Advertisement

Tag: kendasampige

ಟೀವಿ’ಯಿದ್ದವರು ‘ಠೀವಿ’ಯಿಂದ ಬೀಗುತ್ತಿದ್ದ ಕಾಲ!: ಬಸವನಗೌಡ ಹೆಬ್ಬಳಗೆರೆ ಸರಣಿ

ದಿನ ಸಂಜೆ ಒಂದು‌ ಧಾರವಾಹಿ, ಶುಕ್ರವಾರ ‘ಚಿತ್ರಮಂಜರಿ’ ಹೆಸರಿನಲ್ಲಿ‌ ಕನ್ನಡ ಚಲನಚಿತ್ರ ಗೀತೆಗಳು ಬರುತ್ತಿದ್ದವು. ಇವನ್ನ ನೋಡಲು ನಾವು ತುಂಬಾ ಕಾತುರರಾಗಿ ಸಂಜೆ ಏಳು ಗಂಟೆಗೆಲ್ಲಾ ಟಿವಿ ಮುಂದೆ ಹಾಜರಾಗುತ್ತಿದ್ದೆವು. ನಮ್ಮಜ್ಜನ ಮನೆಯಲ್ಲಿ ಟಿವಿ ಇರಲಿಲ್ಲ. ನಾವು ಬೇರೆಯವರ ಮನೆಗೆ ಟಿವಿ‌ ನೋಡಲು ಹೋಗಬೇಕಾಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ರಂಜಾನ್ ದರ್ಗಾ ಬರೆಯುವ ʻನೆನಪಾದಾಗಲೆಲ್ಲʼ ಸರಣಿ ಮತ್ತೆ ಆರಂಭ

ಒಂದು ದಿನ ಮಧ್ಯಾಹ್ನದ ಡ್ಯೂಟಿಗಾಗಿ ಪ್ರಜಾವಾಣಿ ಕಚೇರಿಗೆ ಬರುವಾಗ ಟೈಂ ಆಫೀಸಿನ ಎದುರಿಗೆ ಮುಖ್ಯ ಗೇಟ್ ಮುಂದೆ ಜವಾಹಾರ ಬಾಲಭವನದ ದಿನಗೂಲಿಗಳೆಲ್ಲ ನಿಂತಿದ್ದರು. ಇವರೇಕೆ ಬಂದಿದ್ದಾರೆ ಎಂದು ಯೋಚನೆ ಮಾಡುವಷ್ಟರಲ್ಲಿ ಒಬ್ಬಾತ ಮುಂದೆ ಬಂದು, “ಸರ್ ನಿಮಗೆ ಥ್ಯಾಂಕ್ಸ್ ಹೇಳಲು ಬಂದಿದ್ದೇವೆ. ತಾವು ಬರೆದ ಲೇಖನ ಫಲ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಚಂದ್ರಪ್ರಭಾ ಅರಸು ಅವರು ನಮ್ಮ ಸ್ಥಿತಿಗತಿ ಅರಿತುಕೊಂಡು ನಮ್ಮೆಲ್ಲರ ಸಂಬಳ ಹೆಚ್ಚು ಮಾಡಿದ್ದಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 67ನೇ ಕಂತು ನಿಮ್ಮ ಓದಿಗೆ

Read More

ನಮ್ಮನ್ನು ನಾವು ತಿದ್ದಿಕೊಳ್ಳುವುದೇ ಹೊಸತನ: ಕೀರ್ತನ ಎಂ. ಬರಹ

ಈಗಿನ ಓಡುವ ಕಾಲದಲ್ಲಿ ಸಂಕಲ್ಪ ಮಾಡಿದರೆ ಸಾಲದು ದೃಢ ಸಂಕಲ್ಪ ಮುಖ್ಯ. ಅದನ್ನು ಪಾಲಿಸುವ ಅನುಸರಿಸುವ ಏಕ ಮನಸ್ಥಿತಿ ಮುಖ್ಯ. ಅಂದುಕೊಂಡಿದ್ದನ್ನು ಮಾಡಿ ಸಾಧಿಸುತ್ತೇನೆ ಎನ್ನುವ ಗಟ್ಟಿ ಮನಸ್ಸು, ಹಟ, ಛಲ ಮುಖ್ಯ. ಅದೆಲ್ಲವೂ ನಮ್ಮನ್ನು ಒಳ್ಳೆಯ ಮಾರ್ಗದಲ್ಲಿ ಕರೆದುಕೊಂಡು ಹೋಗುವುದರಲ್ಲಿ ನಿರತವಾಗಿರಬೇಕು.
ಹೊಸ ವರ್ಷವನ್ನು ಆರಂಭಿಸುವುದರ ಕುರಿತು ಕೀರ್ತನ ಎಂ. ಬರಹ ನಿಮ್ಮ ಓದಿಗೆ

Read More

ಹೊಸ ವರುಷಕೆ… ಹೊಸ ಹರುಷಕೆ..: ಪ್ರಕಾಶ್ ಪೊನ್ನಾಚಿ ಬರಹ

ಬದುಕು ನಿಂತ ನೀರಲ್ಲ, ಬದಲಾವಣೆ ಜಗದ ನಿಯಮ ಎಂದುಕೊಂಡೇ ಮನುಷ್ಯ ಬದಲಾವಣೆಗೊಳಪಟ್ಟುಕೊಂಡು ಹೊಸ ರೂಪಾಂತರಗಳನ್ನು ಆವಿಸ್ಕರಿಸಿ ಹೊಸ ಜಗದ ಸೃಷ್ಟಿಗೆ ನಾಂದಿ ಹಾಡುತ್ತಾ ಬಂದ. ಪ್ರತಿ ವರ್ಷವೂ ಹೊಸದೊಂದು ಜನ್ಮವೆಂದುಕೊಂಡೆ ಹೊಸ ಸೃಷ್ಟಿಗಳಿಗೆ ಬುನಾದಿ ಹಾಕಲಾರಂಭಿಸಿದ. ಎಲ್ಲಾ ಎಲ್ಲೆಗಳನ್ನು ಮೀರಿ ಲೋಕದೊಳಿತಿಗೆ ಸ್ಪೃಷ್ಯ ಯಾವುದೋ ಅವುಗಳ ಸೃಷ್ಟಿಯಲ್ಲಿ ತಲ್ಲೀನನಾದ.
ಹಳ್ಳಿಗಳಲ್ಲಿನ ಹೊಸ ವರ್ಷದಾಚರಣೆಯ ಕುರಿತು ಪ್ರಕಾಶ್‌ ಪೊನ್ನಾಚಿ ಬರಹ ನಿಮ್ಮ ಓದಿಗೆ

Read More

ಬೇಸಿಗೆ ರಜೆಯೆಂದರೆ …: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದ ಬೇಸಿಗೆಯ ಕಡುಬಿಸಿಯನ್ನು ತಪ್ಪಿಸಿಕೊಳ್ಳಲು ಕೆಲವರು ತಂಪು ಪ್ರದೇಶಗಳನ್ನು ಆಯ್ದುಕೊಳ್ಳುತ್ತಾರೆ. ಆದರೆ ಮುಂಚಿತವಾಗಿಯೇ ಬೇಸಿಗೆಯ ರಜಾದಿನಗಳನ್ನು ಗಮನದಲ್ಲಿಟ್ಟುಕೊಂಡೇ ಅನೇಕ ಆಸ್ಟ್ರೇಲಿಯನ್ ಸಂಸ್ಥೆಗಳು, ಸರಕಾರದ ಪ್ರವಾಸೀ ಇಲಾಖೆಗಳು ದೇಶದ ಉದ್ದಗಲಕ್ಕೂ ಹಾಸಿ ಹರಡಿರುವ ನೂರಾರು ಪ್ರವಾಸಸ್ಥಳಗಳ ಬಗ್ಗೆ ಆಕರ್ಷಕ ಜಾಹಿರಾತುಗಳನ್ನು ಕೊಡುತ್ತಾ, ಹಲವಾರು ತರಹದ ರಿಯಾಯ್ತಿಗಳು, ಸೌಲಭ್ಯಗಳ ಆಮಿಷವೊಡ್ಡುತ್ತಾರೆ. ಇವು ಮಧ್ಯಮ ವರಮಾನದ ಕುಟುಂಬಗಳನ್ನು ಕೈಬೀಸಿ ಕರೆಯುತ್ತವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ