ರಕುತದಿ ಬರೆದೆನು ಇದ ನಾನು…: ವಿನಾಯಕ ಅರಳಸುರಳಿ ಅಂಕಣ
ಪತ್ರ ಕೇವಲ ಸಾಮಾನ್ಯ ಜನರ ಅಂತರಾಳವನ್ನು ಹಾಗೂ ಕಷ್ಟ-ಕಾರ್ಪಣ್ಯಗಳಷ್ಟನ್ನೇ ಹಂಚಿಕೊಳ್ಳುವ ಮಾಧ್ಯಮವಷ್ಟೇ ಆಗಿರಲಿಲ್ಲ. ಸ್ವಾತಂತ್ರ್ಯ ಹೋರಾಟಗಾರರಿಂದ ಹಿಡಿದು ಚಿಂತಕರ ತನಕ ಎಷ್ಟೋ ಪ್ರಖರ ವ್ಯಕ್ತಿಗಳು ತಮ್ಮ ಹೋರಾಟಗಳನ್ನೂ, ಚಿಂತನೆಗಳನ್ನೂ ಬೇರೆಯವರಿಗೆ ದಾಟಿಸಲು ಆಯ್ದುಕೊಂಡ ಮಾರ್ಗಗಳ ಪೈಕಿ ಪತ್ರವೂ ಒಂದು. ಸೆರೆಯಲ್ಲಿದ್ದಾಗ, ಭೇಟಿ ಸಾಧ್ಯವಿಲ್ಲದಾಗ ತಮ್ಮ ಸಹಚರರಿಗೆ, ಅನುಯಾಯಿಗಳಿಗೆ ಸೂಚನೆಗಳನ್ನು ನೀಡಲೆಂದು ಕಳುಹಿಸಿದ ರಹಸ್ಯ ಓಲೆಯ ನಡುವೆ ಬರೆದ “ಸ್ವಾತಂತ್ರ್ಯ ಸುಮ್ಮನೆ ಬರುವುದಿಲ್ಲ ಗೆಳೆಯಾ. ಅದು ಹೋರಾಟವನ್ನು ಕೇಳುತ್ತದೆ!” ಎಂಬ ಮಾತು ಭೂಮಿಯ ಮೇಲೆ ಮನುಷ್ಯನಿರುವ ತನಕವೂ ನಮ್ಮೆಲ್ಲರ ಬದುಕುಗಳಿಗೆ ಅನ್ವಯವಾಗುವ ಸಾಲು.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಮತ್ತೊಂದು ಬರಹ ನಿಮ್ಮ ಓದಿಗೆ

