Advertisement

Tag: kendasampige

ಹೆಬ್ಬುಲಿಯೊಂದು ಡಮಾರ್!!: ಸುಧಾ ಆಡುಕಳ ಅಂಕಣ

ಶಾಲೆಗೆ ಹೋದರೂ ನೀಲಿಗೆ ಹುಲಿಯದೇ ಮುಖ ನೆನಪಿಗೆ ಬರುತ್ತಿತ್ತು. ತನ್ನ ಸಹಪಾಟಿಗಳಿಗೂ ಹುಲಿಯನ್ನು ತೋರಿಸಬೇಕು ಅನಿಸತೊಡಗಿತು. ಮಾಸ್ತ್ರು ಪಾಠ ಮಾಡುತ್ತಿರುವಂತೆಯೇ ಪಿಸಪಿಸನೆ ಆಚೀಚೆಗೆ ಕುಳಿತವರಿಗೆ ವಿಷಯ ಮುಟ್ಟಿಸಿದಳು. ಇಂದೇನು? ಯಾವ ಮಕ್ಕಳೂ ಪಾಠದೆಡೆಗೆ ಗಮನವನ್ನೇ ನೀಡುತ್ತಿಲ್ಲವೆಂದು ಕ್ಷಣಕಾಲ ದಿಟ್ಟಿಸಿದ ಗೌಡಾ ಮಾಸ್ತ್ರು ಸುದ್ದಿಮೂಲವನ್ನು ಪತ್ತೆ ಹಚ್ಚಿಯೇಬಿಟ್ಟರು. ನೀಲಿಯನ್ನು ನಿಲ್ಲಿಸಿ ವಿಷಯ ಕೇಳಿದ್ದೇ ತಡ ಪಟಪಟನೆ ಪಟಾಕಿ ಸರಕ್ಕೆ ಬೆಂಕಿ ಕೊಟ್ಟಂತೆ ಎಲ್ಲ ಕತೆಯನ್ನು ಹೇಳಿಬಿಟ್ಟಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಅನ್ನ ದೇವರ ಮುಂದೆ ಇನ್ನ ದೇವರು ಉಂಟೆ?: ಅಂಜಲಿ ರಾಮಣ್ಣ ಪ್ರವಾಸ ಕಥನ

ಐಶ್ವರ್ಯಾಳ ಸೌಂದರ್ಯ, ಅಮಿತಾಬನ ಎತ್ತರ ಜೊತೆಗೆ ಮಂಗಲ ನಾಥನ ಶಕ್ತಿ ಎಲ್ಲವೂ ಗೌಣ ಹಸಿವಿನ ಮುಂದೆ. ಅಲ್ಲಿಯೇ ನಾಲ್ಕಾರು ರಸ್ತೆಯ ಮುಂದೆ ಇದ್ದ, ದೊಡ್ಡ ಶಾಮಿಯಾನ ಹಾಕಿ ಮದುವೆ ಮನೆಯ ಊಟದ ಹಜಾರದಂತೆ ಇದ್ದ ಜಾಗಕ್ಕೆ ಕರೆದುಕೊಂಡು ಬಂದ ಪವನ್. ‘ಸಾಯು ಕ್ರುಪಾ’ ಎನ್ನುವ ಬೋರ್ಡ್ ಇತ್ತು.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣ

Read More

ಬದುಕು ಇರುವುದು ಬದುಕಲು.. ಕಳೆದುಕೊಳ್ಳಲಲ್ಲ: ಸುಮಾವೀಣಾ ಸರಣಿ

ಹತ್ತನೆ ತರಗತಿಗೆ ಬಂದಾಗ ಇಬ್ಬರೂ ಒಂದೇ ಬೆಂಚಿನಲ್ಲಿ ಕುಳಿತುಕೊಳ್ಳುವ ಅವಕಾಶವಿತ್ತು. ಅದೂ ಬೋರ್ಡಿಂಗ್ ಶಾಲೆಯಲ್ಲಿ. ಇಬ್ಬರೆ ಕುಳಿತುಕೊಳ್ಳುವ ಬೆಂಚ್ ನಮಗೆ ಹೇಳಿ ಮಾಡಿಸಿದಂತಿತ್ತು.. ನಮಗೆ ಆಗೆಲ್ಲ ಇಂಕ್ ಪೆನ್ನಿನಲ್ಲೇ ನೋಟ್ಸ್ ಬರೆಸುತ್ತಿದ್ದರು. ಒಂದುವೇಳೆ ಇಂಕ್ ಖಾಲಿಯಾದರೆ ಒಬ್ಬರ ಪೆನ್ನಿನಿಂದ ಇನ್ನೊಬ್ಬರ ಪೆನ್ನಿಗೆ ಇಂಕ್ ಹಾಕಿಕೊಳ್ಳುತ್ತಿದ್ದೆವು. ಗೊರಟೆ ಹೂ, ದುಂಡುಮಲ್ಲಿಗೆ ಮುಡಿಯಲು ಪೈಪೋಟಿ ನಡೆಸುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

ಕೇರಿಯ ಕುಟುಂಬವೊಂದರ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಪಕ್ಕದ ಊರಿಗೆ ಒಂದೆರಡು ಬಾರಿ ಹೋದಾಗ ಅವರ ಮನೆಗೆ ನಾವು ಹೋಗಿದ್ದೆವು. ಆದರೆ ಹಿರಿಮಗ ಪಾಂಡುರಂಗನ ಮೇಲೆ ಬಹಳಷ್ಟು ಜವಾಬ್ದಾರಿ ಇತ್ತು. ಆತ ದುಡಿದ… ದುಡಿಯುತ್ತಲೆ ಇದ್ದ. ತಂಗಿಯ ಮದುವೆಯನ್ನು ಬಹಳ ಜೋರಾಗಿಯೆ ಮಾಡಿದ. ವ್ಯಾಪಾರ ಚೆನ್ನಾಗಿಯೇ ನಡೆಯುತ್ತಿತ್ತು. ತಮ್ಮನ ಮದುವೆಯೂ ಆಗಿ ಆತ ಬೇರೆಯಾದನು. ಪಾಂಡುರಂಗ ಎಲ್ಲ ಜವಾಬ್ದಾರಿಗಳ ನಡುವೆ ಒಂದಿಷ್ಟು ಸಾಲಗಾರನಾದ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

“ಕರ್ನಾಟಕದ ಕಸ್ತೂರಬಾ”: ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಅಂಕಣ

ಅಸ್ಪೃಶ್ಯತೆ ನಿವಾರಣೆಯನ್ನು ತಿಳಿಸಿಕೊಟ್ಟ ಮಹಾತ್ಮ ಗಾಂಧೀಜಿ ಅವರು ದೀನ, ದಲಿತ, ದುರ್ಬಲರ ಒಳಿತಿಗಾಗಿ ಮಾಡುವ ನಿಸ್ವಾರ್ಥ ಸೇವೆ ಅತ್ಯಂತ ಪವಿತ್ರವಾದದ್ದು ಹಾಗೂ ಅದು ದೇವರನ್ನು ಪೂಜಿಸಿದಷ್ಟೇ ಫಲ ದೊರೆಯುವ ಸೇವಾ ಕಾರ್ಯ, ಅಸ್ಪೃಶ್ಯರನ್ನು ಈ ಕಾರಣದಿಂದಲೇ ಗಾಂಧೀಜಿಯವರು ದಲಿತರು ಎಂದು ಕರೆಯುವ ಮೂಲಕ ಅವರ ಉದ್ಧಾರವೇ ಜನಾರ್ಧನನ ಸೇವೆ ಎಂಬುದನ್ನು ದೃಢವಾಗಿ ನಂಬಿದ್ದರಲ್ಲದೆ ಗಾಂಧಿಜೀಯವರ ಅನುಯಾಯಿಗಳೆಲ್ಲ ಕೇರಿಯ ಜನರಗಳಿಗಾಗಿ ಸೇವೆ ಮಾಡುವಂತಹ ವಾತಾವರಣವನ್ನು ನಿರ್ಮಿಸಿದರು.
ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ “ಹೊಸ ಓದು” ಹೊಸ ಓದು ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ