Advertisement

Tag: kendasampige

ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಆರಂಭ

ಪ್ರಯಾಣದ ಕನಸಿನಿಂದ ಥಟ್ಟನೆ ವಾಸ್ತವಕ್ಕಿಳಿದ ನೀಲಿ ನೀರಿನಾಳದಲ್ಲಿ ಹೊಳೆಯುತ್ತಿರುವ ನಾಣ್ಯಗಳನ್ನು ನೋಡುತ್ತಾ ನಡುಹೊಳೆಯಲ್ಲಿ ನಿಂತುಬಿಟ್ಟಳು. ಅವಳಿಗೀಗ ಇರುವುದು ಎರಡೇ ಅವಕಾಶಗಳು. ಒಂದೋ ದುಡ್ಡನ್ನು ಹೊಳೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗುವುದು, ಇಲ್ಲವೆಂದರೆ ಅಂಗಿ ಒದ್ದೆಯಾಗುವ ಪರಿವೆಯಿಲ್ಲದೇ ಹೊಳೆಯೊಳಗೆ ಒಮ್ಮೆ ಮುಳುಗಿ ದುಡ್ಡನ್ನು ಹೆಕ್ಕಿಕೊಳ್ಳುವುದು. ಒದ್ದೆಯಾದ ಅಂಗಿಯನ್ನು ಬದಲಿಸಿ ಬರಲು ಮನೆಗೆ ಹೋಗುವಷ್ಟು ಸಮಯವಿಲ್ಲ.
ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಅಂಜಲಿ ರಾಮಣ್ಣ ಪ್ರವಾಸ ಅಂಕಣ ‘ಕಂಡಷ್ಟೂ ಪ್ರಪಂಚ’ ಮತ್ತೆ ಶುರು…

ಮನೆಯಿಂದ ಹೊರಟಾಗ ಚಿರಾಪುಂಜಿ ಎಂದರೆ ಪ್ರೈಮರಿ ಶಾಲೆಯಲ್ಲಿ ಹೇಳಿಕೊಟ್ಟಿದ್ದಂತೆ ಭಾರತದಲ್ಲೇ ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಎನ್ನುವುದು ಮಾತ್ರ ತಲೆಯಲ್ಲಿ ಇತ್ತು. ಶಿಲ್ಲಾಂಗ್‌ನಿಂದ ಒಂದುವರೆ ಗಂಟೆಯ ಪ್ರಯಾಣ ಮಾತ್ರ ಎಂದಾಗ ಖುಷಿಯೋ ಖುಷಿ. ಹೋಗ್ತಾನೇ ಇದ್ದರೂ ಎಲ್ಲೂ ಚಿರಾಪುಂಜಿ ಅಂತ ಬೋರ್ಡ್ ಕಾಣದೆ ಚಾಲಕ ಬುರಿತ್ ಧೊತ್‍ದಾಂಗ್‍ನನ್ನು ಕೇಳಿದೆ. “ನೀವೀಗ ಚಿರಾಪುಂಜಿಯಲ್ಲಿಯೇ ಇದ್ದೀರ” ಎಂದ.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಮೇಘಾಲಯದಲ್ಲಿ ಸುತ್ತಾಡಿದ ಅನುಭವಗಳ ಕುರಿತ ಬರಹ

Read More

ಒಟ್ಟಿಗೆ ಬಾಳಿದ ತೆರದಿ… : ಸುಮಾವೀಣಾ ಸರಣಿ

ನಮ್ಮಲ್ಲಿ ನಿದ್ರೆಯಲ್ಲಿ ಬೆಚ್ಚಿ ಬೀಳುವ, ಮಾತನಾಡುವವರು ಇದ್ದರು. ಜೊತೆ ಜೊತೆಗೆ ವಾಯುವಾತದ ನಾನಾ ಸದ್ದು….. ನಮ್ಮ ಕಾಲದಲ್ಲಿ ಲ್ಯಾಂಡ್ ಲೈನ್ ಫೋನ್ ಬಿಟ್ಟರೆ ಸೆಲ್ ಫೋನ್‌ಗಳು ಇರಲಿಲ್ಲ. ಇದ್ದಿದ್ದರೆ ಅದೆಷ್ಟು ವಿಡಿಯೋಗಳು ವೈರಲ್ ಆಗುತ್ತಿದ್ದವೋ ಏನೋ? ಗೊತ್ತಿಲ್ಲ! ಆದರೂ ಒಬ್ಬಾಕೆ ನಿದ್ರೆಯಲ್ಲಿ ಓಡಾಡುತ್ತಿದ್ದಳು. ಅದೊಂದು ಡಿಸಾರ್ಡರ್‌ ಎನ್ನುತ್ತಾರೆ. ಅವರನ್ನು ತಕ್ಷಣಕ್ಕೆ ಎಬ್ಬಿಸಬಾರದು ಇತ್ಯಾದಿ ಇತ್ಯಾದಿ……
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

Read More

ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ: ಸಂಗೀತ ರವಿರಾಜ್ ಬರಹ

ಇಲ್ಲಿನ ಕವಿತೆಗಳಲ್ಲಿ ಅತಿರಂಜಿತ ಕಲ್ಪನೆಗಳಿಗಿಂತ ತನ್ನ ನಡುವಿನ ಬದುಕನ್ನೇ ಭಿನ್ನವಾಗಿ ಅವಲೋಕಿಸುತ್ತ, ಆ ಮೂಲಕವೇ ತನ್ನ ಭಾವನೆಗಳನ್ನು ಮಿಳಿತಗೊಳಿಸಿ ಕವಿತೆಯಲ್ಲಿ ಸ್ಪುರಿಸುತ್ತಾರೆ. ಕಾವ್ಯದಿಂದಲೇ ಏನನ್ನೋ ಗೆಲ್ಲಬಯಸುತ್ತೇನೆ ಎಂಬ ಸಣ್ಣ ಆಸೆಯಿಂದ, ಜೊತೆಗೆ ಆಸ್ಥೆಯಿಂದ ಹೇಳುವಂಥದನ್ನು ಹೇಳಿಕೊಂಡಿದ್ದಾರೆ. ಮಾತಿಗಿಂತ ಕಾವ್ಯವೇ ತನ್ನ ಅಭಿವ್ಯಕ್ತಿ ಮಾಧ್ಯಮ ಎನಿಸುವಂತಹ ಜೀವಂತಿಕೆಯ ಸಾಲುಗಳು ಕವಿತೆಗಳಲ್ಲಿವೆ.
ಜಗದೀಶ್‌ ಜೋಡುಬೀಟಿ ಕವನ ಸಂಕಲನ “ಅಪ್ಪನ ಗೋರಿಯಲ್ಲಿ ಕನಸುಗಳ ಬಿಕ್ಕಳಿಕೆ” ಕುರಿತು ಸಂಗೀತ ರವಿರಾಜ್‌, ಚೆಂಬು ಬರಹ

Read More

ಯಾರಿಗೂ ಗೊತ್ತಿರದ ಒಂದು ಪುಟ್ಟ ಗುಲಾಬಿ…: ಚೈತ್ರಾ ಶಿವಯೋಗಿಮಠ ಸರಣಿ

ಎಮಿಲಿ ಮನೆಯೇ ಮಂದಿರವೆಂದು ನಂಬಿದ್ದವಳು. ಇಗರ್ಜಿಗಳಿಗೆ ಹೆಚ್ಚಾಗಿ ಭಾಗವಹಿಸದೇ, ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುತ್ತಿದ್ದಳು. ಅನಾರೋಗ್ಯ ನಡುವೆಯೂ ಒಂದಿಷ್ಟು ಉಲ್ಲಸಿತಳಾಗಿರೋವಾಗ ಅನೇಕ ಸೃಜನಶೀಲ ಕೆಲಸಗಳಲ್ಲಿ ಮಗ್ನಳಾಗುತ್ತಿದ್ದಳು. ಸ್ನೇಹಿತರಿಗೆ ಪತ್ರ ಬರೆಯುವುದು, ತಾನು ಬರೆದ ಪದ್ಯಗಳಲ್ಲಿ ಕೆಲವನ್ನು ಮಾತ್ರ ಸನ್ಮಿತ್ರರಿಗೆ ಟಪಾಲು ಹಾಕಿದರೂ ಅವೆಷ್ಟೋ ಪದ್ಯಗಳು ಅವಳಲ್ಲೇ ಉಳಿಯುತ್ತಿದ್ವು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ