Advertisement

Tag: kendasampige

ಪ್ರಪಂಚದಷ್ಟೇ ಪುರಾತನವಾದ ಪ್ರಶ್ನೆಗಳಿಗೆ ಉತ್ತರದ ಹುಡುಕಾಟ: ಸುಧಾ ಆಡುಕಳ ಮಾತುಗಳು

ಅನೇಕ ದಶಕಗಳ ಹಿಂದೆ ಹೀಗೆ ಬಿಸಿಲಲ್ಲಿ ಕುಳಿತು ಮಾತನಾಡಿದ ಬಸುರಿಯರ ಮಕ್ಕಳೀಗ ಸಮಾಜವೆಂಬ ಇರುವೆ ಸಾಲಿನ ಭಾಗವಾಗಿಯೂ, ತಮ್ಮದೇ ಸ್ವಾತಂತ್ರ್ಯದ ಹಾದಿಯನ್ನು ಹುಡುಕಿಕೊಂಡು, ತಾವಿರುವೆಡೆಯಲ್ಲೆಲ್ಲಾ ಪ್ರೀತಿಯ ಧಾರೆಯನ್ನೇ ಹಂಚುತ್ತಾ ಸಾಗಿದ್ದಾರೆ. ಒಡಲೊಳಗೆ ಮಗುವನ್ನು ಹೊತ್ತ ತಾಯಂದಿರ ಬೇಗೆ ಮಾತ್ರ ಎಷ್ಟೇ ಕಾಲ ಸರಿದರೂ ಹೀಗೆಯೇ ಮುಂದುವರೆಯುವುದೇನೋ ಎಂದು ಅನಿಸುತ್ತಲೇ ಇರುತ್ತದೆ. ಹಾಗೆ ನನ್ನ ಮಗುವಿಗೆ ನಾನೇನಾದರೂ ಕಥೆಯನ್ನು ಹೇಳುವಂತಿದ್ದರೆ ಮೇಲೆ ಬರೆದ ಕಥೆಯನ್ನು ಹೇಳುತ್ತಿದ್ದೆ ಮತ್ತು ಕೊನೆಯಲ್ಲಿ ಅವಳಂತೆಯೇ ಒಂದು ವಾಕ್ಯವನ್ನು ಸೇರಿಸುತ್ತಿದ್ದೆ, ಆ ಇಬ್ಬರಲ್ಲಿ ನಾನೂ ಒಬ್ಬಳಾಗಿದ್ದೆ ಎಂದು.
ಸುಧಾ ಆಡುಕಳ ಅನುವಾದಿಸಿದ ಒರಿಯಾನ ಫಲಾಚಿ ಕಾದಂಬರಿ “ಎಂದೂ ಹುಟ್ಟದ ಮಗುವಿಗೆ ಪತ್ರ”ಕ್ಕೆ ಬರೆದ ಅವರ ಮಾತುಗಳು ಇಲ್ಲಿವೆ

Read More

ವಿಶ್ವ ಕಪ್ 2023ನ ಕೊನೆಯ ಹಂತ: ಇ.ಆರ್. ರಾಮಚಂದ್ರನ್ ಅಂಕಣ

ಭಾರತದ ಇನಿಂಗ್ಸ್ ಚೆನ್ನಾಗಿಯೇ ಶುರುವಾಯಿತು. ಎಂದಿನಂತೆ ರೋಹಿತ್ ಶರ್ಮ ರಭಸದ ಹೊಡೆತದಿಂದ ಶುರು ಮಾಡಿದರು. ಒಂದು ಸಿಕ್ಸರ್ ಮತ್ತು ಬೌಂಡರಿ ಹೊಡೆದ ಮೇಲೆ ಮತ್ತೆ ಸಿಕ್ಸರ್ ಹೊಡೆಯಲು ಯತ್ನಿಸಿದಾಗ ಬಾಲ್ ಸ್ವಲ್ಪ ಸ್ಪಿನ್ ಆದ ಕಾರಣ ಅದು ಬೌಂಡರಿಗೆ ಹೋಗಲಿಲ್ಲ. ಅದನ್ನು ಬೆನ್ನಟ್ಟಿಕೊಂಡು ಹೋದ ಟ್ರಾವಿಸ್ ಹೆಡ್ ಅತ್ಯಂತ ಕಠಿಣವಾದ ಕ್ಯಾಚನ್ನು ಕೆಳಗೆ ಬೀಳುತ್ತಲೇ ಹಿಡಿದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಸೈಕ್ಲೋನ್ ಮತ್ತು ಮುತ್ತಿನ ಹಾರ: ಸುಮಾವೀಣಾ ಸರಣಿ

ಅಂದು ಎಲ್ಲರಿಗೂ ಆಶ್ಚರ್ಯ, “ಸಿಸ್ಟರ್ ಎಷ್ಟು ಫ್ರೀಯಾಗಿದ್ದಾರೆ, ಒಳ್ಳೆ ಮೂಡಿನಲ್ಲಿದ್ದಾರೆ!” ಎಂದು. ಪಾಠ ಓದಿಸಿದರು… ತಪ್ಪು ಓದಿದರೂ ಅಷ್ಟೇನೂ ದಂಡಿಸಲಿಲ್ಲ. ಕಡೆಗೆ “ನಿನ್ನೆ ಫಿಲ್ಮ್ ತುಂಬಾ ಚಂದ ಇತ್ತಲ್ವ” ಎಂದರು. ಎಲ್ಲರೂ ಮರೆತು “ಹೌದು! ಹೌದು1” ಹಾಗೆ ಹೀಗೆ ಎಂಬ ಡಿಸ್ಕಶನ್ ಶುರುಮಾಡಿದರು. ಅದರ ಮುಂದಿನ ಪ್ರಶ್ನೆ “ಯಾರು ಯಾರು ನೋಡಿದ್ದೀರ?” ಎನ್ನುವುದಾಗಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ನಗುತ್ತಲೆ ಬದುಕಿದವಳು ನನ್ನಮ್ಮ: ಮಾರುತಿ ಗೋಪಿಕುಂಟೆ ಸರಣಿ

ನನಗಾಗ ಐದಾರು ವರ್ಷಗಳಿರಬೇಕು. ಪ್ರತಿದಿನ ಅಮ್ಮ ಕೂಲಿ ಹೋಗುತ್ತಿದ್ದಳು. ಅವಳಿಗೆ ಬರುವ ಅಲ್ಪ ಕೂಲಿಯಲ್ಲಿ ಇಡಿ ಬದುಕನ್ನು ನಡೆಸಬೇಕು. ಅದರಲ್ಲಿ ಬೆಳಗಿನ ಚಹಾದಿಂದ ಹಿಡಿದು ರಾತ್ರಿಯ ಊಟದವರೆಗೂ ಕೂಲಿಯ ಹಣದಿಂದಲೆ ಸರಿದೂಗಿಸಬೇಕು. ಅಕ್ಷರ ಜ್ಞಾನವಿಲ್ಲದ ಆಕೆ ಹೇಗೆ ನಿಭಾಯಿಸುತ್ತಿದ್ದಳೊ. ಇಂದಿಗೂ ಅದೊಂದು ಆಶ್ಚರ್ಯದ ಸಂಗತಿ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಆರ್ಯಕನೆಂಬ ನಾಯಕ: ಸತೀಶ್‌ ತಿಪಟೂರು ಬರಹ

ನಾವು ಮಾಡುವ ರಂಗಕೃಷಿಯು ಪ್ರಾಮಾಣಿಕವಾಗಿದ್ದರೆ ಪ್ರತಿಕ್ಷಣವೂ ಹುಟ್ಟುವ ಅಹಂಕಾರವನ್ನು ವಿಸರ್ಜಿಸುತ್ತಲೇ ಇರುತ್ತದೆ ಎಂದು ಹೇಳಿದೆ. ಯಾರ ಸ್ಮೃತಿಗಳು ಸಮಾಜದ ನೋವಿನಿಂದ ಅದ್ದುಕೊಂಡಿರುತ್ತದೋ, ಸಮುದಾಯದ ಕಾಳಜಿಗಳಲ್ಲಿ ಬೆಸೆದುಕೊಂಡಿರುತ್ತದೋ, ಅಂತಹ ಪ್ರಕೃತಿಗಳು ಹಣ, ಅಧಿಕಾರ, ಪ್ರಭಾವಳಿಗಳಿಂದ ಒದಗಿಬರಬಹುದಾದ ಅಹಂಕಾರದಿಂದ ಮುಕ್ತವಾಗಿರುತ್ತದೆ. ಇಲ್ಲಿ ಯಾರ ಬೇರುಗಳು ಸಡಿಲವಾಗಿರುತ್ತದೋ ಅಂತಹವರ ಪ್ರಕೃತಿ ಪಲ್ಲಟವಾಗುತ್ತದೆ; ಮತ್ತು ಹಾಗೆ ಆದುದಕ್ಕೆ ಇರುವ ಕಾರಣಗಳನ್ನು ದೊಡ್ಡದು ಮಾಡುತ್ತಾ ತಮ್ಮ ಇರುವಿಕೆಗೆ ಸಮರ್ಥನೆಯನ್ನು ನೀಡುತ್ತದೆ ಎಂದು ಹೇಳಿದೆ. ಹಣ, ಅಧಿಕಾರ, ಪ್ರಭಾವಳಿಗಳನ್ನು ಧಾರಣೆ ಮಾಡಿಕೊಂಡು ಜೀರ್ಣಿಸಿಕೊಳ್ಳುವ ಶಕ್ತಿಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಡಂಕಲ್‌ಪೇಟೆಯ ಒಳ-ಹೊರಗೆ: ಜಿ. ಪಿ.ಬಸವರಾಜು ಮಾತುಗಳು

ವೀರೇಂದ್ರ ವರ್ತಮಾನಕ್ಕೆ ಬೆನ್ನುಹಾಕುವ ಕಥೆಗಾರರಲ್ಲ; ಹಾಗೆಯೇ ಭೂತದ ವೈಭವದಲ್ಲಿ ಮೈಮರೆಯುವವರೂ ಅಲ್ಲ. ಭವಿಷ್ಯದ ಕನಸುಗಳಲ್ಲಿ, ಕಲ್ಪನೆಗಳಲ್ಲಿ ತೇಲುವ ಭಾವಜೀವಿಯೂ ಅಲ್ಲ. ಸುಡು ಸುಡು ವರ್ತಮಾನವೇ ಅವರ ಪ್ರಧಾನ…

Read More

ಬರಹ ಭಂಡಾರ