕಾಂಡ, ಎಲೆಗಳು ಕೆಂಪು ಇಂಕಿನಲ್ಲಿ ತಿದ್ದುಪಡಿಯಾಗುತ್ತಿದ್ದವು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೇಳನೆಯ ಬರಹ ನಿಮ್ಮ ಓದಿಗೆ

Read More

ಸ್ಪಿನ್ ಮಾಂತ್ರಿಕ ಬಿಷನ್ ಸಿಂಘ್ ಬೇಡಿ: ಇ.ಆರ್. ರಾಮಚಂದ್ರನ್ ಅಂಕಣ

ಬೇಡಿಯವರ ಬೋಲಿಂಗ್‌ನಲ್ಲಿ ಬ್ಯಾಟ್ಸ್‌ಮನ್‌ರನ್ನು ಕಟ್ಟಿಹಾಕುವ ಸಾಮರ್ಥ್ಯವಿತ್ತು. ಬ್ಯಾಟ್ಸ್‌ಮನ್‌ನ ಹಿಂದೆ ಮುಂದೆ ಓಡಾಡುವ ಹಾಗೆ ಮಾಡಿ ಕೊನೆಗೆ ಅವನು ಬೋಲ್ಡ್ ಆಗುವ ಹಾಗೆ, ಅಥವ, ಎಲ್.ಬಿ. ಆಗುವ ಹಾಗೆ ಮಾಡುತ್ತಿದ್ದರು, ಅವರ ಬೋಲಿಂಗ್ ಅರ್ಥವಾಗದೆ ವಿಕೆಟ್ ಹತ್ತಿರ ಕ್ಯಾಚ್ ಕೊಟ್ಟು ಔಟಾದವರೇ ಜಾಸ್ತಿ. ಏಕನಾಥ್ ಸೋಲ್ಕರ್, ವೆಂಕಟರಾಘವನ್, ಅಜಿತ್ ವಾಡೇಕರ್ ಬ್ಯಾಟ್ ಹತ್ತಿರ ಸಿಲ್ಲಿ ಮಿಡಾನ್, ಗಲ್ಲಿ, ಸ್ಲಿಪ್‌ನಲ್ಲಿ ಕ್ಯಾಚ್‌ಗಳನ್ನು ಹಿಡಿದು ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುತ್ತಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ