Advertisement

Tag: kendasampige

ಸಮೃದ್ಧ ಕಾಡಿನ ರೋಚಕ ಕಥೆಗಳು-೧೧: ರೂಪಾ ರವೀಂದ್ರ ಜೋಶಿ ಸರಣಿ

ಆದರೆ ಎಲ್ಲ ವೇಳೆ ಒಂದೇ ಥೆರನಾಗಿರದು. ಸತತವಾಗಿ ನಡೆಯುತ್ತಿದ್ದ ಅವರ ಕಳ್ಳ ದಂಧೆ ಮಟ್ಟ ಹಾಕಲು ಅದೆಷ್ಟೋ ದಿನಗಳಿಂದ ಅಧಿಕಾರಿಗಳು ಹೊಂಚು ಹಾಕುತ್ತಲೇ ಇದ್ದರೆನ್ನಿಸುತ್ತದೆ. ಒಮ್ಮೆ ಪೋಲೀಸರು ಅವರೆಲ್ಲರನ್ನೂ ಕೆಲಸದ ಜಾಗದಲ್ಲೇ ಅಡ್ಡ ಹಾಕಿದರು. ನಮ್ಮ ಆಳಿನ ಕಿರಿಯ ಮಗನೂ ಅದರೊಳಗಿದ್ದನಂತೆ. ಹೇಗೋ ಕಣ್ಣು ತಪ್ಪಿಸಿಕೊಂಡು ಓಡಿ ಬಂದು ಮನೆಯಲ್ಲಿ ಅಡಗಿದ್ದ. ಅವನಿಗೆ ಕೆಲಸ ಕೊಟ್ಟ ಹೆಗಡೆಯವರು ಇಲಾಖೆಯವರಿಗೆ ದುಡ್ಡು ತಿನ್ನಿಸಿ, ಅವನೇ ಆ ಕಳ್ಳ ನಾಟಾ ಕಡಿಯುವವರಿಗೆ ಮುಖ್ಯಸ್ಥ ಎಂದು ಬಿಂಬಿಸಿ, ಜಾರಿಕೊಂಡರು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಇಪ್ಪತ್ತನೆಯ ಕಂತು

Read More

“ಕಳೆದು ಹೋದವರ ಹಾಡು” ಗಾಳಿಗಿಟ್ಟ ದೀಪಗಳ  ಪ್ರತಿಬಿಂಬ!: ಡಾ. ರಾಜೇಂದ್ರಕುಮಾರ್  ಕೆ. ಮುದ್ನಾಳ್ ಯಾದಗಿರಿ

‘ನಾನು ಕುಣಿಯುತ್ತೇನೆ, ಬಾಗುತ್ತೇನೆ, ನಡೆಯುತ್ತೇನೆ, ನಾನು ಶೃಂಗಾರ ಮಾಡಿಕೊಳ್ಳುತ್ತೇನೆ ಏನ್ ಈವಾಗ್’ ಎಂಬ ಧೋರಣೆ ಬಲವಾಗುವುದಕ್ಕೆ ತೊಡಗಿದಾಗ ಸಮಾಜವನ್ನು ಎದುರಿಸುವ ಶಕ್ತಿ ನಿರ್ಮಾಣವಾಗುತ್ತಾ ಸಾಗುತ್ತದೆ. ಇಲ್ಲಿ ತಾವೇ ಆತ್ಮಸ್ಥೈರ್ಯವನ್ನು ತಂದುಕೊಳ್ಳಬೇಕು. ತಾವೇ ಸಂತೈಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಅಲ್ಪಸಂಖ್ಯಾತರ ಬದುಕು ಕೆಂಡದ ಹಾದಿಯ ಮೇಲೆ ನಡೆದಂತೆ ಎಂಬ ನಿಲುವು ಪ್ರೇಕ್ಷಕರದಾಯಿತು.
ಮಂಗಳ ಎನ್. ನಿರ್ದೇಶನದ “ಕಳೆದು ಹೋದವರ ಹಾಡು” ನಾಟಕದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ

Read More

ಎಸ್. ನಾಗಶ್ರೀ ಅಜಯ್ ಬರೆದ ಈ ಭಾನುವಾರದ ಕತೆ “ಭಿನ್ನ”

ಹೀಗೆ ಅಚಾನಕ್ಕಾಗಿ ಕೆಲಸ ಬಿಡುವ ನಿರ್ಧಾರ ತಿಳಿಸಿ ಹಿಂತಿರುಗಿ ನೋಡದೆ ಬೀಸುನಡಿಗೆಯಲ್ಲಿ ಎದ್ದು ಬರಬೇಕೆನ್ನುವ ತೀರ್ಮಾನ ಹಿಂದಿನ ರಾತ್ರಿ ಮೊಳಕೆಯೊಡೆದು ಬೆಳೆದು ಬೆಳೆದು ಬೃಹದಾಕಾರವಾಗಿ ಇವತ್ತು ಹರಿಣಿಯ ಮುಂದೆ ಕುಳಿತಾಗ ಹೇಳಲೇಬೇಕಾದ ಒತ್ತಡ ಸೃಷ್ಟಿಸಿತ್ತು. ಎಂದಿನಂತೆ ಮೀಟಿಂಗ್ ರೂಮಲ್ಲಿ ಸಿಗದೆ ತನ್ನ ಕ್ಯಾಬಿನ್ನಿಗೆ ಕರೆಸಿ ಕೂರಿಸಿದಾಗಲೇ ಹರಿಣಿ ತನ್ನ ಅಧಿಕಾರ ಪ್ರದರ್ಶನ ಮಾಡಿಯೇ ತೀರುವ ಸೂಚನೆ ಸಿಕ್ಕಿತ್ತು.
ಎಸ್. ನಾಗಶ್ರೀ ಅಜಯ್ ಹೊಸ ಕಥಾ ಸಂಕಲನ “ಕಡೆ ಹಾಯ್ವ ದೋಣಿ”ಯ ಒಂದು ಕತೆ “ಭಿನ್ನ”

Read More

ದೊಡ್‌’ ಅಮ್ಮ, ಚಿಕ್’ ಅಮ್ಮ!:  ಕ್ಷಮಾ ವಿ. ಭಾನುಪ್ರಕಾಶ್ ಕಥಾ ಸರಣಿ

“ಸಾಮಾನ್ಯವಾಗಿ ‘ಚಿಕನ್ ಪಾಕ್ಸ್’ ಒಮ್ಮೆ ಬಂದ್ರೆ ಮತ್ತೊಮ್ಮೆ ಬರಲ್ಲ ಕಾವ್ಯ. ಇದು ವೈರಲ್ ಜ್ವರ ಅಲ್ವಾ? ಮುಂಚೆ ನನಗೂ, ಅಕ್ಕನಿಗೂ, ಬಾವನಿಗೂ ನಮ್ಮ ನಮ್ಮ ಬಾಲ್ಯದಲ್ಲಿ ಈ ಚಿಕ್ಕ ‘ಅಮ್ಮ’ ಬಂದಿತ್ತು. ನಮ್ಮ ದೇಹಕ್ಕೆ, ನಮ್ಮ ರೋಗ ನಿರೋಧಕ ವ್ಯವಸ್ಥೆಗೆ ಈ ‘ವೈರಸ್’ನ ನೆನಪು ಖಂಡಿತವಾಗಿ ಇರತ್ತೆ. ಈ ವೈರಸ್ ಪುನಃ ಬಂದ್ರೆ, ಯಾವ ರೀತಿ ಅದನ್ನ ಹೊಡೆದು ಉರುಳಿಸಬೇಕು ಎಂಬ ಯುದ್ಧನೀತಿ ಗೊತ್ತಿರೋ ‘ಬಿ ಮತ್ತು ಟಿ ಮೆಮೊರಿ ಸೆಲ್ಸ್’ ಈಗಾಗ್ಲೇ ನಮ್ಮ ದೇಹದಲ್ಲಿ ಇರತ್ವೆ.”
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ಯಲ್ಲಿ ಆರನೆಯ ಕತೆ

Read More

ಭಿನ್ನ ನೋಟದ ಪ್ರವಾಸ ಕಥನ: ಡಾ. ಪ್ರೇಮಲತ ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

ನಮ್ಮ ಲೇಖಕರಲ್ಲಿ ವಿ.ಕೃ. ಗೋಕಾಕರು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಓದಿ ಫಸ್ಟ್ ರ್ಯಾಂಕ್ ಗಳಿಸಿದರಷ್ಟೆ. ಯು.ಆರ್. ಅನಂತಮೂರ್ತಿಯವರೂ ಕವಿ ರಾಮಚಂದ್ರ ಶರ್ಮರೂ ಕೆಲವು ವರ್ಷ ಇಂಗ್ಲೆಂಡಿನಲ್ಲಿ ವಿದ್ಯಾಭ್ಯಾಸ ಮಾಡಿದ್ದುಂಟು. ತರುಣ ಲೇಖಕರಲ್ಲಿ ಮುಖ್ಯವಾಗಿ ವಿವೇಕ ಶಾನಭಾಗರು ಉದ್ಯೋಗನಿಮಿತ್ತ ನಾಲ್ಕಾರು ವರ್ಷ ಲಂಡನ್ನಿನಲ್ಲಿದ್ದರು. ಇವರು ಯಾರೂ ಅಪ್ಪಿತಪ್ಪಿ ಕೂಡ ಯುನೈಟೆಡ್ ಕಿಂಗ್ಡಮ್ಮನ್ನು ಭಾರತದೊಡನೆ ತುಲನೆ ಮಾಡಲಿಲ್ಲವೆನ್ನುವುದು ಗಮನಾರ್ಹ. ಆದರೂ ಹಾಗೆ ತುಲನೆ ಮಾಡಿ ಬರೆಯುವುದರಿಂದ ಕೆಲವರು ಓದುಗರಾದರೂ ನಮ್ಮ ದೇಶದ ಹೀನಾಯ ಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಯೋಚಿಸಬಹುದು. ಅವರಲ್ಲಿ ಇದಕ್ಕೇನು ಪರಿಹಾರವಿದ್ದೀತು ಎಂಬೊಂದು ಜಿಜ್ಞಾಸೆಯೇ ಉಂಟಾಗಬಹುದು. ಒಟ್ಟಿನಲ್ಲಿ ಅದೊಂದು ಒಳ್ಳೆಯ ಆಶಯವೇ.
ಡಾ. ಪ್ರೇಮಲತ ಬಿ. ಬರೆದ “ವಿದೇಶ ಪ್ರಯಾಣ… ಕೈತುಂಬ ಕಾಂಚಾಣ” ಕೃತಿಗೆ ಎಸ್‌. ದಿವಾಕರ್‌ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ