Advertisement

Tag: kendasampige

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ತಮ್ಮ ಮನಸ್ಸಿನಲ್ಲಿ ಇದ್ದುದನ್ನು ಮೊದಲು ಮುಕುಂದರಾವ್ ಹೆಂಡತಿ ಬಳಿ ಹೇಳಿದರು. ಆಗ ಶ್ರೀ ವೇದ “ಅಲ್ಲರೀ, ಆಟೋದವರಿಗೆ ಹೆಣ್ಣು ಕೊಡುವುದಂದರೆ ನೆಂಟರಿಷ್ಟರು ಆಡಿಕೊಳ್ಳುವುದಿಲ್ಲವೇ, ಸಾಮಾನ್ಯವಾಗಿ ಆಟೋ ಡ್ರೈವರ್‌ಗಳ ಬಗ್ಗೆ ಕೆಲವರಿಗೆ ಏನೋ ಒಂದು ರೀತಿಯ ತಾತ್ಸಾರ ಭಾವ ಇರುತ್ತಲ್ಲವೇ, ಅಲ್ಲದೆ ಶ್ರಾವಣಿಗೂ ತುಂಬಾ ವಯಸ್ಸು ಆಗಿ ಹೋಗಿಲ್ಲ, ಇನ್ನೂ ಸ್ವಲ್ಪ ಕಾಯೋಣ, ಬನಶಂಕರಿ ಹುಡುಗ ಇನ್ನೂ ಏನು ಫೈನಲ್ ಮಾಡಿಲ್ಲ ಅಲ್ಲವೇ? ಅದು ಆದರೂ ಆಗಬಹುದಲ್ಲವೇ” ಎಂದಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಸಮನ್ವಿತ”

Read More

ಕಾಲಕ್ಕೆ ಶರಣು ಎನ್ನೋಣ: ವಿನತೆ ಶರ್ಮ ಅಂಕಣ

ವಾರಾಂತ್ಯಗಳಲ್ಲಿ ದೇಶದ ರಾಜಧಾನಿ ನಗರಗಳಲ್ಲಿ ನಡೆಸುವ ಸಾರ್ವಜನಿಕ ಪ್ರದರ್ಶನಗಳು, ಬಹುಸಂಸ್ಕೃತಿಗಳವರ ಕಾರ್ಯಕ್ರಮಗಳು ಹೆಚ್ಚಾಗಿವೆ. ೨೦೨೩ ರ ಕೊನೆಯಲ್ಲಿ ನಾವು ಮೂರು, ನಾಲ್ಕು ಬಾರಿ ಇಸ್ರೇಲ್, ಪ್ಯಾಲೆಸ್ಟೈನ್-ಗಾಝಾ, ಯೂಕ್ರೇನ್ ಮೂಲಗಳ ಜನರು ನಡೆಸುತ್ತಿದ್ದ ಪ್ರದರ್ಶನಗಳ ಪರಿಣಾಮಕ್ಕೆ ಸಿಲುಕಿದ್ದೆವು. ಅದೇನೂ ದೊಡ್ಡ ವಿಷಯವಲ್ಲ ಬಿಡಿ. ಪ್ರದರ್ಶನದಲ್ಲಿ ಭಾಗವಹಿಸಿದ್ದ ಪ್ರತಿರೋಧಿಗಳು ಘೋಷಣೆಗಳನ್ನು ಕೂಗುತ್ತಾ ರಸ್ತೆಗಿಳಿದಾಗ ಪೊಲೀಸರು ರಸ್ತೆ ಬಂದ್ ಮಾಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ರಾಮ್ ಪ್ರಕಾಶ್ ರೈ ಕೆ. ಹೊಸ ಸರಣಿ “ಸಿನಿ ಪನೋರಮಾ” ಇಂದಿನಿಂದ

ಯಾರ ದೃಷ್ಟಿಗೂ ಬೀಳದಂತೆ ಹೋಟೆಲಿನ ಹಿಂಬಾಗಿಲ ಬಳಿ ಕುಳಿತು ಆಕೆ ಬಿರಿಯಾನಿಯ ಚಪ್ಪರಿಸುತ್ತಿದ್ದಳು, ಅದರ ಕಾಲಾತೀತ ಪ್ರೇಯಸಿ ಮೊಸರು ಬಜ್ಜಿಯ ಒಂಚೂರು ಹೆಚ್ಚೆನಿಸುವಷ್ಟು ಸೇರಿಸಿಕೊಂಡು. ಅಲ್ಲೇ ಆಗಿದ್ದು ಅವರ ಪರಿಣಯದ ಉದ್ಘಾಟನೆ. ಮುಂದೆ ಆತ ಅವಳಿಗೆ ತನ್ನದೇ ಶೈಲಿಯ ಬಿರಿಯಾನಿಯ ಮಾಡಿ ತಿನ್ನಿಸುತ್ತಿದ್ದರೆ, ಅವಳು ಆತನೆಡೆಗೆ ತನ್ನ ಚಂದಿರ ಮೂಡುವ ಕೆನ್ನೆಗಳ ಒಳಸೆಳೆದು ತುಟಿಯಂಚಿನಲ್ಲಿ ನಗು ಚೆಲ್ಲುತ್ತಾ ಪ್ರೀತಿಯ ಭಾವವ ತಣ್ಣಗೆ ಧಾರೆಯೆರೆಯುತ್ತಿದ್ದಳು.
ರಾಮ್ ಪ್ರಕಾಶ್ ರೈ ಕೆ. ಬರೆಯುವ ಸಿನಿಮಾಗಳ ಕುರಿತ “ಸಿನಿ ಪನೋರಮಾ” ಸರಣಿ ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಮಲಗು ಮಲಗೆನ್ನ ಮಗುವೆ…: ಚಂದ್ರಮತಿ ಸೋಂದಾ ಸರಣಿ

ನನಗೆ ಈಗಲೂ ನೆನಪಿದೆ, ನನ್ನ ತಮ್ಮಂದಿರನ್ನು, ಅಕ್ಕನ ಮಕ್ಕಳನ್ನು ತೊಟ್ಟಿಲಲ್ಲಿ ಮಲಗಿಸಿ ತೂಗುವಂತೆ ಅಮ್ಮ ಹೇಳುತ್ತಿದ್ದಳು. ಸುಮ್ಮನೆ ತೂಗಿದರೆ ಮಕ್ಕಳು ಅಳುತ್ತಿದ್ದವು. ಲಾಲಿಪದ ಹೇಳಿದರೆ ಸಾಕು ಕೆಲವೇ ಹೊತ್ತಿನಲ್ಲಿ ಅವು ಮಲಗುತ್ತಿದ್ದವು. ಆಗೆಲ್ಲ ನಾವು ದೊಡ್ಡವರು ಹೇಳುತ್ತಿದ್ದ ಜೋಗುಳ, ಲಾಲಿಪದಗಳನ್ನು ಕೇಳಿ ಕಲಿಯುತ್ತಿದ್ದೆವು. ʻಅಳದಿರು ತಮ್ಮಯ್ಯ ಅಳಿರ ಕಣ್ಣಿಗೆ ನಿದ್ದೆ ಬೆಳಗಾದರೆ ಬಕ್ಕು ನಿನ ಮಾವ ತಮ್ಮಯ್ನ ಮಡಿಲಿಗೆ ತಕ್ಕು ಕಡಲೆಯʼ ಅಂತಲೋ ನಮ್ಮದೇ ಆದ ರಾಗದಲ್ಲಿ ಹಾಡುವುದಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹದಿಮೂರನೆಯ ಕಂತಿನಲ್ಲಿ ಲಾಲಿಹಾಡುಗಳ ಕುರಿತ ಬರಹ ನಿಮ್ಮ ಓದಿಗೆ

Read More

ಲೋಕಲ್ ಫಂಡ್ ಡಿಸ್ಪೆನ್ಸರಿಯೂ.. ಮೊಡವೆ ಪುರಾಣವೂ..: ಎಚ್. ಗೋಪಾಲಕೃಷ್ಣ ಸರಣಿ

ಆಗಾಗ ಈ ಮೊಡವೆ ಹಿಸಿಕಿ ಹಿಸುಕಿ ಕೀವು ಇತ್ಯಾದಿ ಅದರೊಳಗಿಂದ ಆಚೆಗೆ ತೆಗೀತಿದ್ದೆ. ಮುಖದ ತುಂಬಾ ಹೀಗೆ ನಾನೇ ಮಾಡಿಕೊಂಡ ಮೊಡವೆ ನಿರ್ಮೂಲನ ಯೋಜನೆಯ ಗುರುತುಗಳು ಹೇರಳವಾಗಿ ಇದ್ದವು, ಇದ್ದವು ಏನು ಈಗಲೂ ಇವೆ. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ತೈದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ