Advertisement

Tag: kendasampige

ಉಳ್ಳವರ ಜೊಳ್ಳುತನ: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಒಮ್ಮೆ ‘ಬಿಹಾರಿ ಭೈಯ್ಯ’ ಹೀಗೆ ಕರ್ಕೊಂಡ್ ಬರುವಾಗ, ಆ ಕುಡುಕ ಮಹಾಶಯನೇ ಬ್ಯಾಲೆನ್ಸ್ ತಪ್ಪಿಸಿ, ಬೈಕ್ ಬಿದ್ದು, ಇಬ್ಬರಿಗೂ ಪೆಟ್ಟಾಗಿ, ನೋಡಿದವರು ಹತ್ತಿರದ ಆಸ್ಪತ್ರೆಗೆ ಸೇರಿಸಿ, ಆ ಮಹಾಶಯನ ಮಕ್ಕಳು, ಮೊಮ್ಮಕ್ಕಳು ಬೈಕ್ ಚಾಲಕನದೇ ತಪ್ಪೆಂದು ದಬಾಯಿಸಿ, ಅವನಿಂದಲೇ ಹಣ ಪೀಕಿ, ಟ್ರೀಟ್ಮೆಂಟ್‌ಗೆ ಅದಕ್ಕೆ ಇದಕ್ಕೆ ಎಂದು ಅದರಲ್ಲಿ ಬೇಕಾದ ಬೇಡದ ಟೆಸ್ಟ್‌ಗಳನ್ನೆಲ್ಲ ಮಾಡಿಸಿ, ಆ ಬಿಹಾರಿ ಭಯ್ಯ ಈ ಊರಿನ ಸಹವಾಸವೇ ಬೇಡ ಎಂದು ಈಗ ಇಲ್ಲಿಂದ ಐದು ಕಿಲೋ ಮೀಟರ್ ದೂರದಲ್ಲಿರುವ ಗೋಣಿಪುರಕ್ಕೆ ಮನೆ ಶಿಫ್ಟ್ ಮಾಡಿದನಂತೆ!
‘ಸಿರಿ’ವಂತರ ಜಿಪುಣತನದ ಕುರಿತು ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

Read More

ಬಡತನದ ಬದುಕು ಮತ್ತು ಶಾಲೆಯ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಅವರು “ನಾವು ಬೆಳಿಗ್ಗೆ ಹೊತ್ತು ಮುಂಚೆನೆ ಹೋಗ್ತೀವಿ ನಮಗೆ ಬೆಳಗ್ಗೆ ಏನು ಅಡಿಗೆ ಮಾಡುವುದು ಬೇಡ ಎಂದರು”. ಅಮ್ಮ ನಿರಾಳವಾದಳು. ಏಕೆಂದರೆ ಬೆಳಗಿನ ಅಡಿಗೆಗೆ ಮನೆಯಲ್ಲಿ ಅಕ್ಕಿಯೆ ಇರಲಿಲ್ಲ. ಅಕ್ಕಿ ತಗೋಬೇಕು ಅಂದರೆ ಬೀಡಿಯ ಮಾಲೀಕ ಬರಬೇಕಿತ್ತು. ಹಣ ಕೊಡಬೇಕಿತ್ತು ಅನ್ನುವ ಪರಿಸ್ಥಿತಿ ನಮ್ಮದು. ಆದರೆ ಬೆಳಿಗ್ಗೆ ಸಂಬಂಧಿಕರು ಹೋಗುವುದು ತಡವಾಗಿದ್ದರಿಂದ ಬೆಳಗಿನ ಉಪಹಾರವನ್ನು ಮಾಡಬೇಕಾದ ಪರಿಸ್ಥಿತಿ ಅಮ್ಮನದಾಗಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಸರ್ವಶಕ್ತ ಮಹಿಳೆಯಲ್ಲ ನಾನು, ನಿಜ ಮಹಿಳೆ: ಎಲ್.ಜಿ.ಮೀರಾ ಬರಹ

ಉದ್ಯೋಗಸ್ಥ ಮಹಿಳೆಯ ಅಪರಾಧಿ ಪ್ರಜ್ಞೆಯು ಸಹ ಗಂಡಾಳಿಕೆಯ ಸಮಾಜವು ನಿರ್ಮಿಸಿದ್ದೇ ಆಗಿರುತ್ತೆ. ಸ್ತ್ರೀವಾದದ ಮಾತೃಚಿಂತಕಿಯರಲ್ಲೊಬ್ಬರಾದ ವರ್ಜೀನಿಯಾ ವೂಲ್ಫ್ ಹೇಳುವ ಗೃಹದೇವತೆಯ ಬಿಂಬ ನೆನಪಾಗುತ್ತೆ. `ಮನೆಕೆಲಸ, ಮನೆವಾಳ್ತೆ ಎಂದರೆ ಅದು ಹೆಣ್ಣಿನ ಜವಾಬ್ದಾರಿ ಮಾತ್ರ’ ಎಂದು ತಿಳಿದಿದ್ದ ಪರಿಸರದಲ್ಲಿ ಬೆಳೆದ ಹೆಂಗಸರಲ್ಲಿ, `ಮನೆಕೆಲಸವನ್ನು ಸರಿಯಾಗಿ ಮಾಡದಿರುವ ಬಗ್ಗೆ’ ಒಂದು ಅಪರಾಧಿ ಪ್ರಜ್ಞೆ ಇರುತ್ತದೆ. ಅವರ ಸುಪ್ತ ಮನಸ್ಸಿನಲ್ಲಿ ಅದು ಸೇರಿ ಹೋಗಿರುತ್ತದೇನೋ!
ಉದ್ಯೋಗಸ್ಥ ಮಹಿಳೆಯರು ಮನೆ-ಉದ್ಯೋಗ ಸಂಭಾಳಿಸುವುದರ ಕುರಿತು ಡಾ. ಎಲ್. ಜಿ. ಮೀರಾ ಬರಹ

Read More

ರವಿ ಮಡೋಡಿ ಬರೆದ ಈ ಭಾನುವಾರದ ಕತೆ

ಮುಂದೆ ಮುಂದೆ ಸಾಗಿದರೂ ಮನೆಗಳು ಮುಗಿಯುವ ಲಕ್ಷಣ ಕಾಣಿಸಿರಲಿಲ್ಲ. ರಮೇಶ ತಾನು ಈ ದಾರಿಯಲ್ಲಿ ಬರಲೇಬಾರದಿತ್ತು, ಬೇರೆಯೊಂದು ದಾರಿಯಲ್ಲಿ ಹೋಗಿದ್ದರೆ ಇಷ್ಟು ಹೊತ್ತಿಗಾಗಲೇ ತನ್ನ ಕೆಲಸವನ್ನು ಪೂರೈಸಿಕೊಳ್ಳಬಹುದಿತ್ತೋ ಏನೋ ಎಂದುಕೊಳ್ಳುತ್ತ ಹಳಿದುಕೊಂಡ. ಆದರೆ ತಾನೊಂದು ಬಗೆದರೆ ದೈವವೊಂದು ಬಗೆಯಿತು ಯಾವಾಗಲೂ ಹೇಳಿಕೊಳ್ಳುತ್ತಿದ್ದ ಮಾತು ಸತ್ಯವೆನಿಸಿ ಯೋಚಿಸುವುದಕ್ಕೆ ತೊಡಗಿದ. ತನ್ನ ತಿರುಗಾಟದ ಜೀವನದಲ್ಲಿ ಯಾವತ್ತೂ ಇವತ್ತಿನ ಸ್ಥಿತಿಯನ್ನು ಅನುಭವಿಸಿರುವುದು ನೆನಪಿಗೆ ಬರಲಿಲ್ಲ. ಅಭಿಮಾನಿ ಕೊಟ್ಟಿದ್ದ ಬನ್ ಹೀಗೊಂದು ಅವಾಂತರಕ್ಕೆ ಕಾರಣವಿರಬಹುದೇ ಎಂದುಕೊಳ್ಳುವಾಗ ಅವನ ಮೇಲೆ ತಪ್ಪನ್ನು ಹೊರಿಸುವುದಕ್ಕೆ ಇಷ್ಟವಾಗಲಿಲ್ಲ.
ರವಿ ಮಡೋಡಿ ಬರೆದ ಈ ಭಾನುವಾರದ ಕತೆ “ಜೀವದೊಳಗಿನ ಆಟ” ನಿಮ್ಮ ಓದಿಗೆ

Read More

ಬೇಸಿಗೆಯ ಬೇಗೆಗೆ ನೆನಪುಗಳ ಸಿಂಚನ: ಚಂದ್ರಮತಿ ಸೋಂದಾ ಸರಣಿ

ವಸಂತ ಋತುಗಳನ್ನು ಎಲ್ಲ ಕಾಲಕ್ಕೂ ಕವಿಗಳು ಹಾಡಿಹೊಗಳುತ್ತ ಬಂದಿದ್ದಾರೆ. ಮಾವಿನ ಚಿಗುರು, ಕೋಗಿಲೆಯ ಕುಕಿಲು, ಮುಂಗಾರಿನ ಆರ್ಭಟ ಎಲ್ಲವೂ ಅವರ ವರ್ಣನೆಗೆ ಕಾರಣವಾಗಿವೆ. ಅದೇಕೋ ಬಿರುಬೇಸಗೆಯ, ಸುಡುಬಿಸಿಲಿನ ಅನಭವಗಳು ಅವರನ್ನು ಕಾಡಿದಂತೆ ಕಾಣುತ್ತಿಲ್ಲ. ಪ್ರಸ್ತುತ ಸನ್ನಿವೇಶದಲ್ಲಿ ಭೂಮಿಯ ದಗೆಯನ್ನು ಮೀರಿಸುವಂತೆ ಚುನಾವಣೆಯ ಕಾವು ಏರುತ್ತಿದೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ